ಕೃಷಿಹೊಂಡಕ್ಕೆ ಬಿದ್ದು ಇಬ್ಬರು ಪ್ರೇಮಿಗಳ ಸಾವು: ಬೇರೊಬ್ಬನ ಜೊತೆ ಮದುವೆಯಾಗಿದ್ದರು ಪ್ರಿಯತಮನ ಮೇಲೆ ಇನ್ನೂ ಇತ್ತು ಪ್ರೀತಿ: ಆಷಾಡ ಮಾಸ ಹಿನ್ನೆಲೆ ತವರು‌ ಮನೆಗೆ ಬಂದು ಪ್ರಿಯಕರನ ಜೊತೆ ಸಾವು

ಕೃಷಿಹೊಂಡಕ್ಕೆ ಬಿದ್ದು ಇಬ್ಬರು ಪ್ರೇಮಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುದ್ದಲಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಮೃತ ಯುವತಿಯನ್ನು ಕಾಚಹಳ್ಳಿ ಗ್ರಾಮದ ಅನುಷಾ (19) ಹಾಗೂ ಕೋರ್ಲಪರ್ತಿ ಬಳಿಯ ಎಂ.ಮುದ್ದಲಹಳ್ಳಿ ಗ್ರಾಮದ ವೇಣು (21) ಎಂದು ತಿಳಿದು ಬಂದಿದೆ.

ದೊಡ್ಡಪಲ್ಲಿ ಗ್ರಾಮ, ಸೋಮನಾಥಪುರ ಪಂಚಾಯತಿ, ಚೇಳೂರು ತಾಲೂಕಿನ ವಕ್ಕಲಿಗ ಜನಾಂಗಕ್ಕೆ ಸೇರಿದ ಅನುಷಾ ಹಾಗೂ ಚಿಂತಾಮಣಿ ತಾಲೂಕಿನ ಎಂ ಮುದ್ದಲಹಳ್ಳಿ ಗ್ರಾಮದ ಅಜ್ಜಿ ಮನೆಗೆ ರಜೆ ದಿನಗಳಲ್ಲಿ ಆಗಾಗ ಬರುತ್ತಿದ್ದಳು. ಇದೇ ವೇಳೆ ಅದೇ ಗ್ರಾಮದ ಭೋವಿ ಸಮಾಜದ ವೇಣು ಎಂಬ ಯುವಕನ ಜೊತೆಯಲ್ಲಿ ಪ್ರೀತಿಯಲ್ಲಿ ಬಿದ್ದಿದ್ದು, ಸುಮಾರು 2 ವರ್ಷಗಳಿಂದ ಪ್ರೀತಿಯಲ್ಲಿದ್ದರು.

ಪ್ರೀತಿ ವಿಚಾರ ಯುವತಿಯ ಮನೆಯಲ್ಲಿ ಗೋತ್ತಾಗಿ ಪ್ರೀತಿಯನ್ನು ಒಪ್ಪದೇ ಚಿಂತಾಮಣಿ ತಾಲೂಕಿನ ಕಾಚಹಳ್ಳಿ ಗ್ರಾಮದ ಚೌಡರೆಡ್ಡಿ ಎಂಬ ಯುವಕನ ಜೊತೆ ಕಳೆದ ತಿಂಗಳು ಯುವತಿಗೆ ಮದುವೆ ಮಾಡಿಸಿದ್ದರು.

ಇನ್ನೂ ಗಂಡನ ಜೊತೆ ದಾಬಸ್ ಪೇಟೆಯಲ್ಲಿ ಸಂಸಾರ ನಡೆಸುತ್ತಿದ್ದ ಅನುಷಾಳನ್ನು ಗಂಡ ಚೌಡರೆಡ್ಡಿ ಅಶಾಡ ಮಾಸದ ಸಲುವಾಗಿ ಅನುಷಾಳ ತವರೂರು ದೊಡ್ಡಪಲ್ಲಿ ಬಿಡುತ್ತಾನೆ.

ಇನ್ನು ಮೊದಲೇ ಪ್ರೀತಿಯಲ್ಲಿದ್ದ ಅನುಷಾ ಹಾಗೂ ವೇಣು ಮತ್ತೆ ದೂರವಾಣಿ ಮೂಲಕ ಸಂಪರ್ಕ ಮಾಡಿಕೊಂಡಿದ್ದಾರೆ. ಇನ್ನೂ ಗಂಡನಿಗೆ ಎಟಿಎಂ ಮಾಡಿಸಬೇಕು ಎಂದು ಮನೆಯಿಂದ ಹೊರ ಹೋಗಿದ್ದಾಳೆ. ಪ್ರೀಯಕರ ವೇಣು ಜೊತೆ ಸೇರಿ ಎಂ ಮುದ್ದಲಹಳ್ಳಿ ಗ್ರಾಮದ ತೋಟಕ್ಕೆ ಹೋಗಿ ಕೆಲಸಮಯ ಮಾತುಕತೆ ನಡೆಸಿಕೊಂಡು ನಮ್ಮನ್ನು ಈ ಪ್ರಪಂಚದಲ್ಲಿ ಬದುಕಲು ಬಿಡುವುದಿಲ್ಲ ಎಂದು ಚಲಪತಿ ಎಂಬುವವರ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ತಮ್ಮ ಮೊಬೈಲ್ ಫೋನ್ ಹಾಗೂ ಪರ್ಸ್ ಗಳನ್ನು ಪಕ್ಕಕ್ಕೆ ಇಟ್ಟು, ಇಬ್ಬರು ಅಪ್ಪಿಕೊಂಡು ವೇಲ್ ನಲ್ಲಿ ಸುತ್ತಿಕೊಂಡು ಕೃಷಿಹೊಂಡಕ್ಕೆ ಹಾರಿ ಬಿದ್ದಿದ್ದಾರೆ.

ಇನ್ನೂ ಸಂಜೆಯ ನಂತರ ಗಂಡ ಚೌಡರೆಡ್ಡಿ ಅನುಷಾಗೆ ಫೋನ್ ಮಾಡಿದರು ತಗೆಯದ ಹಿನ್ನೆಲೆ ಗ್ರಾಮಕ್ಕೆ ಬಂದು ಹುಡುಕಾಟ ನಡೆಸಿ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಚಲಪತಿ ಅವರು ತೋಟಕ್ಕೆ ಬಂದ ವೇಳೆ ಮೊಬೈಲ್ ಫೋನ್ ಗಳು ಹಾಗೂ ಪರ್ಸ್, ಚಪ್ಪಲಿಗಳನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿಯಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕೃಷಿಹೊಂಡದಲ್ಲಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಇಬ್ಬರು ವೇಲ್ ಸುತ್ತಿಕೊಂಡು ಕೃಷಿಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಮಿಸ್ಸಿಂಗ್ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಅನುಷಾ ಗಂಡ ಚೌಡರೆಡ್ಡಿ ಅವರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರ ಮಾಹಿತಿಯಂತೆ ಸ್ಥಳಕ್ಕೆ ಭೇಟಿ ಕೊಟ್ಟ ಗಂಡ ಚೌಡರೆಡ್ಡಿ ಮೃತಳನ್ನು ಪತ್ನಿ ಎಂದು ಗುರುತ್ತಿಸಿದ್ದಾನೆ.

ಇನ್ನೂ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮೃತ ದೇಹಗಳನ್ನು ಚಿಂತಾಮಣಿ ಸಾರ್ವಜನಿಕ ಶವಗಾರಕ್ಕೆ ರವಾನಿಸಿದ್ದು, ಕೇಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

12 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

20 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

22 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

23 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago