Categories: ಕೋಲಾರ

ಕೂತಾಂಡಹಳ್ಳಿ ಗ್ರಾಮದಲ್ಲಿ 3ನೇ ವರ್ಷದ ಅದ್ಧೂರಿ ಹೂವಿನ ಕರಗ ಮಹೋತ್ಸವ

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಕೂತಾಂಡಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ದ್ರೌಪತಾಂಭ ದೇವಿಯ ಮೂರನೇ ವರ್ಷದ ಹೂವಿನ ಕರಗ ಮಹೋತ್ಸವವು ರಾತ್ರಿ ಹನ್ನೆರಡು ಗಂಟೆಗೆ ಪ್ರಾರಂಭವಾಗಿ ಅದ್ಧೂರಿಯಾಗಿ ನಡೆಯಿತು.

ಹೂವಿನ ಕರಗವು ಗ್ರಾಮದ ಮಾರಿಕಾಂಬ ದೇವಾಲಯ‌ ಸೇರಿದಂತೆ ಗ್ರಾಮದೆಲ್ಲೆಡೆ ಮುಂಜಾನೆವರೆಗೂ ಸಂಚರಿಸಿತು. ಈ ವೇಳೆ ಗ್ರಾಮದಲ್ಲಿ ಭಕ್ತಾದಿಗಳು ಹೂವಿನ ಕರಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಹೂವಿನ ಕರಗ ಮಹೋತ್ಸವ ಅಂಗವಾಗಿ ಗ್ರಾಮದಲ್ಲಿ ಮಾರಿಕಾಂಬ ಹಾಗೂ ಗಂಗಮ್ಮ‌ ದೇವಾಲಯಗಳಿಗೆ ವಿಶೇಷವಾದ ಹೂವಿನಿಂದ ಸಿಂಗರಿಸಲಾಗಿತ್ತು. ಗ್ರಾಮದೆಲ್ಲೆಡೆ ವಿದ್ಯುತ್ ದೀಪಗಳಿಂದ ಅಲಂಕರಿಸಿದ್ದು ಕಂಗೊಳಿಸುತ್ತಿತ್ತು. ಕಳೆದ ಮೂರು ದಿನಗಳಿಂದ ಕೂತಾಂಡಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಕರಗ ಮಹೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸುವ ಮೂಲಕ ದೇವರ ಕೃಪೆಗೆ ಪಾತ್ರರಾದರು.

ಗ್ರಾಮದಲ್ಲಿ ಏಳು ದಿನಗಳ ಕಾಲ‌ ನಡೆಯುವ ಕರಗ ಮಹೋತ್ಸವದಲ್ಲಿ ಮೊದಲನೆಯ ದಿನ ಕುಲದ ಯಜಮಾನರಿಂದ ಶಾಸ್ತ್ರೋಕ್ತವಾಗಿ ದ್ವಜಾರೋಹಣ ನೆರವೇರಿಸಲಾಯಿತು. ಕರಗದಮ್ಮನಿಗೆ ಮಡಿಲು ತುಂಬುವ ಮೂಲಕ ಹಸಿ ಕರಗ ನಡೆಸಲಾಯಿತು‌. ಸುತ್ತಮುತ್ತಲಿನ ನಾಲ್ಕು ಊರಿನ ಭಕ್ತರಿಂದ ಕರಗದಮ್ಮನಿಗೆ ಆರತಿ ದೀಪೋತ್ಸವ ಮತ್ತು ಕಲ್ಯಾಣೋತ್ಸವವನ್ನು ಅರ್ಚಕ ಜನಾರ್ಧನ್ ವಿಜೃಂಭಣೆಯಾಗಿ ನೆರವೇರಿಸಿದರು‌.

ಮಂಗಳವಾರ ರಾತ್ರಿ 12 ಗಂಟೆಗೆ ಸರಿಯಾಗಿ ಕರಗದ ಪೂಜಾರಿ ಗಂಗಾಧರ ಅವರಿಂದ ಹೂವಿನ ಕರಗ ಮಹೋತ್ಸವ ವಿಜೃಂಭಣೆಯಿಂದ ನೆರವೇರಿಸಲಾಯಿತು. ಊರಿನ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ವಾದ್ಯಕ್ಕೆ ತಕ್ಕಂತೆ ನೃತ್ಯ ಮಾಡಿ ಜನರ ಮನಸ್ಸನ್ನು ಸೂರೆಗೊಳಿಸಿದರು. ನಂತರ ಅಗ್ನಿ ಕುಂಡ ಪ್ರವೇಶ, ಸಂಜೆ ಭರತ ಪೂಜಾರಿ ಗೋವಿಂದಪ್ಪ ಅವರಿಂದ ಪುರಾಣಗಾವು, ವಸಂತೋತ್ಸವ ಕಾರ್ಯಕ್ರಮಗಳು ನೆರವೇರಿದ ನಂತರ ಮಹಾಮಂಗಳಾರತಿ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಈ ಅದ್ಧೂರಿ ಕರಗ ಮಹೋತ್ಸವ ಕಾರ್ಯಕ್ರಮದಲ್ಲಿ ಸುತ್ತಮುತ್ತಲ ಸಾವಿರಾರು ಭಕ್ತಾದಿಗಳು, ಕುಲದ ಗೌಡರು, ಯಜಮಾನರು ಕೋಲ್ಕಾರರು ,ಕುಲಸ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

10 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

10 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

14 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

16 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

19 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

23 hours ago