ಕುವೆಂಪು ಕರ್ನಾಟಕ ಮತ್ತು ಕನ್ನಡ ಸಾಹಿತ್ಯದ ಅಸ್ಮಿತೆ ಆಗಿದ್ದಾರೆ. ಕನ್ನಡ ಭಾಷೆಯನ್ನು ಬಳಸುವ ಮೂಲಕ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಬೆಳೆಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಲವಂತರಾವ್ ಪಾಟೀಲ್ ತಿಳಿಸಿದರು.
ಅವರು ದೊಡ್ಡಬಳ್ಳಾಪುರ ನಗರದ ಅರಳುಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸಾಹಿತ್ಯ ಓದಿನಿಂದ ವಿವೇಚನೆ ಬೆಳೆಯುತ್ತದೆ ಮತ್ತು ಹಸನಾಗುತ್ತದೆ. ಯಾವುದೇ ವಿಚಾರವಿರಲಿ ಅದನ್ನು ಒರೆಗಲ್ಲಿಗೆ ಹಚ್ಚಬೇಕು. ಯಾರೋ ಹೇಳಿದ್ದನ್ನು ಸುಮ್ಮನೆ ಕೇಳಬಾರದು. ಅಂಧಾನುಕರಣೆ ಎಂದಿಗೂ ಒಳಿತಲ್ಲ.ಸಾಹಿತ್ಯ, ವಿಜ್ಞಾನ ಮತ್ತು ಸಂಸ್ಕೃತಿ ವಿಚಾರಗಳು ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಆಗಲಿವೆ ಎಂದರು..
ಜನಪ್ರಿಯ ವಿಜ್ಞಾನ ಸಾಹಿತಿ ಡಾ.ಎ.ಓ.ಆವಲಮೂರ್ತಿ ಮತನಾಡಿ, ಸಾಹಿತ್ಯ ಹೇಗೆ ಬದುಕಬೇಕು ಎಂಬುದನ್ನು ಮತ್ತು ವಿಜ್ಞಾನ ಹೇಗೆ ಯೋಚಿಸಬೇಕು ಎಂಬುದನ್ನು ಕಲಿಸುತ್ತದೆ. ಕನ್ನಡ ಅಭಿಮಾನ ನವಂಬರ್ ತಿಂಗಳಿಗಷ್ಟೇ ಸೀಮಿತ ಆಗಬಾರದು. ಕನ್ನಡ ಪತ್ರಿಕೆ, ಪುಸ್ತಕಗಳ ಓದು ಕನ್ನಡ ಅಭಿವೃದ್ಧಿಯ ಸೂಚ್ಯಂಕವನ್ನು ತೋರಿಸಿತ್ತವೆ ಎಂದರು.
ಕನ್ನಡಪರ ಹಿರಿಯ ಹೋರಾಟಗಾರ ತ.ನ.ಪ್ರಭುದೇವ್ ಮಾತನಾಡಿ, ನೂರು ಭಾಷೆಗಳು ನಾಲಿಗೆ ಮೇಲೆ ಇದ್ದರೂ, ಮನದಾಳದ ಭಾಷೆ ಕನ್ನಡವಾಗಿರಲಿ. ಗೋಕಾಕ್ ಚಳುವಳಿಗೆ ಡಾ.ರಾಜ್ ಕುಮಾರ್ ಜೀವತುಂಬಿದರು. ಗೋಕಾಕ್ ವರದಿ ಜಾರಿಯಿಂದ ಕರ್ನಾಟಕದಲ್ಲಿ ಕನ್ನಡ ಆಡಳಿತ ಭಾಷೆಯಾಯಿತು ಎಂದರು.
ವೈದ್ಯ ಲೇಖಕಿ ಡಾ.ಇಂದಿರಾ ಮಾತನಾಡಿ, ಹದಿಹರೆಯದಲ್ಲಿ ಆಗಾಧವಾದ ಶಕ್ತಿಯಿರುತ್ತದೆ. ಆ ಶಕ್ತಿ ದೇಹದಲ್ಲಿ ಮತ್ತು ಮಿದುಳಿನಲ್ಲಿ ಇರುತ್ತದೆ. ಹದಿಹರೆಯದವರಿಗೆ ಬೆಳೆಯುವ ವಯಸ್ಸಿನಲ್ಲಿ ಪೌಷ್ಟಿಕಾಹಾರ ಪದ್ದತಿ ಬಗ್ಗೆ ಅರಿವು ಇರಬೇಕು ಎಂದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ ಸದಸ್ಯ ಕೆ.ಮಹಾಲಿಂಗಯ್ಯ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಕನ್ನಡ ಜಾಗೃತ ಪರಿಷತ್ತು ಕಾರ್ಯದರ್ಶಿ ಡಿ.ಪಿ.ಆಂಜನೇಯ, ಜವಾಹರ ನವೋದಯ ವಿದ್ಯಾಲಯ ನಿವೃತ್ತ ಶಿಕ್ಷಕ ವಿ.ಎಸ್.ಹೆಗಡೆ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಎ.ಜಯರಾಮ್, ಪ್ರತಿನಿಧಿ ಸಫೀರ್, ಸಹಶಿಕ್ಷಕರುಗಳಾದ ಡಾ.ಮುನಿರಾಜು, ಎಚ್.ಎನ್.ಪ್ರಕಾಶ್ ಮುಂತಾದವರು ಭಾಗವಹಿಸಿದ್ದರು.
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್ನ ಮೆಡ್ಚಲ್ ಪ್ರದೇಶದಲ್ಲಿ…