Categories: ಕೋಲಾರ

ಕೂತಾಂಡಹಳ್ಳಿ ಗ್ರಾಮದಲ್ಲಿ 3ನೇ ವರ್ಷದ ಅದ್ಧೂರಿ ಹೂವಿನ ಕರಗ ಮಹೋತ್ಸವ

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಕೂತಾಂಡಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ದ್ರೌಪತಾಂಭ ದೇವಿಯ ಮೂರನೇ ವರ್ಷದ ಹೂವಿನ ಕರಗ ಮಹೋತ್ಸವವು ರಾತ್ರಿ ಹನ್ನೆರಡು ಗಂಟೆಗೆ ಪ್ರಾರಂಭವಾಗಿ ಅದ್ಧೂರಿಯಾಗಿ ನಡೆಯಿತು.

ಹೂವಿನ ಕರಗವು ಗ್ರಾಮದ ಮಾರಿಕಾಂಬ ದೇವಾಲಯ‌ ಸೇರಿದಂತೆ ಗ್ರಾಮದೆಲ್ಲೆಡೆ ಮುಂಜಾನೆವರೆಗೂ ಸಂಚರಿಸಿತು. ಈ ವೇಳೆ ಗ್ರಾಮದಲ್ಲಿ ಭಕ್ತಾದಿಗಳು ಹೂವಿನ ಕರಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಹೂವಿನ ಕರಗ ಮಹೋತ್ಸವ ಅಂಗವಾಗಿ ಗ್ರಾಮದಲ್ಲಿ ಮಾರಿಕಾಂಬ ಹಾಗೂ ಗಂಗಮ್ಮ‌ ದೇವಾಲಯಗಳಿಗೆ ವಿಶೇಷವಾದ ಹೂವಿನಿಂದ ಸಿಂಗರಿಸಲಾಗಿತ್ತು. ಗ್ರಾಮದೆಲ್ಲೆಡೆ ವಿದ್ಯುತ್ ದೀಪಗಳಿಂದ ಅಲಂಕರಿಸಿದ್ದು ಕಂಗೊಳಿಸುತ್ತಿತ್ತು. ಕಳೆದ ಮೂರು ದಿನಗಳಿಂದ ಕೂತಾಂಡಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಕರಗ ಮಹೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸುವ ಮೂಲಕ ದೇವರ ಕೃಪೆಗೆ ಪಾತ್ರರಾದರು.

ಗ್ರಾಮದಲ್ಲಿ ಏಳು ದಿನಗಳ ಕಾಲ‌ ನಡೆಯುವ ಕರಗ ಮಹೋತ್ಸವದಲ್ಲಿ ಮೊದಲನೆಯ ದಿನ ಕುಲದ ಯಜಮಾನರಿಂದ ಶಾಸ್ತ್ರೋಕ್ತವಾಗಿ ದ್ವಜಾರೋಹಣ ನೆರವೇರಿಸಲಾಯಿತು. ಕರಗದಮ್ಮನಿಗೆ ಮಡಿಲು ತುಂಬುವ ಮೂಲಕ ಹಸಿ ಕರಗ ನಡೆಸಲಾಯಿತು‌. ಸುತ್ತಮುತ್ತಲಿನ ನಾಲ್ಕು ಊರಿನ ಭಕ್ತರಿಂದ ಕರಗದಮ್ಮನಿಗೆ ಆರತಿ ದೀಪೋತ್ಸವ ಮತ್ತು ಕಲ್ಯಾಣೋತ್ಸವವನ್ನು ಅರ್ಚಕ ಜನಾರ್ಧನ್ ವಿಜೃಂಭಣೆಯಾಗಿ ನೆರವೇರಿಸಿದರು‌.

ಮಂಗಳವಾರ ರಾತ್ರಿ 12 ಗಂಟೆಗೆ ಸರಿಯಾಗಿ ಕರಗದ ಪೂಜಾರಿ ಗಂಗಾಧರ ಅವರಿಂದ ಹೂವಿನ ಕರಗ ಮಹೋತ್ಸವ ವಿಜೃಂಭಣೆಯಿಂದ ನೆರವೇರಿಸಲಾಯಿತು. ಊರಿನ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ವಾದ್ಯಕ್ಕೆ ತಕ್ಕಂತೆ ನೃತ್ಯ ಮಾಡಿ ಜನರ ಮನಸ್ಸನ್ನು ಸೂರೆಗೊಳಿಸಿದರು. ನಂತರ ಅಗ್ನಿ ಕುಂಡ ಪ್ರವೇಶ, ಸಂಜೆ ಭರತ ಪೂಜಾರಿ ಗೋವಿಂದಪ್ಪ ಅವರಿಂದ ಪುರಾಣಗಾವು, ವಸಂತೋತ್ಸವ ಕಾರ್ಯಕ್ರಮಗಳು ನೆರವೇರಿದ ನಂತರ ಮಹಾಮಂಗಳಾರತಿ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಈ ಅದ್ಧೂರಿ ಕರಗ ಮಹೋತ್ಸವ ಕಾರ್ಯಕ್ರಮದಲ್ಲಿ ಸುತ್ತಮುತ್ತಲ ಸಾವಿರಾರು ಭಕ್ತಾದಿಗಳು, ಕುಲದ ಗೌಡರು, ಯಜಮಾನರು ಕೋಲ್ಕಾರರು ,ಕುಲಸ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಛಲವಾದಿ‌‌ ಮಹಾಸಭಾ ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕು ಛಲವಾದಿ‌‌ ಮಹಾಸಭಾ ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

57 minutes ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

1 hour ago

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

6 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

8 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

21 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

21 hours ago