ಕುಸುಮ್-ಸಿ ಯೋಜನೆ: ನಾಳೆ ಗೌರಿಬಿದನೂರಿನಲ್ಲಿ ಉದ್ಘಾಟನೆ- ಕೃಷಿ ಫೀಡರ್‌ಗಳ ಸೋಲರೈಸೇಷನ್ ಮೂಲಕ ಐಪಿ ಸೆಟ್‌ಗಳಿಗೆ ವಿದ್ಯುತ್ – ಸಚಿವ ಕೆ.ಜೆ.ಜಾರ್ಜ್‌

ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸುವ ಕುಸುಮ್-ಸಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 11 ರಂದು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಕುಸುಮ್- ಸಿ ಯೋಜನೆಯ ಉದ್ಘಾಟನೆ ಕುರಿತ ಕರ್ಟನ್ ರೈಸರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜೂನ್ 11, ಬುಧವಾರ ಬೆಳಗ್ಗೆ 10.30 ಗಂಟೆಗೆ ಗೌರಿಬಿದನೂರಿನ ನೇತಾಜಿ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯವರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಹಾಗೂ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಪಡಿತರ ವಿತರಣೆ ಸಚಿವರಾದ ಪ್ರಲ್ಹಾದ್ ಜೋಶಿ, ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವರಾದ ಶ್ರೀಪಾದ್‌ ಯೆಸ್ಸೋ ನಾಯಕ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೃಷ್ಣ ಬೈರೇಗೌಡ, ಡಾ.ಎಂ.ಸಿ.ಸುಧಾಕರ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ,” ಎಂದರು.

“ರೈತರಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಸುವ ಉದ್ದೇಶದಿಂದ ಕುಸುಮ್-ಸಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ನೀರಾವರಿಗೆ ವಿದ್ಯುತ್ ಪೂರೈಸುವ ಫೀಡರ್‌ಗಳ ಬಳಿ ಸೋಲಾರ್ ಘಟಕಗಳನ್ನು ಸ್ಥಾಪಿಸಿ, ವಿದ್ಯುತ್ ಉತ್ಪಾದಿಸಲಾಗುವುದು. ಬಳಿಕ ಅಲ್ಲಿಂದ ಫೀಡರ್‌ಗಳ ಮೂಲಕ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಒದಗಿಸಲಾಗುವುದು. ಸ್ಥಳೀಯವಾಗಿಯೇ ವಿದ್ಯುತ್ ಉತ್ಪಾದಿಸಿ ಪೂರೈಸುವುದರಿಂದ ಗುಣಮಟ್ಟದ ವಿದ್ಯುತ್ ಲಭ್ಯವಾಗುತ್ತದೆ. ಟ್ರಾನ್ಸ್‌ಫರ್ಮರ್‌ಗಳ ಮೇಲಿನ ಹೊರೆಯೂ ಇದರಿಂದ ತಗ್ಗುತ್ತದೆ,” ಎಂದು ಹೇಳಿದರು.

“ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿ ಮತ್ತು ಚರಕಮಟ್ಟೇನಹಳ್ಳಿ ಗ್ರಾಮದ ಸುಮಾರು 60 ಎಕರೆ ಪ್ರದೇಶದಲ್ಲಿ 20 ಮೆ.ವ್ಯಾ. ಸಾಮರ್ಥ್ಯದಲ್ಲಿ ಸೋಲಾರ್ ಘಟಕ ಸ್ಥಾಪಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಕುಸುಮ್- ಸಿ ಯೋಜನೆಯಡಿ ಸ್ಥಾಪಿಸಲಾಗಿರುವ ಅತಿ ದೊಡ್ಡ ಘಟಕವಿದು. ಹೀಗಾಗಿ ಗೌರಿಬಿದನೂರಿನಲ್ಲಿ ಯೋಜನೆಯನ್ನು ಉದ್ಘಾಟಿಸಲು ನಿರ್ಧರಿಸಲಾಗಿದೆ. ಇಲ್ಲಿ ಖಾಸಗಿ ಜಮೀನನ್ನು 25 ವರ್ಷಕ್ಕೆ ಭೋಗ್ಯಕ್ಕೆ ಪಡೆಯಲಾಗಿದೆ,” ಎಂದು ವಿವರಿಸಿದರು.

*ನಮ್ಮ ಸರ್ಕಾರ ಬಂದ ಮೇಲೆ ಕುಸುಮ್-ಸಿ ಜಾರಿ*:

“ಕುಸುಮ್ – ಸಿ ಯೋಜನೆ ನಾಲ್ಕೈದು ವರ್ಷ ಹಿಂದೆಯೇ ಜಾರಿಯಾಗಿತ್ತಾದರೂ ರಾಜ್ಯದಲ್ಲಿ ಮಾತ್ರ ಅದನ್ನು ಶೀಥಲಗೃಹದಲ್ಲಿಟ್ಟಿದ್ದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯೋಜನೆ ಜಾರಿಗೊಳಿಸಲು ನಿರ್ಧರಿಸಿ, ಟೆಂಡರ್ ಕರೆಯಲಾಯಿತು. ಒಂದು ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆಗೆ 3.5 ಕೋಟಿ ರೂ.ನಿಂದ 4 ಕೋಟಿ್ ರೂ.ವರೆಗೆ ವೆಚ್ಚ ಆಗುತ್ತದೆ. ಈ ಪೈಕಿ 1 ಕೋಟಿ ರೂ. ಕೇಂದ್ರ ಸರ್ಕಾರದಿಂದ ಸಬ್ಸಿಡಿ ಬರುತ್ತದೆ. ಈ ಎಲ್ಲಾ ಅಂಶಗಳನ್ನು ಆಧರಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಪ್ರತಿ ಯೂನಿಟ್ ವಿದ್ಯುತ್‌ಗೆ ಗರಿಷ್ಠ 3.17 ರೂ. ನಿಗದಿಪಡಿಸಿದೆ,” ಎಂದು ಸಚಿವ ಕೆ.ಜೆ.ಜಾರ್ಜ್ ಮಾಹಿತಿ ನೀಡಿದರು.

“ಕುಸುಮ್-ಸಿ ಮೊದಲ ಹಂತದಲ್ಲಿ ಕೃಷಿ ಫೀಡರ್‌ಗಳ ಸೋಲರೈಸೇಷನ್ ಮೂಲಕ 2,400 ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆ ಗುರಿ ಹಾಕಿಕೊಂಡಿದ್ದು ಸುಮಾರು 6,19,000 (6 ಲಕ್ಷ 19 ಸಾವಿರ) ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ವೇಳೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡುವ ನಿಟ್ಟಿನಲ್ಲಿ ಕೆಲಸ ಪ್ರಗತಿಯಲ್ಲಿದೆ. ಈಗಾಗಲೇ ಸುಮಾರು 200 ಮೆ.ವ್ಯಾ. ಸಾಮರ್ಥ್ಯದ ಸೋಲಾರ್ ಘಟಕಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇನ್ನು ಕೆಲವೇ ತಿಂಗಳುಗಳಲ್ಲಿ 93 ಸ್ಥಳಗಳಲ್ಲಿ 545 ಮೆ.ವ್ಯಾ. ಸಾಮರ್ಥ್ಯದ ಸೋಲಾರ್ ಘಟಕಗಳು ಚಾಲನೆಗೊಳ್ಳಲಿವೆ. ಡಿಸೆಂಬರ್-2025ರ ವೇಳೆಗೆ 2,400 ಮೆ.ವ್ಯಾ. ಸಾಮರ್ಥ್ಯದ ಸೌರ ಘಟಕಗಳ ಸ್ಥಾಪನೆಯ ಗುರಿಯನ್ನು ಸಾಧಿಸಲಾಗುವುದು,” ಎಂದು ಮಾಹಿತಿ ನೀಡಿದರು.

“ತಾಂತ್ರಿಕ ಸಾಧ್ಯತೆ ಇರುವ ವಿದ್ಯುತ್ ಉಪ ಕೇಂದ್ರಗಳ ಬಳಿ ಸೌರ ಘಟಕಗಳ ಸ್ಥಾಪನೆಗೆ ನಿರ್ಧರಿಸಲಾಗಿದೆ. ಖಾಸಗಿಯವರು ಸೌರ ಘಟಕಗಳನ್ನು ಸ್ಥಾಪಿಸಿ, ವಿದ್ಯುತ್ ಉತ್ಪಾದಿಸುತ್ತಾರೆ. ಅದನ್ನು ಸರ್ಕಾರ ಖರೀದಿಸಿ ಆಯಾ ಫೀಡರ್‌ಗಳ ವ್ಯಾಪ್ತಿಯ ಕೃಷಿ ಪಂಪ್‌ಸೆಟ್‌ಗಳಿಗೆ ಪೂರೈಸುತ್ತದೆ. ಹಗಲು ವೇಳೆ ಸೌರ ವಿದ್ಯುತ್ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರುವುದರಿಂದ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ಸಮರ್ಪಕ ವಿದ್ಯುತ್ ಲಭ್ಯವಾಗಲಿದೆ,” ಎಂದರು.

“ಒಂದು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ 4 ಎಕರೆ ಭೂಮಿ ಅಗತ್ಯವಿದೆ. ಸರ್ಕಾರಿ ಭೂಮಿ ಲಭ್ಯವಿದ್ದರೆ ಅದನ್ನು ಉಚಿತವಾಗಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ. ಆದರೆ, ಆ ಭೂಮಿಗೆ ಪ್ರತಿ ಎಕರೆಗೆ 25 ಸಾವಿರ ರೂ. ಅನ್ನು ಖಾಸಗಿ ವಿದ್ಯುತ್ ಉತ್ಪಾದಕರು ಪಾವತಿಸಬೇಕು. ಆ ಮೊತ್ತವನ್ನು ಜಿಲ್ಲಾಧಿಕಾರಿಗಳ ಬಳಿ ಇಟ್ಟು ಉಪ ಕೇಂದ್ರ ಇರುವ ಗ್ರಾಮದ ಸರ್ಕಾರಿ ಶಾಲೆ, ಅಂಗನವಾಡಿಗಳ ಅಭಿವೃದ್ಧಿಗೆ ಬಳಸಿಕೊಳ್ಳಲಾಗುವುದು. ಖಾಸಗಿ ಭೂಮಿಯಾಗಿದ್ದರೆ, ವಿದ್ಯುತ್ ಉತ್ಪಾದನೆ ಗುತ್ತಿಗೆ ಪಡೆದ ಡೆವಲಪರ್‌ಗಳು ಗುತ್ತಿಗೆಗೆ ತೆಗೆದುಕೊಂಡು, ಭೂಮಾಲೀಕರಿಗೆ ಎಕರೆಗೆ ಕನಿಷ್ಠ ₹25,000 ಪರಿಹಾರ ನೀಡುತ್ತಾರೆ,” ಎಂದು ಹೇಳಿದರು.

ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕ ಡಾ.ಎನ್‌. ಶಿವಶಂಕರ್ , ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (ಕ್ರೆಡಲ್) ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ, ಬೆಸ್ಕಾಂ ತಾಂತ್ರಿಕ ನಿರ್ದೇಶಕ ಹೆಚ್‌.ಜೆ.ರಮೇಶ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

44 minutes ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

56 minutes ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

9 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

22 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

24 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

1 day ago