Categories: ಕೋಲಾರ

ಕೂತಾಂಡಹಳ್ಳಿ ಗ್ರಾಮದಲ್ಲಿ 3ನೇ ವರ್ಷದ ಅದ್ಧೂರಿ ಹೂವಿನ ಕರಗ ಮಹೋತ್ಸವ

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಕೂತಾಂಡಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ದ್ರೌಪತಾಂಭ ದೇವಿಯ ಮೂರನೇ ವರ್ಷದ ಹೂವಿನ ಕರಗ ಮಹೋತ್ಸವವು ರಾತ್ರಿ ಹನ್ನೆರಡು ಗಂಟೆಗೆ ಪ್ರಾರಂಭವಾಗಿ ಅದ್ಧೂರಿಯಾಗಿ ನಡೆಯಿತು.

ಹೂವಿನ ಕರಗವು ಗ್ರಾಮದ ಮಾರಿಕಾಂಬ ದೇವಾಲಯ‌ ಸೇರಿದಂತೆ ಗ್ರಾಮದೆಲ್ಲೆಡೆ ಮುಂಜಾನೆವರೆಗೂ ಸಂಚರಿಸಿತು. ಈ ವೇಳೆ ಗ್ರಾಮದಲ್ಲಿ ಭಕ್ತಾದಿಗಳು ಹೂವಿನ ಕರಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಹೂವಿನ ಕರಗ ಮಹೋತ್ಸವ ಅಂಗವಾಗಿ ಗ್ರಾಮದಲ್ಲಿ ಮಾರಿಕಾಂಬ ಹಾಗೂ ಗಂಗಮ್ಮ‌ ದೇವಾಲಯಗಳಿಗೆ ವಿಶೇಷವಾದ ಹೂವಿನಿಂದ ಸಿಂಗರಿಸಲಾಗಿತ್ತು. ಗ್ರಾಮದೆಲ್ಲೆಡೆ ವಿದ್ಯುತ್ ದೀಪಗಳಿಂದ ಅಲಂಕರಿಸಿದ್ದು ಕಂಗೊಳಿಸುತ್ತಿತ್ತು. ಕಳೆದ ಮೂರು ದಿನಗಳಿಂದ ಕೂತಾಂಡಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಕರಗ ಮಹೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸುವ ಮೂಲಕ ದೇವರ ಕೃಪೆಗೆ ಪಾತ್ರರಾದರು.

ಗ್ರಾಮದಲ್ಲಿ ಏಳು ದಿನಗಳ ಕಾಲ‌ ನಡೆಯುವ ಕರಗ ಮಹೋತ್ಸವದಲ್ಲಿ ಮೊದಲನೆಯ ದಿನ ಕುಲದ ಯಜಮಾನರಿಂದ ಶಾಸ್ತ್ರೋಕ್ತವಾಗಿ ದ್ವಜಾರೋಹಣ ನೆರವೇರಿಸಲಾಯಿತು. ಕರಗದಮ್ಮನಿಗೆ ಮಡಿಲು ತುಂಬುವ ಮೂಲಕ ಹಸಿ ಕರಗ ನಡೆಸಲಾಯಿತು‌. ಸುತ್ತಮುತ್ತಲಿನ ನಾಲ್ಕು ಊರಿನ ಭಕ್ತರಿಂದ ಕರಗದಮ್ಮನಿಗೆ ಆರತಿ ದೀಪೋತ್ಸವ ಮತ್ತು ಕಲ್ಯಾಣೋತ್ಸವವನ್ನು ಅರ್ಚಕ ಜನಾರ್ಧನ್ ವಿಜೃಂಭಣೆಯಾಗಿ ನೆರವೇರಿಸಿದರು‌.

ಮಂಗಳವಾರ ರಾತ್ರಿ 12 ಗಂಟೆಗೆ ಸರಿಯಾಗಿ ಕರಗದ ಪೂಜಾರಿ ಗಂಗಾಧರ ಅವರಿಂದ ಹೂವಿನ ಕರಗ ಮಹೋತ್ಸವ ವಿಜೃಂಭಣೆಯಿಂದ ನೆರವೇರಿಸಲಾಯಿತು. ಊರಿನ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ವಾದ್ಯಕ್ಕೆ ತಕ್ಕಂತೆ ನೃತ್ಯ ಮಾಡಿ ಜನರ ಮನಸ್ಸನ್ನು ಸೂರೆಗೊಳಿಸಿದರು. ನಂತರ ಅಗ್ನಿ ಕುಂಡ ಪ್ರವೇಶ, ಸಂಜೆ ಭರತ ಪೂಜಾರಿ ಗೋವಿಂದಪ್ಪ ಅವರಿಂದ ಪುರಾಣಗಾವು, ವಸಂತೋತ್ಸವ ಕಾರ್ಯಕ್ರಮಗಳು ನೆರವೇರಿದ ನಂತರ ಮಹಾಮಂಗಳಾರತಿ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಈ ಅದ್ಧೂರಿ ಕರಗ ಮಹೋತ್ಸವ ಕಾರ್ಯಕ್ರಮದಲ್ಲಿ ಸುತ್ತಮುತ್ತಲ ಸಾವಿರಾರು ಭಕ್ತಾದಿಗಳು, ಕುಲದ ಗೌಡರು, ಯಜಮಾನರು ಕೋಲ್ಕಾರರು ,ಕುಲಸ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು

Ramesh Babu

Journalist

Recent Posts

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

15 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

1 day ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

1 day ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

2 days ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 days ago