ಕೃಷಿಹೊಂಡಕ್ಕೆ ಬಿದ್ದು ಇಬ್ಬರು ಪ್ರೇಮಿಗಳ ಸಾವು: ಬೇರೊಬ್ಬನ ಜೊತೆ ಮದುವೆಯಾಗಿದ್ದರು ಪ್ರಿಯತಮನ ಮೇಲೆ ಇನ್ನೂ ಇತ್ತು ಪ್ರೀತಿ: ಆಷಾಡ ಮಾಸ ಹಿನ್ನೆಲೆ ತವರು‌ ಮನೆಗೆ ಬಂದು ಪ್ರಿಯಕರನ ಜೊತೆ ಸಾವು

ಕೃಷಿಹೊಂಡಕ್ಕೆ ಬಿದ್ದು ಇಬ್ಬರು ಪ್ರೇಮಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುದ್ದಲಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಮೃತ ಯುವತಿಯನ್ನು ಕಾಚಹಳ್ಳಿ ಗ್ರಾಮದ ಅನುಷಾ (19) ಹಾಗೂ ಕೋರ್ಲಪರ್ತಿ ಬಳಿಯ ಎಂ.ಮುದ್ದಲಹಳ್ಳಿ ಗ್ರಾಮದ ವೇಣು (21) ಎಂದು ತಿಳಿದು ಬಂದಿದೆ.

ದೊಡ್ಡಪಲ್ಲಿ ಗ್ರಾಮ, ಸೋಮನಾಥಪುರ ಪಂಚಾಯತಿ, ಚೇಳೂರು ತಾಲೂಕಿನ ವಕ್ಕಲಿಗ ಜನಾಂಗಕ್ಕೆ ಸೇರಿದ ಅನುಷಾ ಹಾಗೂ ಚಿಂತಾಮಣಿ ತಾಲೂಕಿನ ಎಂ ಮುದ್ದಲಹಳ್ಳಿ ಗ್ರಾಮದ ಅಜ್ಜಿ ಮನೆಗೆ ರಜೆ ದಿನಗಳಲ್ಲಿ ಆಗಾಗ ಬರುತ್ತಿದ್ದಳು. ಇದೇ ವೇಳೆ ಅದೇ ಗ್ರಾಮದ ಭೋವಿ ಸಮಾಜದ ವೇಣು ಎಂಬ ಯುವಕನ ಜೊತೆಯಲ್ಲಿ ಪ್ರೀತಿಯಲ್ಲಿ ಬಿದ್ದಿದ್ದು, ಸುಮಾರು 2 ವರ್ಷಗಳಿಂದ ಪ್ರೀತಿಯಲ್ಲಿದ್ದರು.

ಪ್ರೀತಿ ವಿಚಾರ ಯುವತಿಯ ಮನೆಯಲ್ಲಿ ಗೋತ್ತಾಗಿ ಪ್ರೀತಿಯನ್ನು ಒಪ್ಪದೇ ಚಿಂತಾಮಣಿ ತಾಲೂಕಿನ ಕಾಚಹಳ್ಳಿ ಗ್ರಾಮದ ಚೌಡರೆಡ್ಡಿ ಎಂಬ ಯುವಕನ ಜೊತೆ ಕಳೆದ ತಿಂಗಳು ಯುವತಿಗೆ ಮದುವೆ ಮಾಡಿಸಿದ್ದರು.

ಇನ್ನೂ ಗಂಡನ ಜೊತೆ ದಾಬಸ್ ಪೇಟೆಯಲ್ಲಿ ಸಂಸಾರ ನಡೆಸುತ್ತಿದ್ದ ಅನುಷಾಳನ್ನು ಗಂಡ ಚೌಡರೆಡ್ಡಿ ಅಶಾಡ ಮಾಸದ ಸಲುವಾಗಿ ಅನುಷಾಳ ತವರೂರು ದೊಡ್ಡಪಲ್ಲಿ ಬಿಡುತ್ತಾನೆ.

ಇನ್ನು ಮೊದಲೇ ಪ್ರೀತಿಯಲ್ಲಿದ್ದ ಅನುಷಾ ಹಾಗೂ ವೇಣು ಮತ್ತೆ ದೂರವಾಣಿ ಮೂಲಕ ಸಂಪರ್ಕ ಮಾಡಿಕೊಂಡಿದ್ದಾರೆ. ಇನ್ನೂ ಗಂಡನಿಗೆ ಎಟಿಎಂ ಮಾಡಿಸಬೇಕು ಎಂದು ಮನೆಯಿಂದ ಹೊರ ಹೋಗಿದ್ದಾಳೆ. ಪ್ರೀಯಕರ ವೇಣು ಜೊತೆ ಸೇರಿ ಎಂ ಮುದ್ದಲಹಳ್ಳಿ ಗ್ರಾಮದ ತೋಟಕ್ಕೆ ಹೋಗಿ ಕೆಲಸಮಯ ಮಾತುಕತೆ ನಡೆಸಿಕೊಂಡು ನಮ್ಮನ್ನು ಈ ಪ್ರಪಂಚದಲ್ಲಿ ಬದುಕಲು ಬಿಡುವುದಿಲ್ಲ ಎಂದು ಚಲಪತಿ ಎಂಬುವವರ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ತಮ್ಮ ಮೊಬೈಲ್ ಫೋನ್ ಹಾಗೂ ಪರ್ಸ್ ಗಳನ್ನು ಪಕ್ಕಕ್ಕೆ ಇಟ್ಟು, ಇಬ್ಬರು ಅಪ್ಪಿಕೊಂಡು ವೇಲ್ ನಲ್ಲಿ ಸುತ್ತಿಕೊಂಡು ಕೃಷಿಹೊಂಡಕ್ಕೆ ಹಾರಿ ಬಿದ್ದಿದ್ದಾರೆ.

ಇನ್ನೂ ಸಂಜೆಯ ನಂತರ ಗಂಡ ಚೌಡರೆಡ್ಡಿ ಅನುಷಾಗೆ ಫೋನ್ ಮಾಡಿದರು ತಗೆಯದ ಹಿನ್ನೆಲೆ ಗ್ರಾಮಕ್ಕೆ ಬಂದು ಹುಡುಕಾಟ ನಡೆಸಿ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಚಲಪತಿ ಅವರು ತೋಟಕ್ಕೆ ಬಂದ ವೇಳೆ ಮೊಬೈಲ್ ಫೋನ್ ಗಳು ಹಾಗೂ ಪರ್ಸ್, ಚಪ್ಪಲಿಗಳನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿಯಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕೃಷಿಹೊಂಡದಲ್ಲಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಇಬ್ಬರು ವೇಲ್ ಸುತ್ತಿಕೊಂಡು ಕೃಷಿಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಮಿಸ್ಸಿಂಗ್ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಅನುಷಾ ಗಂಡ ಚೌಡರೆಡ್ಡಿ ಅವರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರ ಮಾಹಿತಿಯಂತೆ ಸ್ಥಳಕ್ಕೆ ಭೇಟಿ ಕೊಟ್ಟ ಗಂಡ ಚೌಡರೆಡ್ಡಿ ಮೃತಳನ್ನು ಪತ್ನಿ ಎಂದು ಗುರುತ್ತಿಸಿದ್ದಾನೆ.

ಇನ್ನೂ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮೃತ ದೇಹಗಳನ್ನು ಚಿಂತಾಮಣಿ ಸಾರ್ವಜನಿಕ ಶವಗಾರಕ್ಕೆ ರವಾನಿಸಿದ್ದು, ಕೇಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 hour ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

6 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

19 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

23 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

23 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago