ಕೃಷಿಯಲ್ಲಿ ಡ್ರೋನ್ ಬಳಕೆ: ಏನಿದರ ಉಪಯೋಗ…..?

ದೊಡ್ಡಬಳ್ಳಾಪುರ: ಆಧುನಿಕ ಕೃಷಿಯಲ್ಲಿ ಡ್ರೋನ್ ತಂತ್ರಜ್ಞಾನವನ್ನು ಬಳಸಿ ಕೀಟನಾಶಕಗಳು ಮತ್ತು ಬೆಳೆ ಪೋಷಕಾಂಶಗಳನ್ನು ಪರಿಣಾಮಕಾರಿಯಾಗಿ ಹಾಗು ನಿಖರವಾಗಿ ಸಿಂಪಡಿಸುವಿಕೆಯ ಮೂಲಕ ಉತ್ಪಾದನೆಯನ್ನು ಹೆಚ್ಚಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ರಾಘವೇಂದ್ರ ತಿಳಿಸಿದರು.

ತಾಲ್ಲೂಕಿನ ಕಸಬಾ ಹೋಬಳಿಯ ಸೊಣ್ಣಪ್ಪನಹಳ್ಳಿ ಗ್ರಾಮದಲ್ಲಿರುವ ಆಯೋಜಿಸಿದ್ದ ಕೃಷಿ ಇಲಾಖೆ ವತಿಯಿಂದ ರಾಷ್ಟ್ರೀಯ ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆ ಹಾಗೂ ಕೃಷಿಯಲ್ಲಿ ಡ್ರೋನ್ ಬಳಕೆ ಕುರಿತು ತರಬೇತಿ ಮತ್ತು ಪ್ರಾತ್ಯಕ್ಷಿತೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರಸ್ತುತ ನಮ್ಮ ದೇಶದ ಜನಸಂಖ್ಯೆ 141 ಕೋಟಿಗಳಿದ್ದು, ಏರುತ್ತಿರುವ ಜನಸಂಖ್ಯೆಗೆ ಆಹಾರ ಒದಗಿಸುವ ಉದ್ದೇಶದಿಂದ ರಾಷ್ಟ್ರೀಯ ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಆಹಾರ ಬೆಳೆಗಳ “ವಿಸ್ತೀರ್ಣ, ಉತ್ಪಾದನೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ.

ಪ್ರಸ್ತುತ ದಿನಗಳಲ್ಲಿ ಕೃಷಿ ಕಾರ್ಮಿಕರ ಕೊರತೆ ಅತಿ ದೊಡ್ಡ ಸಮಸ್ಯೆಯಾಗಿದೆ. ಸಸ್ಯ ಪೋಷಕಾಂಶಗಳನ್ನು ಸಿಂಪಡಣೆ ಮಾಡಲು ಅಧಿಕ ಸಮಯ ಮತ್ತು ಹಣ ವ್ಯಯವಾಗುತ್ತಿದೆ. ಇದಕ್ಕೆ ಪರಿಹಾರವಾಗಿ ಕೃಷಿ ಡ್ರೋನ್ ಬಳಸಿ ಸಿಂಪಡಣೆ ಮಾಡುವುದು ಒಳ್ಳೆಯ ಮಾರ್ಗವಾಗಿದೆ ಎಂದು ತಿಳಿಸಿದರು.

ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರ, ವಿಜ್ಞಾನಿಗಳಾದ ಡಾ.ವೆಂಕಟೇಗೌಡ ಜೆ ಮಾತನಾಡಿ, ಯೂರಿಯಾವನ್ನು ಮೇಲುಗೊಬ್ಬರವಾಗಿ ಬೆಳೆಗಳಿಗೆ ಎರಚುವುದು ಪ್ರಸ್ತುತ ಚಾಲ್ತಿಯಲ್ಲಿರುವ ವಿಧಾನವಾಗಿದೆ. ಈ ವಿಧಾನದಿಂದ ಯೂರಿಯಾ ಹರಳುಗಳು ಸಸ್ಯಗಳ ಬೇರುಗಳಿಗೆ ಸೂಕ್ತವಾಗಿ ದೊರೆಯುವುದಿಲ್ಲ. ವಾತವಾರಣದಲ್ಲಿ ತಾಪಮಾನ ಹೆಚ್ಚಾದಂತೆ ಯೂರಿಯಾದಲ್ಲಿನ ಪೋಷಕಾಂಶವು ಆವಿಯಾಗಬಹುದು. ಹೆಚ್ಚಿನ ಮಳೆಂದ ಕೊಚ್ಚಿ ಹೋಗುವ ಸಾಧ್ಯತೆ ಇರುತ್ತದೆ.

ಈ ಸಮಸ್ಯೆಗಳಿಗೆ ಪರಿಹಾರವಾಗಿ ನ್ಯಾನೋ ಯೂರಿಯ ಸಿಂಪಡಣೆಯು ಯೋಗ್ಯ ಮಾರ್ಗವಾಗಿದೆ. ನ್ಯಾನೋ ಯೂರಿಯಾದ ಸೂಕ್ಷ್ಮ ಕಣಗಳು ಹೆಚ್ಚಿನ ಸುತ್ತಳತೆ ಹೊಂದಿದ್ದು, ಎಲೆಗಳ ಮೇಲೆ ಸಿಂಪರಣೆ ಮಾಡಿದಾಗ ಶೀರ್ಘವಾಗಿ ಎಲೆಗಳಲ್ಲಿನ ಸೂಕ್ಷ್ಮ ರಂಧ್ರಗಳಾದ ಸ್ಟೋಮ್ಯಾಟ ಮೂಲಕ ಸಸ್ಯದ ಶರೀರದೊಳಗೆ ಸೇರಿ ಪೋಷಕಾಂಶಗಳು ನ್ಯಾಯೋಚಿತವಾಗಿ ಸಸ್ಯದ ಬೆಳವಣಿಗೆಗೆ ದೊರೆಯುವಂತೆ ಮಾಡುತ್ತವೆ. ರೈತರು ಈ ತಂತ್ರಜ್ಞಾನವನ್ನು ಬಳಸಿಕೊಂಡು ಆಹಾರ ಧಾನ್ಯಗಳ ಉತ್ಪಾದನೆಯನ್ನು ಹೆಚ್ಚಿಸಿಕೊಳ್ಳುವಂತೆ ತಿಳಿಸಿದರು.

ಇಫ್ಕೋ ಸಂಸ್ಥೆಯ ಚೇತನ್ ಮಾತನಾಡಿ, ನ್ಯಾನೋ ಯೂರಿಯಾ ಬಳಕೆಗೆ ರೈತರ ಖರ್ಚು ಕಡಿಮೆಯಾಗುವುದಲ್ಲದೇ ರೈತರು ಹೆಚ್ಚಿನ ಆದಾಯ ಪಡೆಯಬಹುದು. ನ್ಯಾನೋ ಯೂರಿಯಾ ಮತ್ತು ನ್ಯಾನೋ ಡಿಎಪಿಯನ್ನು ಡ್ರೋನ್ ಮೂಲಕ ಸಿಂಪಡಣೆ ಮಾಡುವುದರ ಮೂಲಕ ರೈತರು ಕೃಷಿ ಕಾರ್ಮಿಕರ ಕೊರತೆ ನೀಗಿಸಬಹುದೆಂದು ತಿಳಿಸಿದರು.

ಕೊನೆಯಲ್ಲಿ ಸೊಣ್ಣಪ್ಪನಹಳ್ಳಿ ಗ್ರಾಮದ ರೈತ ಸದಾಶಿವಮೂರ್ತಿ ಅವರ ಜಮೀನಿನಲ್ಲಿ ಬೆಳೆಯಲಾಗುತ್ತಿರುವ ರಾಗಿ ಬೆಳೆಗೆ ಡ್ರೋನ್ ಬಳಸಿ ನ್ಯಾನೋ ಯೂರಿಯಾ ವನ್ನು ಸಿಂಪಡಣೆ ಮಾಡುವ ವಿಧಾನವನ್ನು ಪ್ರಾತ್ಯಕ್ಷಿಕೆ ಕೈಗೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಕೊನ್ನಘಟ್ಟ ಗ್ರಾಮ ಪಂಚಾತಿಯ ಅಧ್ಯಕ್ಷೆ ಮಂಗಳ, ಸದಸ್ಯ ಪ್ರಭಾಕರ್, ಇಪ್ಕೋ ಸಂಸ್ಥೆಯ ಪ್ರತಿನಿಧಿಗಳು, ಪ್ರಗತಿ ಪರ ರೈತರು, ಗ್ರಾಮದ ರೈತರು,ರೈತ ಮಹಿಳೆಯರು, ಕೃಷಿ ಅಧಿಕಾರಿಗಳು ಹಾಗೂ ಆತ್ಮ ಸಿಬ್ಬಂದಿ ಭಾಗವಸಿದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

52 minutes ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

3 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

4 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

8 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

9 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

17 hours ago