ಕುವೆಂಪು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ-ಅಧ್ಯಾಪಕ ಜೆ.ಪಿ.ಉಪಾಧ್ಯೆ

‘ಮನುಷ್ಯ ಜಾತಿ ತಾನೊಂದು ವಲಂ’ ಎಂದು‌ ಆದಿಕವಿ ಪಂಪನ ಆಶಯವನ್ನು ಒಳಗೊಂಡ ವಿಶ್ವಮಾನವ ಸಂದೇಶವನ್ನು ಕುವೆಂಪು ಹೇಳಿದ್ದಾರೆ ಎಂದು ಜವಾಹರ್ ನವೋದಯ ವಿದ್ಯಾಲಯದ ಕನ್ನಡ ಅಧ್ಯಾಪಕ  ಜೆ.ಪಿ.ಉಪಾಧ್ಯೆ ತಿಳಿಸಿದರು.

ದೊಡ್ಡಬಳ್ಳಾಪುರ ಜವಾಹರ್ ನವೋದಯ ವಿದ್ಯಾಲಯದಲ್ಲಿ ನಡೆದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.‌

ಕುವೆಂಪು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ.  ಮಾನವ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಾರೆ.  ಪ್ರತಿಯೊಬ್ಬರು ಕುವೆಂಪು ಅವರು ಹೇಳಿರುವ ವಿಶ್ವಮಾನವ ಸಂದೇಶದ ತತ್ವಾದರ್ಶ ಮೈಗೊಡಿಸಿಕೊಂಡರೆ ಸಮಾಜದಲ್ಲಿ ಸಾಮರಸ್ಯ ನೆಲಸಲಿದೆ ಎಂದರು.

ವಿಜ್ಞಾನ ವಿಭಾಗದ ಉಪನ್ಯಾಸಕ ಅಶೋಕ ಪುಜಾರಿ ಮಾತನಾಡಿ, ಕುವೆಂಪು ಅವರು ತಮ್ಮ ಸಾಹಿತ್ಯ ಮತ್ತು ವಿಚಾರಗಳಲ್ಲಿ ವೈಚಾರಿಕ ಪ್ರಜ್ಞೆಯ ಮಹತ್ವಕ್ಕೆ ಹೆಚ್ಚು ಆದ್ಯತೆ ನೀಡಿದರು. ಜಾತಿ, ಮತ, ಪಂಥಕ್ಕೆ ಆಧ್ಯತೆ ನೀಡದೇ ಮಾನವೀಯ ಧರ್ಮ ಮೇಲು ಎಂದು ಸಾರಿದ್ದರು. ಕುವೆಂಪು ತಮ್ಮ ಕಾಲಮಾನದ ಎಲ್ಲ ಮೌಲ್ಯಗಳನ್ನು ವೈಚಾರಿಕತೆಯ ಪ್ರಖರ ಬೆಳಕಿನಲ್ಲಿ ಕಂಡವರು.  ವೈಚಾರಿಕತೆಯನ್ನು  ಕುವೆಂಪು ತಮ್ಮ  ಬರಹ ಮತ್ತು ಬದುಕುಗಳಲ್ಲಿ ಅಳವಡಿಸಿಕೊಂಡವರು ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಚೈತನ್ಯ ಕುವೆಂಪುರವರ ಜೀವನ ಪರಿಚಯ ಮಾಡಿಕೊಟ್ಟಳು. ಅಭಿರಾಮ, ಅಮಿತ್, ನಿವೇದಿತಾ ಮೊದಲಾದವರು ಕುವೆಂಪು ಗೀತೆಗಳನ್ನು ಹಾಡಿದರು. ಜವಾಹರ್ ನವೋದಯ ವಿದ್ಯಾಲಯದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

20 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

2 days ago