ಕುವೆಂಪು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ-ಅಧ್ಯಾಪಕ ಜೆ.ಪಿ.ಉಪಾಧ್ಯೆ

‘ಮನುಷ್ಯ ಜಾತಿ ತಾನೊಂದು ವಲಂ’ ಎಂದು‌ ಆದಿಕವಿ ಪಂಪನ ಆಶಯವನ್ನು ಒಳಗೊಂಡ ವಿಶ್ವಮಾನವ ಸಂದೇಶವನ್ನು ಕುವೆಂಪು ಹೇಳಿದ್ದಾರೆ ಎಂದು ಜವಾಹರ್ ನವೋದಯ ವಿದ್ಯಾಲಯದ ಕನ್ನಡ ಅಧ್ಯಾಪಕ  ಜೆ.ಪಿ.ಉಪಾಧ್ಯೆ ತಿಳಿಸಿದರು.

ದೊಡ್ಡಬಳ್ಳಾಪುರ ಜವಾಹರ್ ನವೋದಯ ವಿದ್ಯಾಲಯದಲ್ಲಿ ನಡೆದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.‌

ಕುವೆಂಪು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ.  ಮಾನವ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಾರೆ.  ಪ್ರತಿಯೊಬ್ಬರು ಕುವೆಂಪು ಅವರು ಹೇಳಿರುವ ವಿಶ್ವಮಾನವ ಸಂದೇಶದ ತತ್ವಾದರ್ಶ ಮೈಗೊಡಿಸಿಕೊಂಡರೆ ಸಮಾಜದಲ್ಲಿ ಸಾಮರಸ್ಯ ನೆಲಸಲಿದೆ ಎಂದರು.

ವಿಜ್ಞಾನ ವಿಭಾಗದ ಉಪನ್ಯಾಸಕ ಅಶೋಕ ಪುಜಾರಿ ಮಾತನಾಡಿ, ಕುವೆಂಪು ಅವರು ತಮ್ಮ ಸಾಹಿತ್ಯ ಮತ್ತು ವಿಚಾರಗಳಲ್ಲಿ ವೈಚಾರಿಕ ಪ್ರಜ್ಞೆಯ ಮಹತ್ವಕ್ಕೆ ಹೆಚ್ಚು ಆದ್ಯತೆ ನೀಡಿದರು. ಜಾತಿ, ಮತ, ಪಂಥಕ್ಕೆ ಆಧ್ಯತೆ ನೀಡದೇ ಮಾನವೀಯ ಧರ್ಮ ಮೇಲು ಎಂದು ಸಾರಿದ್ದರು. ಕುವೆಂಪು ತಮ್ಮ ಕಾಲಮಾನದ ಎಲ್ಲ ಮೌಲ್ಯಗಳನ್ನು ವೈಚಾರಿಕತೆಯ ಪ್ರಖರ ಬೆಳಕಿನಲ್ಲಿ ಕಂಡವರು.  ವೈಚಾರಿಕತೆಯನ್ನು  ಕುವೆಂಪು ತಮ್ಮ  ಬರಹ ಮತ್ತು ಬದುಕುಗಳಲ್ಲಿ ಅಳವಡಿಸಿಕೊಂಡವರು ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಚೈತನ್ಯ ಕುವೆಂಪುರವರ ಜೀವನ ಪರಿಚಯ ಮಾಡಿಕೊಟ್ಟಳು. ಅಭಿರಾಮ, ಅಮಿತ್, ನಿವೇದಿತಾ ಮೊದಲಾದವರು ಕುವೆಂಪು ಗೀತೆಗಳನ್ನು ಹಾಡಿದರು. ಜವಾಹರ್ ನವೋದಯ ವಿದ್ಯಾಲಯದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

1 hour ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

2 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

8 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

20 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

20 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

21 hours ago