ಕುವೆಂಪು ಕರ್ನಾಟಕ ಮತ್ತು ಕನ್ನಡ ಸಾಹಿತ್ಯದ ಅಸ್ಮಿತೆ- ಬಲವಂತರಾವ್ ಪಾಟೀಲ್

ಕುವೆಂಪು ಕರ್ನಾಟಕ ಮತ್ತು ಕನ್ನಡ ಸಾಹಿತ್ಯದ ಅಸ್ಮಿತೆ ಆಗಿದ್ದಾರೆ. ಕನ್ನಡ ಭಾಷೆಯನ್ನು ಬಳಸುವ ಮೂಲಕ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಬೆಳೆಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ  ಬಲವಂತರಾವ್ ಪಾಟೀಲ್ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ನಗರದ ಅರಳುಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸಾಹಿತ್ಯ ಓದಿನಿಂದ ವಿವೇಚನೆ ಬೆಳೆಯುತ್ತದೆ‌ ಮತ್ತು ಹಸನಾಗುತ್ತದೆ. ಯಾವುದೇ ವಿಚಾರವಿರಲಿ ಅದನ್ನು ಒರೆಗಲ್ಲಿಗೆ ಹಚ್ಚಬೇಕು.‌ ಯಾರೋ ಹೇಳಿದ್ದನ್ನು ಸುಮ್ಮನೆ ಕೇಳಬಾರದು. ಅಂಧಾನುಕರಣೆ ಎಂದಿಗೂ ಒಳಿತಲ್ಲ.ಸಾಹಿತ್ಯ, ವಿಜ್ಞಾನ ಮತ್ತು ಸಂಸ್ಕೃತಿ ವಿಚಾರಗಳು ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಆಗಲಿವೆ ಎಂದರು..

ಜನಪ್ರಿಯ ವಿಜ್ಞಾನ ಸಾಹಿತಿ ಡಾ.ಎ.ಓ.ಆವಲಮೂರ್ತಿ ಮತನಾಡಿ, ಸಾಹಿತ್ಯ ಹೇಗೆ ಬದುಕಬೇಕು ಎಂಬುದನ್ನು ಮತ್ತು ವಿಜ್ಞಾನ ಹೇಗೆ ಯೋಚಿಸಬೇಕು‌ ಎಂಬುದನ್ನು ಕಲಿಸುತ್ತದೆ. ಕನ್ನಡ ಅಭಿಮಾನ ನವಂಬರ್ ತಿಂಗಳಿಗಷ್ಟೇ ಸೀಮಿತ ಆಗಬಾರದು. ಕನ್ನಡ ಪತ್ರಿಕೆ‌, ಪುಸ್ತಕಗಳ ಓದು ಕನ್ನಡ ಅಭಿವೃದ್ಧಿಯ ಸೂಚ್ಯಂಕವನ್ನು ತೋರಿಸಿತ್ತವೆ ಎಂದರು.

ಕನ್ನಡಪರ ಹಿರಿಯ ಹೋರಾಟಗಾರ ತ.ನ.ಪ್ರಭುದೇವ್ ಮಾತನಾಡಿ, ನೂರು ಭಾಷೆಗಳು ನಾಲಿಗೆ ಮೇಲೆ ಇದ್ದರೂ, ಮನದಾಳದ ಭಾಷೆ ಕನ್ನಡವಾಗಿರಲಿ. ಗೋಕಾಕ್ ಚಳುವಳಿಗೆ ಡಾ.ರಾಜ್ ಕುಮಾರ್ ಜೀವತುಂಬಿದರು. ಗೋಕಾಕ್ ವರದಿ ಜಾರಿಯಿಂದ ಕರ್ನಾಟಕದಲ್ಲಿ ಕನ್ನಡ ಆಡಳಿತ ಭಾಷೆಯಾಯಿತು ಎಂದರು.

ವೈದ್ಯ ಲೇಖಕಿ ಡಾ.ಇಂದಿರಾ ಮಾತನಾಡಿ, ಹದಿಹರೆಯದಲ್ಲಿ ಆಗಾಧವಾದ ಶಕ್ತಿಯಿರುತ್ತದೆ. ಆ ಶಕ್ತಿ ದೇಹದಲ್ಲಿ ಮತ್ತು ಮಿದುಳಿನಲ್ಲಿ ಇರುತ್ತದೆ. ಹದಿಹರೆಯದವರಿಗೆ ಬೆಳೆಯುವ ವಯಸ್ಸಿನಲ್ಲಿ ಪೌಷ್ಟಿಕಾಹಾರ ಪದ್ದತಿ ಬಗ್ಗೆ ಅರಿವು ಇರಬೇಕು ಎಂದರು.

ಕಾರ್ಯಕ್ರಮದಲ್ಲಿ  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ  ಸಹಾಯಕ ನಿರ್ದೇಶಕ ರವಿಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ ಸದಸ್ಯ ಕೆ.ಮಹಾಲಿಂಗಯ್ಯ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಕನ್ನಡ ಜಾಗೃತ ಪರಿಷತ್ತು ಕಾರ್ಯದರ್ಶಿ ಡಿ.ಪಿ.ಆಂಜನೇಯ, ಜವಾಹರ ನವೋದಯ ವಿದ್ಯಾಲಯ ನಿವೃತ್ತ ಶಿಕ್ಷಕ ವಿ.ಎಸ್.ಹೆಗಡೆ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಎ.ಜಯರಾಮ್, ಪ್ರತಿನಿಧಿ ಸಫೀರ್, ಸಹಶಿಕ್ಷಕರುಗಳಾದ ಡಾ.ಮುನಿರಾಜು, ಎಚ್.ಎನ್.ಪ್ರಕಾಶ್ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

7 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago