ಕೃತಕ ಬಣ್ಣ ಬಳಸಿ ಆಹಾರ ತಯಾರಿಸಿದರೆ ಕಠಿಣ ಕ್ರಮ- ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್

ಜಿಲ್ಲೆಯಲ್ಲಿರುವ ಹೋಟೆಲ್, ಬೇಕರಿ, ಬೀದಿಬದಿ ಆಹಾರ ತಯಾರಿಕೆ ಹಾಗೂ ಇತರೆ ಆಹಾರ ತಯಾರಿಕಾ ಉದ್ದಿಮೆಗಳಿಗೆ ಕಾಲ ಕಾಲಕ್ಕೆ ಭೇಟಿ ನೀಡಿ ಆಹಾರದ ಸುರಕ್ಷತೆ ಮತ್ತು ಗುಣಮಟ್ಟವನ್ನು ಪರಿಶೀಲಿಸುವ ಜತೆಗೆ ಕೃತಕ ಬಣ್ಣ ಬಳಸಿ ಆಹಾರ ಪದಾರ್ಥ ತಯಾರಿಸುವವರ ವಿರುದ್ಧ ಕಠಿಣ ಕ್ರಮವನ್ನು ಜರುಗಿಸುವಂತೆ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಸೇವನೆಯು ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ಸಾರ್ವಜನಿಕರಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಅರಿವು ಮೂಡಿಸಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಇರುವ ಎಲ್ಲಾ ಶಾಲೆ ಅಂಗನವಾಡಿ ಮತ್ತು ವಸತಿ ನಿಲಯಗಳಿಗೆ ಭೇಟಿ ನೀಡಿ ಆಹಾರ ತಯಾರಿಸುವುದರ ಬಗ್ಗೆ, ಸ್ವಚ್ಛತೆಯ ಬಗ್ಗೆ ಪರಿಶೀಲಿಸಿ ಅರಿವು ಮೂಡಿಸಬೇಕು. ಬೀದಿಬದಿ ವ್ಯಾಪಾರಿಗಳು ,ಹೋಟೆಲ್ ಗಳು, ರೆಸ್ಟೋರೆಂಟ್ ಗಳಿಗೆ ಭೇಟಿ ಮಾಡಿ ಕೃತಕ ಬಣ್ಣ ಬಳಸದಂತೆ ಎಚ್ಚರಿಕೆವಹಿಸಬೇಕು. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನಗೊಳಿಸಲು ಇಲಾಖಾವಾರು ವಿಷಯಗಳ ಬಗ್ಗೆ ಚರ್ಚಿಸಿ ನೋಂದಣಿ ಪರವಾನಗಿ ತೆಗೆದುಕೊಳ್ಳುವಂತೆ ಸೂಚಿಸಿದರು.

ವೆಜ್ ಆಹಾರ, ಚಿಕನ್, ಫಿಶ್ ಇತರೆ ಕಬಾಬ್ ಗಳ ತಯಾರಿಕೆಯಲ್ಲಿ ಕೃತಕ ಬಣ್ಣಗಳನ್ನು ಬಳಸಿದರೆ ಏಳು ವರ್ಷಗಳಿಂದ ಜೀವಾವಧಿ ಜೈಲು ಶಿಕ್ಷೆ ಮತ್ತು 10 ಲಕ್ಷದವರೆಗೆ ದಂಡವನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ರ ನಿಯಮ 59ರಡಿ ವಿಧಿಸಲಾಗುವುದು ಎಂದು ತಿಳಿಸಿದರು.

ಆಹಾರ ಘಟಕಗಳು ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು. ನೋಂದಣಿ ಹಾಗೂ ಪರವಾನಗಿಗಳನ್ನು ಹೆಚ್ಚು ಹೆಚ್ಚು ಮಾಡಿಸಿ, ಆಹಾರದ ಸ್ಯಾಂಪಲ್ ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಂಗ್ರಹಿಸಿ, ಅಸುರಕ್ಷಿತ ಆಹಾರ ಕಂಡುಬಂದಲ್ಲಿ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ಬಗ್ಗೆ ವರದಿಯಾಗಬೇಕು.
ಆಹಾರ ಉದ್ದಿಮೆ ಸ್ಥಳಗಳಲ್ಲಿ ಸ್ವಚ್ಛತೆ ಬಗ್ಗೆ ಪರಿಶೀಲನೆ ಮಾಡಿ, ಬೀದಿ ಬೀದಿಗಳಲ್ಲಿ ತಯಾರಿಸುವ ಆಹಾರದ ಸುರಕ್ಷತೆ ಹಾಗೂ ಗುಣಮಟ್ಟದ ಬಗ್ಗೆ ನಿಗಾ ವಹಿಸಿ, ನಿಯಮಿತವಾಗಿ ಸಾರ್ವಜನಿಕರಿಂದ ಬಂದಂತಹ ದೂರಿನನ್ವಯ ಆಹಾರ ಮಾದರಿಗಳನ್ನು ಸಂಗ್ರಹಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಆಹಾರ ಸೇವನೆಯಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರ ವಹಿಸುವ ಜತೆಯಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಿ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಂಕಿತಾಧಿಕಾರಿ ಡಾ.ಧರ್ಮೇಂದ್ರ ಮಾತನಾಡಿ ಜಿಲ್ಲೆಯಲ್ಲಿ 5177 ಆಹಾರ ನೋಂದಣಿ ಹಾಗೂ 1593 ಆಹಾರ ಪರವಾನಗಿ ಇದ್ದು ಒಟ್ಟು ಶೇಕಡ 120 ಪ್ರಗತಿ ಸಾಧಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

*ಕಳಪೆ ಆಹಾರ ಕಂಡುಬಂದಲ್ಲಿ ದೂರು ನೀಡಿ*

ಜಿಲ್ಲೆಯ ವ್ಯಾಪ್ತಿಯಲ್ಲಿ ಆಹಾರ ಸುರಕ್ಷತೆ ಹಾಗೂ ಆಹಾರ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಯಾವುದಾದರು ಸಮಸ್ಯೆಗಳು, ಕಂಡು ಬಂದಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಂಕಿತಾಧಿಕಾರಿ ಡಾ.ಧರ್ಮೇಂದ್ರ ಮೊಬೈಲ್ ಸಂಖ್ಯೆ 9901961771, ಹೋಸಕೋಟೆ ತಾಲ್ಲೂಕು ಆಹಾರ ಸುರಕ್ಷತೆ ಅಧಿಕಾರಿ ಗೋವಿಂದರಾಜು ಮೊಬೈಲ್ ಸಂಖ್ಯೆ 9845511663, ದೇವನಹಳ್ಳಿ ತಾಲ್ಲೂಕು ಆಹಾರ ಸುರಕ್ಷತ ಅಧಿಕಾರಿ ಪ್ರವೀಣ್ ಮೊಬೈಲ್ ಸಂಖ್ಯೆ 8884393910, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ ತಾಲ್ಲೂಕು ಆಹಾರ ಸುರಕ್ಷತ ಅಧಿಕಾರಿ ನಾಗೇಶ್, ಮೊಬೈಲ್ ಸಂಖ್ಯೆ 9731837210 ಇವರನ್ನು ಸಂಪರ್ಕಿಸಿ ದೂರು ನೀಡಬಹುದಾಗಿದೆ.

ಸಭೆಯಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಪ್ರವೀಣ್, ಜಿಲ್ಲಾ ಕ್ಷಯರೋಗ ನಿಯಂತ್ರಣ ಆಧಿಕಾರಿ ಡಾ.ನಾಗೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮುದ್ದಣ್ಣ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಆಹಾರ ಸುರಕ್ಷತ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

13 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

22 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

23 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago