Categories: ಕೋಲಾರ

ಕೂತಾಂಡಹಳ್ಳಿ ಗ್ರಾಮದಲ್ಲಿ 3ನೇ ವರ್ಷದ ಅದ್ಧೂರಿ ಹೂವಿನ ಕರಗ ಮಹೋತ್ಸವ

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಕೂತಾಂಡಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ದ್ರೌಪತಾಂಭ ದೇವಿಯ ಮೂರನೇ ವರ್ಷದ ಹೂವಿನ ಕರಗ ಮಹೋತ್ಸವವು ರಾತ್ರಿ ಹನ್ನೆರಡು ಗಂಟೆಗೆ ಪ್ರಾರಂಭವಾಗಿ ಅದ್ಧೂರಿಯಾಗಿ ನಡೆಯಿತು.

ಹೂವಿನ ಕರಗವು ಗ್ರಾಮದ ಮಾರಿಕಾಂಬ ದೇವಾಲಯ‌ ಸೇರಿದಂತೆ ಗ್ರಾಮದೆಲ್ಲೆಡೆ ಮುಂಜಾನೆವರೆಗೂ ಸಂಚರಿಸಿತು. ಈ ವೇಳೆ ಗ್ರಾಮದಲ್ಲಿ ಭಕ್ತಾದಿಗಳು ಹೂವಿನ ಕರಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಹೂವಿನ ಕರಗ ಮಹೋತ್ಸವ ಅಂಗವಾಗಿ ಗ್ರಾಮದಲ್ಲಿ ಮಾರಿಕಾಂಬ ಹಾಗೂ ಗಂಗಮ್ಮ‌ ದೇವಾಲಯಗಳಿಗೆ ವಿಶೇಷವಾದ ಹೂವಿನಿಂದ ಸಿಂಗರಿಸಲಾಗಿತ್ತು. ಗ್ರಾಮದೆಲ್ಲೆಡೆ ವಿದ್ಯುತ್ ದೀಪಗಳಿಂದ ಅಲಂಕರಿಸಿದ್ದು ಕಂಗೊಳಿಸುತ್ತಿತ್ತು. ಕಳೆದ ಮೂರು ದಿನಗಳಿಂದ ಕೂತಾಂಡಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಕರಗ ಮಹೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸುವ ಮೂಲಕ ದೇವರ ಕೃಪೆಗೆ ಪಾತ್ರರಾದರು.

ಗ್ರಾಮದಲ್ಲಿ ಏಳು ದಿನಗಳ ಕಾಲ‌ ನಡೆಯುವ ಕರಗ ಮಹೋತ್ಸವದಲ್ಲಿ ಮೊದಲನೆಯ ದಿನ ಕುಲದ ಯಜಮಾನರಿಂದ ಶಾಸ್ತ್ರೋಕ್ತವಾಗಿ ದ್ವಜಾರೋಹಣ ನೆರವೇರಿಸಲಾಯಿತು. ಕರಗದಮ್ಮನಿಗೆ ಮಡಿಲು ತುಂಬುವ ಮೂಲಕ ಹಸಿ ಕರಗ ನಡೆಸಲಾಯಿತು‌. ಸುತ್ತಮುತ್ತಲಿನ ನಾಲ್ಕು ಊರಿನ ಭಕ್ತರಿಂದ ಕರಗದಮ್ಮನಿಗೆ ಆರತಿ ದೀಪೋತ್ಸವ ಮತ್ತು ಕಲ್ಯಾಣೋತ್ಸವವನ್ನು ಅರ್ಚಕ ಜನಾರ್ಧನ್ ವಿಜೃಂಭಣೆಯಾಗಿ ನೆರವೇರಿಸಿದರು‌.

ಮಂಗಳವಾರ ರಾತ್ರಿ 12 ಗಂಟೆಗೆ ಸರಿಯಾಗಿ ಕರಗದ ಪೂಜಾರಿ ಗಂಗಾಧರ ಅವರಿಂದ ಹೂವಿನ ಕರಗ ಮಹೋತ್ಸವ ವಿಜೃಂಭಣೆಯಿಂದ ನೆರವೇರಿಸಲಾಯಿತು. ಊರಿನ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ವಾದ್ಯಕ್ಕೆ ತಕ್ಕಂತೆ ನೃತ್ಯ ಮಾಡಿ ಜನರ ಮನಸ್ಸನ್ನು ಸೂರೆಗೊಳಿಸಿದರು. ನಂತರ ಅಗ್ನಿ ಕುಂಡ ಪ್ರವೇಶ, ಸಂಜೆ ಭರತ ಪೂಜಾರಿ ಗೋವಿಂದಪ್ಪ ಅವರಿಂದ ಪುರಾಣಗಾವು, ವಸಂತೋತ್ಸವ ಕಾರ್ಯಕ್ರಮಗಳು ನೆರವೇರಿದ ನಂತರ ಮಹಾಮಂಗಳಾರತಿ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಈ ಅದ್ಧೂರಿ ಕರಗ ಮಹೋತ್ಸವ ಕಾರ್ಯಕ್ರಮದಲ್ಲಿ ಸುತ್ತಮುತ್ತಲ ಸಾವಿರಾರು ಭಕ್ತಾದಿಗಳು, ಕುಲದ ಗೌಡರು, ಯಜಮಾನರು ಕೋಲ್ಕಾರರು ,ಕುಲಸ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು

Ramesh Babu

Journalist

Recent Posts

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

5 hours ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

7 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

8 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

16 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 day ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

1 day ago