ಕುವೆಂಪು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ-ಅಧ್ಯಾಪಕ ಜೆ.ಪಿ.ಉಪಾಧ್ಯೆ

‘ಮನುಷ್ಯ ಜಾತಿ ತಾನೊಂದು ವಲಂ’ ಎಂದು‌ ಆದಿಕವಿ ಪಂಪನ ಆಶಯವನ್ನು ಒಳಗೊಂಡ ವಿಶ್ವಮಾನವ ಸಂದೇಶವನ್ನು ಕುವೆಂಪು ಹೇಳಿದ್ದಾರೆ ಎಂದು ಜವಾಹರ್ ನವೋದಯ ವಿದ್ಯಾಲಯದ ಕನ್ನಡ ಅಧ್ಯಾಪಕ  ಜೆ.ಪಿ.ಉಪಾಧ್ಯೆ ತಿಳಿಸಿದರು.

ದೊಡ್ಡಬಳ್ಳಾಪುರ ಜವಾಹರ್ ನವೋದಯ ವಿದ್ಯಾಲಯದಲ್ಲಿ ನಡೆದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.‌

ಕುವೆಂಪು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ.  ಮಾನವ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಾರೆ.  ಪ್ರತಿಯೊಬ್ಬರು ಕುವೆಂಪು ಅವರು ಹೇಳಿರುವ ವಿಶ್ವಮಾನವ ಸಂದೇಶದ ತತ್ವಾದರ್ಶ ಮೈಗೊಡಿಸಿಕೊಂಡರೆ ಸಮಾಜದಲ್ಲಿ ಸಾಮರಸ್ಯ ನೆಲಸಲಿದೆ ಎಂದರು.

ವಿಜ್ಞಾನ ವಿಭಾಗದ ಉಪನ್ಯಾಸಕ ಅಶೋಕ ಪುಜಾರಿ ಮಾತನಾಡಿ, ಕುವೆಂಪು ಅವರು ತಮ್ಮ ಸಾಹಿತ್ಯ ಮತ್ತು ವಿಚಾರಗಳಲ್ಲಿ ವೈಚಾರಿಕ ಪ್ರಜ್ಞೆಯ ಮಹತ್ವಕ್ಕೆ ಹೆಚ್ಚು ಆದ್ಯತೆ ನೀಡಿದರು. ಜಾತಿ, ಮತ, ಪಂಥಕ್ಕೆ ಆಧ್ಯತೆ ನೀಡದೇ ಮಾನವೀಯ ಧರ್ಮ ಮೇಲು ಎಂದು ಸಾರಿದ್ದರು. ಕುವೆಂಪು ತಮ್ಮ ಕಾಲಮಾನದ ಎಲ್ಲ ಮೌಲ್ಯಗಳನ್ನು ವೈಚಾರಿಕತೆಯ ಪ್ರಖರ ಬೆಳಕಿನಲ್ಲಿ ಕಂಡವರು.  ವೈಚಾರಿಕತೆಯನ್ನು  ಕುವೆಂಪು ತಮ್ಮ  ಬರಹ ಮತ್ತು ಬದುಕುಗಳಲ್ಲಿ ಅಳವಡಿಸಿಕೊಂಡವರು ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಚೈತನ್ಯ ಕುವೆಂಪುರವರ ಜೀವನ ಪರಿಚಯ ಮಾಡಿಕೊಟ್ಟಳು. ಅಭಿರಾಮ, ಅಮಿತ್, ನಿವೇದಿತಾ ಮೊದಲಾದವರು ಕುವೆಂಪು ಗೀತೆಗಳನ್ನು ಹಾಡಿದರು. ಜವಾಹರ್ ನವೋದಯ ವಿದ್ಯಾಲಯದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

5 hours ago

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಕ್ಷಣಕ್ಕೆ ‌ಪೂರಕ- ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ‌ಪೂರಕವಾಗಿದೆ. ಇದನ್ನು ‌ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ನ…

5 hours ago

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

11 hours ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

20 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

1 day ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

1 day ago