ಕೃಷಿಹೊಂಡಕ್ಕೆ ಬಿದ್ದು ಇಬ್ಬರು ಪ್ರೇಮಿಗಳ ಸಾವು: ಬೇರೊಬ್ಬನ ಜೊತೆ ಮದುವೆಯಾಗಿದ್ದರು ಪ್ರಿಯತಮನ ಮೇಲೆ ಇನ್ನೂ ಇತ್ತು ಪ್ರೀತಿ: ಆಷಾಡ ಮಾಸ ಹಿನ್ನೆಲೆ ತವರು‌ ಮನೆಗೆ ಬಂದು ಪ್ರಿಯಕರನ ಜೊತೆ ಸಾವು

ಕೃಷಿಹೊಂಡಕ್ಕೆ ಬಿದ್ದು ಇಬ್ಬರು ಪ್ರೇಮಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುದ್ದಲಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಮೃತ ಯುವತಿಯನ್ನು ಕಾಚಹಳ್ಳಿ ಗ್ರಾಮದ ಅನುಷಾ (19) ಹಾಗೂ ಕೋರ್ಲಪರ್ತಿ ಬಳಿಯ ಎಂ.ಮುದ್ದಲಹಳ್ಳಿ ಗ್ರಾಮದ ವೇಣು (21) ಎಂದು ತಿಳಿದು ಬಂದಿದೆ.

ದೊಡ್ಡಪಲ್ಲಿ ಗ್ರಾಮ, ಸೋಮನಾಥಪುರ ಪಂಚಾಯತಿ, ಚೇಳೂರು ತಾಲೂಕಿನ ವಕ್ಕಲಿಗ ಜನಾಂಗಕ್ಕೆ ಸೇರಿದ ಅನುಷಾ ಹಾಗೂ ಚಿಂತಾಮಣಿ ತಾಲೂಕಿನ ಎಂ ಮುದ್ದಲಹಳ್ಳಿ ಗ್ರಾಮದ ಅಜ್ಜಿ ಮನೆಗೆ ರಜೆ ದಿನಗಳಲ್ಲಿ ಆಗಾಗ ಬರುತ್ತಿದ್ದಳು. ಇದೇ ವೇಳೆ ಅದೇ ಗ್ರಾಮದ ಭೋವಿ ಸಮಾಜದ ವೇಣು ಎಂಬ ಯುವಕನ ಜೊತೆಯಲ್ಲಿ ಪ್ರೀತಿಯಲ್ಲಿ ಬಿದ್ದಿದ್ದು, ಸುಮಾರು 2 ವರ್ಷಗಳಿಂದ ಪ್ರೀತಿಯಲ್ಲಿದ್ದರು.

ಪ್ರೀತಿ ವಿಚಾರ ಯುವತಿಯ ಮನೆಯಲ್ಲಿ ಗೋತ್ತಾಗಿ ಪ್ರೀತಿಯನ್ನು ಒಪ್ಪದೇ ಚಿಂತಾಮಣಿ ತಾಲೂಕಿನ ಕಾಚಹಳ್ಳಿ ಗ್ರಾಮದ ಚೌಡರೆಡ್ಡಿ ಎಂಬ ಯುವಕನ ಜೊತೆ ಕಳೆದ ತಿಂಗಳು ಯುವತಿಗೆ ಮದುವೆ ಮಾಡಿಸಿದ್ದರು.

ಇನ್ನೂ ಗಂಡನ ಜೊತೆ ದಾಬಸ್ ಪೇಟೆಯಲ್ಲಿ ಸಂಸಾರ ನಡೆಸುತ್ತಿದ್ದ ಅನುಷಾಳನ್ನು ಗಂಡ ಚೌಡರೆಡ್ಡಿ ಅಶಾಡ ಮಾಸದ ಸಲುವಾಗಿ ಅನುಷಾಳ ತವರೂರು ದೊಡ್ಡಪಲ್ಲಿ ಬಿಡುತ್ತಾನೆ.

ಇನ್ನು ಮೊದಲೇ ಪ್ರೀತಿಯಲ್ಲಿದ್ದ ಅನುಷಾ ಹಾಗೂ ವೇಣು ಮತ್ತೆ ದೂರವಾಣಿ ಮೂಲಕ ಸಂಪರ್ಕ ಮಾಡಿಕೊಂಡಿದ್ದಾರೆ. ಇನ್ನೂ ಗಂಡನಿಗೆ ಎಟಿಎಂ ಮಾಡಿಸಬೇಕು ಎಂದು ಮನೆಯಿಂದ ಹೊರ ಹೋಗಿದ್ದಾಳೆ. ಪ್ರೀಯಕರ ವೇಣು ಜೊತೆ ಸೇರಿ ಎಂ ಮುದ್ದಲಹಳ್ಳಿ ಗ್ರಾಮದ ತೋಟಕ್ಕೆ ಹೋಗಿ ಕೆಲಸಮಯ ಮಾತುಕತೆ ನಡೆಸಿಕೊಂಡು ನಮ್ಮನ್ನು ಈ ಪ್ರಪಂಚದಲ್ಲಿ ಬದುಕಲು ಬಿಡುವುದಿಲ್ಲ ಎಂದು ಚಲಪತಿ ಎಂಬುವವರ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ತಮ್ಮ ಮೊಬೈಲ್ ಫೋನ್ ಹಾಗೂ ಪರ್ಸ್ ಗಳನ್ನು ಪಕ್ಕಕ್ಕೆ ಇಟ್ಟು, ಇಬ್ಬರು ಅಪ್ಪಿಕೊಂಡು ವೇಲ್ ನಲ್ಲಿ ಸುತ್ತಿಕೊಂಡು ಕೃಷಿಹೊಂಡಕ್ಕೆ ಹಾರಿ ಬಿದ್ದಿದ್ದಾರೆ.

ಇನ್ನೂ ಸಂಜೆಯ ನಂತರ ಗಂಡ ಚೌಡರೆಡ್ಡಿ ಅನುಷಾಗೆ ಫೋನ್ ಮಾಡಿದರು ತಗೆಯದ ಹಿನ್ನೆಲೆ ಗ್ರಾಮಕ್ಕೆ ಬಂದು ಹುಡುಕಾಟ ನಡೆಸಿ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಚಲಪತಿ ಅವರು ತೋಟಕ್ಕೆ ಬಂದ ವೇಳೆ ಮೊಬೈಲ್ ಫೋನ್ ಗಳು ಹಾಗೂ ಪರ್ಸ್, ಚಪ್ಪಲಿಗಳನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿಯಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕೃಷಿಹೊಂಡದಲ್ಲಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಇಬ್ಬರು ವೇಲ್ ಸುತ್ತಿಕೊಂಡು ಕೃಷಿಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಮಿಸ್ಸಿಂಗ್ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಅನುಷಾ ಗಂಡ ಚೌಡರೆಡ್ಡಿ ಅವರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರ ಮಾಹಿತಿಯಂತೆ ಸ್ಥಳಕ್ಕೆ ಭೇಟಿ ಕೊಟ್ಟ ಗಂಡ ಚೌಡರೆಡ್ಡಿ ಮೃತಳನ್ನು ಪತ್ನಿ ಎಂದು ಗುರುತ್ತಿಸಿದ್ದಾನೆ.

ಇನ್ನೂ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮೃತ ದೇಹಗಳನ್ನು ಚಿಂತಾಮಣಿ ಸಾರ್ವಜನಿಕ ಶವಗಾರಕ್ಕೆ ರವಾನಿಸಿದ್ದು, ಕೇಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

2 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

4 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

7 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

21 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago