ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಕೂತಾಂಡಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ದ್ರೌಪತಾಂಭ ದೇವಿಯ ಮೂರನೇ ವರ್ಷದ ಹೂವಿನ ಕರಗ ಮಹೋತ್ಸವವು ರಾತ್ರಿ ಹನ್ನೆರಡು ಗಂಟೆಗೆ ಪ್ರಾರಂಭವಾಗಿ ಅದ್ಧೂರಿಯಾಗಿ ನಡೆಯಿತು.
ಹೂವಿನ ಕರಗವು ಗ್ರಾಮದ ಮಾರಿಕಾಂಬ ದೇವಾಲಯ ಸೇರಿದಂತೆ ಗ್ರಾಮದೆಲ್ಲೆಡೆ ಮುಂಜಾನೆವರೆಗೂ ಸಂಚರಿಸಿತು. ಈ ವೇಳೆ ಗ್ರಾಮದಲ್ಲಿ ಭಕ್ತಾದಿಗಳು ಹೂವಿನ ಕರಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಹೂವಿನ ಕರಗ ಮಹೋತ್ಸವ ಅಂಗವಾಗಿ ಗ್ರಾಮದಲ್ಲಿ ಮಾರಿಕಾಂಬ ಹಾಗೂ ಗಂಗಮ್ಮ ದೇವಾಲಯಗಳಿಗೆ ವಿಶೇಷವಾದ ಹೂವಿನಿಂದ ಸಿಂಗರಿಸಲಾಗಿತ್ತು. ಗ್ರಾಮದೆಲ್ಲೆಡೆ ವಿದ್ಯುತ್ ದೀಪಗಳಿಂದ ಅಲಂಕರಿಸಿದ್ದು ಕಂಗೊಳಿಸುತ್ತಿತ್ತು. ಕಳೆದ ಮೂರು ದಿನಗಳಿಂದ ಕೂತಾಂಡಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಕರಗ ಮಹೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸುವ ಮೂಲಕ ದೇವರ ಕೃಪೆಗೆ ಪಾತ್ರರಾದರು.
ಗ್ರಾಮದಲ್ಲಿ ಏಳು ದಿನಗಳ ಕಾಲ ನಡೆಯುವ ಕರಗ ಮಹೋತ್ಸವದಲ್ಲಿ ಮೊದಲನೆಯ ದಿನ ಕುಲದ ಯಜಮಾನರಿಂದ ಶಾಸ್ತ್ರೋಕ್ತವಾಗಿ ದ್ವಜಾರೋಹಣ ನೆರವೇರಿಸಲಾಯಿತು. ಕರಗದಮ್ಮನಿಗೆ ಮಡಿಲು ತುಂಬುವ ಮೂಲಕ ಹಸಿ ಕರಗ ನಡೆಸಲಾಯಿತು. ಸುತ್ತಮುತ್ತಲಿನ ನಾಲ್ಕು ಊರಿನ ಭಕ್ತರಿಂದ ಕರಗದಮ್ಮನಿಗೆ ಆರತಿ ದೀಪೋತ್ಸವ ಮತ್ತು ಕಲ್ಯಾಣೋತ್ಸವವನ್ನು ಅರ್ಚಕ ಜನಾರ್ಧನ್ ವಿಜೃಂಭಣೆಯಾಗಿ ನೆರವೇರಿಸಿದರು.
ಮಂಗಳವಾರ ರಾತ್ರಿ 12 ಗಂಟೆಗೆ ಸರಿಯಾಗಿ ಕರಗದ ಪೂಜಾರಿ ಗಂಗಾಧರ ಅವರಿಂದ ಹೂವಿನ ಕರಗ ಮಹೋತ್ಸವ ವಿಜೃಂಭಣೆಯಿಂದ ನೆರವೇರಿಸಲಾಯಿತು. ಊರಿನ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ವಾದ್ಯಕ್ಕೆ ತಕ್ಕಂತೆ ನೃತ್ಯ ಮಾಡಿ ಜನರ ಮನಸ್ಸನ್ನು ಸೂರೆಗೊಳಿಸಿದರು. ನಂತರ ಅಗ್ನಿ ಕುಂಡ ಪ್ರವೇಶ, ಸಂಜೆ ಭರತ ಪೂಜಾರಿ ಗೋವಿಂದಪ್ಪ ಅವರಿಂದ ಪುರಾಣಗಾವು, ವಸಂತೋತ್ಸವ ಕಾರ್ಯಕ್ರಮಗಳು ನೆರವೇರಿದ ನಂತರ ಮಹಾಮಂಗಳಾರತಿ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಈ ಅದ್ಧೂರಿ ಕರಗ ಮಹೋತ್ಸವ ಕಾರ್ಯಕ್ರಮದಲ್ಲಿ ಸುತ್ತಮುತ್ತಲ ಸಾವಿರಾರು ಭಕ್ತಾದಿಗಳು, ಕುಲದ ಗೌಡರು, ಯಜಮಾನರು ಕೋಲ್ಕಾರರು ,ಕುಲಸ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು
Are you a fan of gambling enterprise video games? Do you appreciate the excitement of…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…