ಕುವೆಂಪು ಕರ್ನಾಟಕ ಮತ್ತು ಕನ್ನಡ ಸಾಹಿತ್ಯದ ಅಸ್ಮಿತೆ- ಬಲವಂತರಾವ್ ಪಾಟೀಲ್

ಕುವೆಂಪು ಕರ್ನಾಟಕ ಮತ್ತು ಕನ್ನಡ ಸಾಹಿತ್ಯದ ಅಸ್ಮಿತೆ ಆಗಿದ್ದಾರೆ. ಕನ್ನಡ ಭಾಷೆಯನ್ನು ಬಳಸುವ ಮೂಲಕ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಬೆಳೆಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ  ಬಲವಂತರಾವ್ ಪಾಟೀಲ್ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ನಗರದ ಅರಳುಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸಾಹಿತ್ಯ ಓದಿನಿಂದ ವಿವೇಚನೆ ಬೆಳೆಯುತ್ತದೆ‌ ಮತ್ತು ಹಸನಾಗುತ್ತದೆ. ಯಾವುದೇ ವಿಚಾರವಿರಲಿ ಅದನ್ನು ಒರೆಗಲ್ಲಿಗೆ ಹಚ್ಚಬೇಕು.‌ ಯಾರೋ ಹೇಳಿದ್ದನ್ನು ಸುಮ್ಮನೆ ಕೇಳಬಾರದು. ಅಂಧಾನುಕರಣೆ ಎಂದಿಗೂ ಒಳಿತಲ್ಲ.ಸಾಹಿತ್ಯ, ವಿಜ್ಞಾನ ಮತ್ತು ಸಂಸ್ಕೃತಿ ವಿಚಾರಗಳು ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಆಗಲಿವೆ ಎಂದರು..

ಜನಪ್ರಿಯ ವಿಜ್ಞಾನ ಸಾಹಿತಿ ಡಾ.ಎ.ಓ.ಆವಲಮೂರ್ತಿ ಮತನಾಡಿ, ಸಾಹಿತ್ಯ ಹೇಗೆ ಬದುಕಬೇಕು ಎಂಬುದನ್ನು ಮತ್ತು ವಿಜ್ಞಾನ ಹೇಗೆ ಯೋಚಿಸಬೇಕು‌ ಎಂಬುದನ್ನು ಕಲಿಸುತ್ತದೆ. ಕನ್ನಡ ಅಭಿಮಾನ ನವಂಬರ್ ತಿಂಗಳಿಗಷ್ಟೇ ಸೀಮಿತ ಆಗಬಾರದು. ಕನ್ನಡ ಪತ್ರಿಕೆ‌, ಪುಸ್ತಕಗಳ ಓದು ಕನ್ನಡ ಅಭಿವೃದ್ಧಿಯ ಸೂಚ್ಯಂಕವನ್ನು ತೋರಿಸಿತ್ತವೆ ಎಂದರು.

ಕನ್ನಡಪರ ಹಿರಿಯ ಹೋರಾಟಗಾರ ತ.ನ.ಪ್ರಭುದೇವ್ ಮಾತನಾಡಿ, ನೂರು ಭಾಷೆಗಳು ನಾಲಿಗೆ ಮೇಲೆ ಇದ್ದರೂ, ಮನದಾಳದ ಭಾಷೆ ಕನ್ನಡವಾಗಿರಲಿ. ಗೋಕಾಕ್ ಚಳುವಳಿಗೆ ಡಾ.ರಾಜ್ ಕುಮಾರ್ ಜೀವತುಂಬಿದರು. ಗೋಕಾಕ್ ವರದಿ ಜಾರಿಯಿಂದ ಕರ್ನಾಟಕದಲ್ಲಿ ಕನ್ನಡ ಆಡಳಿತ ಭಾಷೆಯಾಯಿತು ಎಂದರು.

ವೈದ್ಯ ಲೇಖಕಿ ಡಾ.ಇಂದಿರಾ ಮಾತನಾಡಿ, ಹದಿಹರೆಯದಲ್ಲಿ ಆಗಾಧವಾದ ಶಕ್ತಿಯಿರುತ್ತದೆ. ಆ ಶಕ್ತಿ ದೇಹದಲ್ಲಿ ಮತ್ತು ಮಿದುಳಿನಲ್ಲಿ ಇರುತ್ತದೆ. ಹದಿಹರೆಯದವರಿಗೆ ಬೆಳೆಯುವ ವಯಸ್ಸಿನಲ್ಲಿ ಪೌಷ್ಟಿಕಾಹಾರ ಪದ್ದತಿ ಬಗ್ಗೆ ಅರಿವು ಇರಬೇಕು ಎಂದರು.

ಕಾರ್ಯಕ್ರಮದಲ್ಲಿ  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ  ಸಹಾಯಕ ನಿರ್ದೇಶಕ ರವಿಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ ಸದಸ್ಯ ಕೆ.ಮಹಾಲಿಂಗಯ್ಯ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಕನ್ನಡ ಜಾಗೃತ ಪರಿಷತ್ತು ಕಾರ್ಯದರ್ಶಿ ಡಿ.ಪಿ.ಆಂಜನೇಯ, ಜವಾಹರ ನವೋದಯ ವಿದ್ಯಾಲಯ ನಿವೃತ್ತ ಶಿಕ್ಷಕ ವಿ.ಎಸ್.ಹೆಗಡೆ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಎ.ಜಯರಾಮ್, ಪ್ರತಿನಿಧಿ ಸಫೀರ್, ಸಹಶಿಕ್ಷಕರುಗಳಾದ ಡಾ.ಮುನಿರಾಜು, ಎಚ್.ಎನ್.ಪ್ರಕಾಶ್ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

55 minutes ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

10 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

11 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

23 hours ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

23 hours ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

23 hours ago