ಕೃಷಿಹೊಂಡಕ್ಕೆ ಬಿದ್ದು ಇಬ್ಬರು ಪ್ರೇಮಿಗಳ ಸಾವು: ಬೇರೊಬ್ಬನ ಜೊತೆ ಮದುವೆಯಾಗಿದ್ದರು ಪ್ರಿಯತಮನ ಮೇಲೆ ಇನ್ನೂ ಇತ್ತು ಪ್ರೀತಿ: ಆಷಾಡ ಮಾಸ ಹಿನ್ನೆಲೆ ತವರು‌ ಮನೆಗೆ ಬಂದು ಪ್ರಿಯಕರನ ಜೊತೆ ಸಾವು

ಕೃಷಿಹೊಂಡಕ್ಕೆ ಬಿದ್ದು ಇಬ್ಬರು ಪ್ರೇಮಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುದ್ದಲಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಮೃತ ಯುವತಿಯನ್ನು ಕಾಚಹಳ್ಳಿ ಗ್ರಾಮದ ಅನುಷಾ (19) ಹಾಗೂ ಕೋರ್ಲಪರ್ತಿ ಬಳಿಯ ಎಂ.ಮುದ್ದಲಹಳ್ಳಿ ಗ್ರಾಮದ ವೇಣು (21) ಎಂದು ತಿಳಿದು ಬಂದಿದೆ.

ದೊಡ್ಡಪಲ್ಲಿ ಗ್ರಾಮ, ಸೋಮನಾಥಪುರ ಪಂಚಾಯತಿ, ಚೇಳೂರು ತಾಲೂಕಿನ ವಕ್ಕಲಿಗ ಜನಾಂಗಕ್ಕೆ ಸೇರಿದ ಅನುಷಾ ಹಾಗೂ ಚಿಂತಾಮಣಿ ತಾಲೂಕಿನ ಎಂ ಮುದ್ದಲಹಳ್ಳಿ ಗ್ರಾಮದ ಅಜ್ಜಿ ಮನೆಗೆ ರಜೆ ದಿನಗಳಲ್ಲಿ ಆಗಾಗ ಬರುತ್ತಿದ್ದಳು. ಇದೇ ವೇಳೆ ಅದೇ ಗ್ರಾಮದ ಭೋವಿ ಸಮಾಜದ ವೇಣು ಎಂಬ ಯುವಕನ ಜೊತೆಯಲ್ಲಿ ಪ್ರೀತಿಯಲ್ಲಿ ಬಿದ್ದಿದ್ದು, ಸುಮಾರು 2 ವರ್ಷಗಳಿಂದ ಪ್ರೀತಿಯಲ್ಲಿದ್ದರು.

ಪ್ರೀತಿ ವಿಚಾರ ಯುವತಿಯ ಮನೆಯಲ್ಲಿ ಗೋತ್ತಾಗಿ ಪ್ರೀತಿಯನ್ನು ಒಪ್ಪದೇ ಚಿಂತಾಮಣಿ ತಾಲೂಕಿನ ಕಾಚಹಳ್ಳಿ ಗ್ರಾಮದ ಚೌಡರೆಡ್ಡಿ ಎಂಬ ಯುವಕನ ಜೊತೆ ಕಳೆದ ತಿಂಗಳು ಯುವತಿಗೆ ಮದುವೆ ಮಾಡಿಸಿದ್ದರು.

ಇನ್ನೂ ಗಂಡನ ಜೊತೆ ದಾಬಸ್ ಪೇಟೆಯಲ್ಲಿ ಸಂಸಾರ ನಡೆಸುತ್ತಿದ್ದ ಅನುಷಾಳನ್ನು ಗಂಡ ಚೌಡರೆಡ್ಡಿ ಅಶಾಡ ಮಾಸದ ಸಲುವಾಗಿ ಅನುಷಾಳ ತವರೂರು ದೊಡ್ಡಪಲ್ಲಿ ಬಿಡುತ್ತಾನೆ.

ಇನ್ನು ಮೊದಲೇ ಪ್ರೀತಿಯಲ್ಲಿದ್ದ ಅನುಷಾ ಹಾಗೂ ವೇಣು ಮತ್ತೆ ದೂರವಾಣಿ ಮೂಲಕ ಸಂಪರ್ಕ ಮಾಡಿಕೊಂಡಿದ್ದಾರೆ. ಇನ್ನೂ ಗಂಡನಿಗೆ ಎಟಿಎಂ ಮಾಡಿಸಬೇಕು ಎಂದು ಮನೆಯಿಂದ ಹೊರ ಹೋಗಿದ್ದಾಳೆ. ಪ್ರೀಯಕರ ವೇಣು ಜೊತೆ ಸೇರಿ ಎಂ ಮುದ್ದಲಹಳ್ಳಿ ಗ್ರಾಮದ ತೋಟಕ್ಕೆ ಹೋಗಿ ಕೆಲಸಮಯ ಮಾತುಕತೆ ನಡೆಸಿಕೊಂಡು ನಮ್ಮನ್ನು ಈ ಪ್ರಪಂಚದಲ್ಲಿ ಬದುಕಲು ಬಿಡುವುದಿಲ್ಲ ಎಂದು ಚಲಪತಿ ಎಂಬುವವರ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ತಮ್ಮ ಮೊಬೈಲ್ ಫೋನ್ ಹಾಗೂ ಪರ್ಸ್ ಗಳನ್ನು ಪಕ್ಕಕ್ಕೆ ಇಟ್ಟು, ಇಬ್ಬರು ಅಪ್ಪಿಕೊಂಡು ವೇಲ್ ನಲ್ಲಿ ಸುತ್ತಿಕೊಂಡು ಕೃಷಿಹೊಂಡಕ್ಕೆ ಹಾರಿ ಬಿದ್ದಿದ್ದಾರೆ.

ಇನ್ನೂ ಸಂಜೆಯ ನಂತರ ಗಂಡ ಚೌಡರೆಡ್ಡಿ ಅನುಷಾಗೆ ಫೋನ್ ಮಾಡಿದರು ತಗೆಯದ ಹಿನ್ನೆಲೆ ಗ್ರಾಮಕ್ಕೆ ಬಂದು ಹುಡುಕಾಟ ನಡೆಸಿ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಚಲಪತಿ ಅವರು ತೋಟಕ್ಕೆ ಬಂದ ವೇಳೆ ಮೊಬೈಲ್ ಫೋನ್ ಗಳು ಹಾಗೂ ಪರ್ಸ್, ಚಪ್ಪಲಿಗಳನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿಯಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕೃಷಿಹೊಂಡದಲ್ಲಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಇಬ್ಬರು ವೇಲ್ ಸುತ್ತಿಕೊಂಡು ಕೃಷಿಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಮಿಸ್ಸಿಂಗ್ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಅನುಷಾ ಗಂಡ ಚೌಡರೆಡ್ಡಿ ಅವರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರ ಮಾಹಿತಿಯಂತೆ ಸ್ಥಳಕ್ಕೆ ಭೇಟಿ ಕೊಟ್ಟ ಗಂಡ ಚೌಡರೆಡ್ಡಿ ಮೃತಳನ್ನು ಪತ್ನಿ ಎಂದು ಗುರುತ್ತಿಸಿದ್ದಾನೆ.

ಇನ್ನೂ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮೃತ ದೇಹಗಳನ್ನು ಚಿಂತಾಮಣಿ ಸಾರ್ವಜನಿಕ ಶವಗಾರಕ್ಕೆ ರವಾನಿಸಿದ್ದು, ಕೇಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Ramesh Babu

Journalist

Recent Posts

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

5 hours ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

6 hours ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

19 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

19 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

22 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

2 days ago