‘ಮನುಷ್ಯ ಜಾತಿ ತಾನೊಂದು ವಲಂ’ ಎಂದು ಆದಿಕವಿ ಪಂಪನ ಆಶಯವನ್ನು ಒಳಗೊಂಡ ವಿಶ್ವಮಾನವ ಸಂದೇಶವನ್ನು ಕುವೆಂಪು ಹೇಳಿದ್ದಾರೆ ಎಂದು ಜವಾಹರ್ ನವೋದಯ ವಿದ್ಯಾಲಯದ ಕನ್ನಡ ಅಧ್ಯಾಪಕ ಜೆ.ಪಿ.ಉಪಾಧ್ಯೆ ತಿಳಿಸಿದರು.
ದೊಡ್ಡಬಳ್ಳಾಪುರ ಜವಾಹರ್ ನವೋದಯ ವಿದ್ಯಾಲಯದಲ್ಲಿ ನಡೆದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕುವೆಂಪು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಮಾನವ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಾರೆ. ಪ್ರತಿಯೊಬ್ಬರು ಕುವೆಂಪು ಅವರು ಹೇಳಿರುವ ವಿಶ್ವಮಾನವ ಸಂದೇಶದ ತತ್ವಾದರ್ಶ ಮೈಗೊಡಿಸಿಕೊಂಡರೆ ಸಮಾಜದಲ್ಲಿ ಸಾಮರಸ್ಯ ನೆಲಸಲಿದೆ ಎಂದರು.
ವಿಜ್ಞಾನ ವಿಭಾಗದ ಉಪನ್ಯಾಸಕ ಅಶೋಕ ಪುಜಾರಿ ಮಾತನಾಡಿ, ಕುವೆಂಪು ಅವರು ತಮ್ಮ ಸಾಹಿತ್ಯ ಮತ್ತು ವಿಚಾರಗಳಲ್ಲಿ ವೈಚಾರಿಕ ಪ್ರಜ್ಞೆಯ ಮಹತ್ವಕ್ಕೆ ಹೆಚ್ಚು ಆದ್ಯತೆ ನೀಡಿದರು. ಜಾತಿ, ಮತ, ಪಂಥಕ್ಕೆ ಆಧ್ಯತೆ ನೀಡದೇ ಮಾನವೀಯ ಧರ್ಮ ಮೇಲು ಎಂದು ಸಾರಿದ್ದರು. ಕುವೆಂಪು ತಮ್ಮ ಕಾಲಮಾನದ ಎಲ್ಲ ಮೌಲ್ಯಗಳನ್ನು ವೈಚಾರಿಕತೆಯ ಪ್ರಖರ ಬೆಳಕಿನಲ್ಲಿ ಕಂಡವರು. ವೈಚಾರಿಕತೆಯನ್ನು ಕುವೆಂಪು ತಮ್ಮ ಬರಹ ಮತ್ತು ಬದುಕುಗಳಲ್ಲಿ ಅಳವಡಿಸಿಕೊಂಡವರು ಎಂದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಚೈತನ್ಯ ಕುವೆಂಪುರವರ ಜೀವನ ಪರಿಚಯ ಮಾಡಿಕೊಟ್ಟಳು. ಅಭಿರಾಮ, ಅಮಿತ್, ನಿವೇದಿತಾ ಮೊದಲಾದವರು ಕುವೆಂಪು ಗೀತೆಗಳನ್ನು ಹಾಡಿದರು. ಜವಾಹರ್ ನವೋದಯ ವಿದ್ಯಾಲಯದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…
ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…
ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…