ಕುವೈತ್‌ನ ಮಂಗಾಫ್ ನಲ್ಲಿನ ಕಾರ್ಮಿಕರ ವಸತಿ ಕಟ್ಟಡದಲ್ಲಿ ಬೆಂಕಿ: ಕನಿಷ್ಠ 41 ಮಂದಿ‌ ಸಾವು:30ಕ್ಕೂ ಹೆಚ್ಚು ಜನರಿಗೆ ಗಾಯ

ದಕ್ಷಿಣ ಕುವೈತ್‌ನ ಮಂಗಾಫ್ ನಗರದಲ್ಲಿ ಕಾರ್ಮಿಕರ ವಸತಿ ಕಟ್ಟಡದಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂಡು ಕನಿಷ್ಠ 41 ಜನರು ಸಾವನ್ನಪ್ಪಿದ್ದು, 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

160 ಕಾರ್ಮಿಕರು ವಾಸಿಸುವ ಆರು ಅಂತಸ್ತಿನ ಕಟ್ಟಡದ ಅಡುಗೆಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡವು ಸುಮಾರು 160 ಕಾರ್ಮಿಕರನ್ನು ಹೊಂದಿತ್ತು, ಅವರಲ್ಲಿ ಹೆಚ್ಚಿನವರು ಭಾರತೀಯರು ಎಂದು ವರದಿಯಾಗಿದೆ.

ಅಗ್ನಿ ಶಾಮಕದಳ‌ ಸಿಬ್ಬಂದಿ ಬೆಂಕಿಯನ್ನು ಹತೋಟಿಯಲ್ಲಿಟ್ಟಿದ್ದು, ಇದಕ್ಕೆ ಕಾರಣವೇನು ಎಂದು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಸಹಾಯಕ್ಕಾಗಿ ತುರ್ತು ಸಹಾಯವಾಣಿಯನ್ನು (+965-65505246) ಸ್ಥಾಪಿಸಿದೆ.

ಕುವೈತ್‌ನಲ್ಲಿರುವ ಭಾರತೀಯ ಸಮುದಾಯ

 ಭಾರತೀಯರು ಕುವೈತ್‌ನ ಜನಸಂಖ್ಯೆಯಲ್ಲಿ 21% (1 ಮಿಲಿಯನ್) ಮತ್ತು ಅದರ ಉದ್ಯೋಗಿಗಳಲ್ಲಿ 30% (ಅಂದಾಜು 900,000) ಇದ್ದಾರೆ.  ಕುವೈತ್, ಸರಿಸುಮಾರು 4.2 ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ ದೇಶವು ವಿಶ್ವದ ಆರನೇ ಅತಿದೊಡ್ಡ ತೈಲ ನಿಕ್ಷೇಪಗಳನ್ನು ಹೊಂದಿದೆ. ರಾಷ್ಟ್ರವು ಈ ಹಿಂದೆ ಇದೇ ರೀತಿಯ ಘಟನೆಗಳನ್ನು ಎದುರಿಸಿದೆ, 2022ರಲ್ಲಿ ತೈಲ ಸಂಸ್ಕರಣಾಗಾರದಲ್ಲಿ ಬೆಂಕಿಯು ನಾಲ್ಕು ಸಾವುಗಳಿಗೆ ಕಾರಣವಾಯಿತು.

ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಂತಾಪ

ಕುವೈತ್ ನಗರದಲ್ಲಿ ಸಂಭವಿಸಿದ ಅಗ್ನಿ ಅವಘಡ ದುಃಖಕರವಾಗಿದೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.  ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಸಂತ್ರಸ್ತರಿಗೆ ಸಹಾಯ ಮಾಡಲು ಅಲ್ಲಿನ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದೆ. ಮೃತರ ಆತ್ಮಕ್ಕೆ ಶಾಂತಿ‌ ಸಿಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

10 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

1 day ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago