ಕುವೆಂಪು ಕರ್ನಾಟಕ ಮತ್ತು ಕನ್ನಡ ಸಾಹಿತ್ಯದ ಅಸ್ಮಿತೆ- ಬಲವಂತರಾವ್ ಪಾಟೀಲ್

ಕುವೆಂಪು ಕರ್ನಾಟಕ ಮತ್ತು ಕನ್ನಡ ಸಾಹಿತ್ಯದ ಅಸ್ಮಿತೆ ಆಗಿದ್ದಾರೆ. ಕನ್ನಡ ಭಾಷೆಯನ್ನು ಬಳಸುವ ಮೂಲಕ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಬೆಳೆಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ  ಬಲವಂತರಾವ್ ಪಾಟೀಲ್ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ನಗರದ ಅರಳುಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸಾಹಿತ್ಯ ಓದಿನಿಂದ ವಿವೇಚನೆ ಬೆಳೆಯುತ್ತದೆ‌ ಮತ್ತು ಹಸನಾಗುತ್ತದೆ. ಯಾವುದೇ ವಿಚಾರವಿರಲಿ ಅದನ್ನು ಒರೆಗಲ್ಲಿಗೆ ಹಚ್ಚಬೇಕು.‌ ಯಾರೋ ಹೇಳಿದ್ದನ್ನು ಸುಮ್ಮನೆ ಕೇಳಬಾರದು. ಅಂಧಾನುಕರಣೆ ಎಂದಿಗೂ ಒಳಿತಲ್ಲ.ಸಾಹಿತ್ಯ, ವಿಜ್ಞಾನ ಮತ್ತು ಸಂಸ್ಕೃತಿ ವಿಚಾರಗಳು ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಆಗಲಿವೆ ಎಂದರು..

ಜನಪ್ರಿಯ ವಿಜ್ಞಾನ ಸಾಹಿತಿ ಡಾ.ಎ.ಓ.ಆವಲಮೂರ್ತಿ ಮತನಾಡಿ, ಸಾಹಿತ್ಯ ಹೇಗೆ ಬದುಕಬೇಕು ಎಂಬುದನ್ನು ಮತ್ತು ವಿಜ್ಞಾನ ಹೇಗೆ ಯೋಚಿಸಬೇಕು‌ ಎಂಬುದನ್ನು ಕಲಿಸುತ್ತದೆ. ಕನ್ನಡ ಅಭಿಮಾನ ನವಂಬರ್ ತಿಂಗಳಿಗಷ್ಟೇ ಸೀಮಿತ ಆಗಬಾರದು. ಕನ್ನಡ ಪತ್ರಿಕೆ‌, ಪುಸ್ತಕಗಳ ಓದು ಕನ್ನಡ ಅಭಿವೃದ್ಧಿಯ ಸೂಚ್ಯಂಕವನ್ನು ತೋರಿಸಿತ್ತವೆ ಎಂದರು.

ಕನ್ನಡಪರ ಹಿರಿಯ ಹೋರಾಟಗಾರ ತ.ನ.ಪ್ರಭುದೇವ್ ಮಾತನಾಡಿ, ನೂರು ಭಾಷೆಗಳು ನಾಲಿಗೆ ಮೇಲೆ ಇದ್ದರೂ, ಮನದಾಳದ ಭಾಷೆ ಕನ್ನಡವಾಗಿರಲಿ. ಗೋಕಾಕ್ ಚಳುವಳಿಗೆ ಡಾ.ರಾಜ್ ಕುಮಾರ್ ಜೀವತುಂಬಿದರು. ಗೋಕಾಕ್ ವರದಿ ಜಾರಿಯಿಂದ ಕರ್ನಾಟಕದಲ್ಲಿ ಕನ್ನಡ ಆಡಳಿತ ಭಾಷೆಯಾಯಿತು ಎಂದರು.

ವೈದ್ಯ ಲೇಖಕಿ ಡಾ.ಇಂದಿರಾ ಮಾತನಾಡಿ, ಹದಿಹರೆಯದಲ್ಲಿ ಆಗಾಧವಾದ ಶಕ್ತಿಯಿರುತ್ತದೆ. ಆ ಶಕ್ತಿ ದೇಹದಲ್ಲಿ ಮತ್ತು ಮಿದುಳಿನಲ್ಲಿ ಇರುತ್ತದೆ. ಹದಿಹರೆಯದವರಿಗೆ ಬೆಳೆಯುವ ವಯಸ್ಸಿನಲ್ಲಿ ಪೌಷ್ಟಿಕಾಹಾರ ಪದ್ದತಿ ಬಗ್ಗೆ ಅರಿವು ಇರಬೇಕು ಎಂದರು.

ಕಾರ್ಯಕ್ರಮದಲ್ಲಿ  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ  ಸಹಾಯಕ ನಿರ್ದೇಶಕ ರವಿಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ ಸದಸ್ಯ ಕೆ.ಮಹಾಲಿಂಗಯ್ಯ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಕನ್ನಡ ಜಾಗೃತ ಪರಿಷತ್ತು ಕಾರ್ಯದರ್ಶಿ ಡಿ.ಪಿ.ಆಂಜನೇಯ, ಜವಾಹರ ನವೋದಯ ವಿದ್ಯಾಲಯ ನಿವೃತ್ತ ಶಿಕ್ಷಕ ವಿ.ಎಸ್.ಹೆಗಡೆ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಎ.ಜಯರಾಮ್, ಪ್ರತಿನಿಧಿ ಸಫೀರ್, ಸಹಶಿಕ್ಷಕರುಗಳಾದ ಡಾ.ಮುನಿರಾಜು, ಎಚ್.ಎನ್.ಪ್ರಕಾಶ್ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

9 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

9 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

20 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

20 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

23 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

1 day ago