Categories: ಕೋಲಾರ

ಕೂತಾಂಡಹಳ್ಳಿ ಗ್ರಾಮದಲ್ಲಿ 3ನೇ ವರ್ಷದ ಅದ್ಧೂರಿ ಹೂವಿನ ಕರಗ ಮಹೋತ್ಸವ

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಕೂತಾಂಡಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ದ್ರೌಪತಾಂಭ ದೇವಿಯ ಮೂರನೇ ವರ್ಷದ ಹೂವಿನ ಕರಗ ಮಹೋತ್ಸವವು ರಾತ್ರಿ ಹನ್ನೆರಡು ಗಂಟೆಗೆ ಪ್ರಾರಂಭವಾಗಿ ಅದ್ಧೂರಿಯಾಗಿ ನಡೆಯಿತು.

ಹೂವಿನ ಕರಗವು ಗ್ರಾಮದ ಮಾರಿಕಾಂಬ ದೇವಾಲಯ‌ ಸೇರಿದಂತೆ ಗ್ರಾಮದೆಲ್ಲೆಡೆ ಮುಂಜಾನೆವರೆಗೂ ಸಂಚರಿಸಿತು. ಈ ವೇಳೆ ಗ್ರಾಮದಲ್ಲಿ ಭಕ್ತಾದಿಗಳು ಹೂವಿನ ಕರಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಹೂವಿನ ಕರಗ ಮಹೋತ್ಸವ ಅಂಗವಾಗಿ ಗ್ರಾಮದಲ್ಲಿ ಮಾರಿಕಾಂಬ ಹಾಗೂ ಗಂಗಮ್ಮ‌ ದೇವಾಲಯಗಳಿಗೆ ವಿಶೇಷವಾದ ಹೂವಿನಿಂದ ಸಿಂಗರಿಸಲಾಗಿತ್ತು. ಗ್ರಾಮದೆಲ್ಲೆಡೆ ವಿದ್ಯುತ್ ದೀಪಗಳಿಂದ ಅಲಂಕರಿಸಿದ್ದು ಕಂಗೊಳಿಸುತ್ತಿತ್ತು. ಕಳೆದ ಮೂರು ದಿನಗಳಿಂದ ಕೂತಾಂಡಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಕರಗ ಮಹೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸುವ ಮೂಲಕ ದೇವರ ಕೃಪೆಗೆ ಪಾತ್ರರಾದರು.

ಗ್ರಾಮದಲ್ಲಿ ಏಳು ದಿನಗಳ ಕಾಲ‌ ನಡೆಯುವ ಕರಗ ಮಹೋತ್ಸವದಲ್ಲಿ ಮೊದಲನೆಯ ದಿನ ಕುಲದ ಯಜಮಾನರಿಂದ ಶಾಸ್ತ್ರೋಕ್ತವಾಗಿ ದ್ವಜಾರೋಹಣ ನೆರವೇರಿಸಲಾಯಿತು. ಕರಗದಮ್ಮನಿಗೆ ಮಡಿಲು ತುಂಬುವ ಮೂಲಕ ಹಸಿ ಕರಗ ನಡೆಸಲಾಯಿತು‌. ಸುತ್ತಮುತ್ತಲಿನ ನಾಲ್ಕು ಊರಿನ ಭಕ್ತರಿಂದ ಕರಗದಮ್ಮನಿಗೆ ಆರತಿ ದೀಪೋತ್ಸವ ಮತ್ತು ಕಲ್ಯಾಣೋತ್ಸವವನ್ನು ಅರ್ಚಕ ಜನಾರ್ಧನ್ ವಿಜೃಂಭಣೆಯಾಗಿ ನೆರವೇರಿಸಿದರು‌.

ಮಂಗಳವಾರ ರಾತ್ರಿ 12 ಗಂಟೆಗೆ ಸರಿಯಾಗಿ ಕರಗದ ಪೂಜಾರಿ ಗಂಗಾಧರ ಅವರಿಂದ ಹೂವಿನ ಕರಗ ಮಹೋತ್ಸವ ವಿಜೃಂಭಣೆಯಿಂದ ನೆರವೇರಿಸಲಾಯಿತು. ಊರಿನ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ವಾದ್ಯಕ್ಕೆ ತಕ್ಕಂತೆ ನೃತ್ಯ ಮಾಡಿ ಜನರ ಮನಸ್ಸನ್ನು ಸೂರೆಗೊಳಿಸಿದರು. ನಂತರ ಅಗ್ನಿ ಕುಂಡ ಪ್ರವೇಶ, ಸಂಜೆ ಭರತ ಪೂಜಾರಿ ಗೋವಿಂದಪ್ಪ ಅವರಿಂದ ಪುರಾಣಗಾವು, ವಸಂತೋತ್ಸವ ಕಾರ್ಯಕ್ರಮಗಳು ನೆರವೇರಿದ ನಂತರ ಮಹಾಮಂಗಳಾರತಿ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಈ ಅದ್ಧೂರಿ ಕರಗ ಮಹೋತ್ಸವ ಕಾರ್ಯಕ್ರಮದಲ್ಲಿ ಸುತ್ತಮುತ್ತಲ ಸಾವಿರಾರು ಭಕ್ತಾದಿಗಳು, ಕುಲದ ಗೌಡರು, ಯಜಮಾನರು ಕೋಲ್ಕಾರರು ,ಕುಲಸ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

7 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

10 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

22 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

23 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago