‘ಮನುಷ್ಯ ಜಾತಿ ತಾನೊಂದು ವಲಂ’ ಎಂದು ಆದಿಕವಿ ಪಂಪನ ಆಶಯವನ್ನು ಒಳಗೊಂಡ ವಿಶ್ವಮಾನವ ಸಂದೇಶವನ್ನು ಕುವೆಂಪು ಹೇಳಿದ್ದಾರೆ ಎಂದು ಜವಾಹರ್ ನವೋದಯ ವಿದ್ಯಾಲಯದ ಕನ್ನಡ ಅಧ್ಯಾಪಕ ಜೆ.ಪಿ.ಉಪಾಧ್ಯೆ ತಿಳಿಸಿದರು.
ದೊಡ್ಡಬಳ್ಳಾಪುರ ಜವಾಹರ್ ನವೋದಯ ವಿದ್ಯಾಲಯದಲ್ಲಿ ನಡೆದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕುವೆಂಪು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಮಾನವ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಾರೆ. ಪ್ರತಿಯೊಬ್ಬರು ಕುವೆಂಪು ಅವರು ಹೇಳಿರುವ ವಿಶ್ವಮಾನವ ಸಂದೇಶದ ತತ್ವಾದರ್ಶ ಮೈಗೊಡಿಸಿಕೊಂಡರೆ ಸಮಾಜದಲ್ಲಿ ಸಾಮರಸ್ಯ ನೆಲಸಲಿದೆ ಎಂದರು.
ವಿಜ್ಞಾನ ವಿಭಾಗದ ಉಪನ್ಯಾಸಕ ಅಶೋಕ ಪುಜಾರಿ ಮಾತನಾಡಿ, ಕುವೆಂಪು ಅವರು ತಮ್ಮ ಸಾಹಿತ್ಯ ಮತ್ತು ವಿಚಾರಗಳಲ್ಲಿ ವೈಚಾರಿಕ ಪ್ರಜ್ಞೆಯ ಮಹತ್ವಕ್ಕೆ ಹೆಚ್ಚು ಆದ್ಯತೆ ನೀಡಿದರು. ಜಾತಿ, ಮತ, ಪಂಥಕ್ಕೆ ಆಧ್ಯತೆ ನೀಡದೇ ಮಾನವೀಯ ಧರ್ಮ ಮೇಲು ಎಂದು ಸಾರಿದ್ದರು. ಕುವೆಂಪು ತಮ್ಮ ಕಾಲಮಾನದ ಎಲ್ಲ ಮೌಲ್ಯಗಳನ್ನು ವೈಚಾರಿಕತೆಯ ಪ್ರಖರ ಬೆಳಕಿನಲ್ಲಿ ಕಂಡವರು. ವೈಚಾರಿಕತೆಯನ್ನು ಕುವೆಂಪು ತಮ್ಮ ಬರಹ ಮತ್ತು ಬದುಕುಗಳಲ್ಲಿ ಅಳವಡಿಸಿಕೊಂಡವರು ಎಂದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಚೈತನ್ಯ ಕುವೆಂಪುರವರ ಜೀವನ ಪರಿಚಯ ಮಾಡಿಕೊಟ್ಟಳು. ಅಭಿರಾಮ, ಅಮಿತ್, ನಿವೇದಿತಾ ಮೊದಲಾದವರು ಕುವೆಂಪು ಗೀತೆಗಳನ್ನು ಹಾಡಿದರು. ಜವಾಹರ್ ನವೋದಯ ವಿದ್ಯಾಲಯದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…