ಕೃಷಿ ಇಲಾಖೆ ವತಿಯಿಂದ ಮುಂಗಾರು ಹಂಗಾಮಿಗೆ ಪೂರ್ವ ಸಿದ್ಧತೆ

ಜಿಲ್ಲೆಯಲ್ಲಿ ಈ ವರ್ಷದ ಮುಂಗಾರು ಹಂಗಾಮಿಗೆ ಕೃಷಿ ಇಲಾಖೆಯಿಂದ ಹಲವು ಪೂರ್ವಸಿದ್ಧತೆಯನ್ನು ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಗುಣ ನಿಯಂತ್ರಣ ಸಪ್ತಾಹವನ್ನು ಮೇ 19 ರಿಂದ 23 ರವರೆಗೆ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಬೇಕಾದ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಪ್ತಾಹದ ಅಂಗವಾಗಿ ಉಪ ಕೃಷಿ ನಿರ್ದೇಶಕರ ನೇತೃತ್ವದಲ್ಲಿ ನಾಲ್ಕು ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು ಮತ್ತು ಕೃಷಿ ಅಧಿಕಾರಿಗಳ ತಂಡವನ್ನು ರಚಿಸಿ, ಜಿಲ್ಲೆಗೆ ವ್ಯಾಪ್ತಿಗೆ ಒಳಪಡುವ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಮಾರಾಟ ಮಳಿಗೆಗಳ ತಪಾಸಣೆ ಮಾಡಲಾಗುವುದು.

ಜಿಲ್ಲೆಯಲ್ಲಿ ಈವರೆಗೆ 95 ಪರಿಕರ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿದ್ದು, 66 ಬಿತ್ತನೆ ಬೀಜದ ಮಾದರಿಗಳು, 36 ರಸಗೊಬ್ಬರ ಮಾದರಿಗಳು ಮತ್ತು 21 ಕೀಟನಾಶಕ ಮಾದರಿಗಳನ್ನು ಸಂಗ್ರಹಿಸಿ ಅವುಗಳ ಗುಣಮಟ್ಟ ಪರಿಶೀಲನೆಗಾಗಿ ಕಳುಹಿಸಿದ್ದು, ಇದರಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳು ನಕಲಿ ಎಂದು ತಿಳಿದು ಬಂದರೆ ಅಂತಹ ಕಳಪೆ ಗುಣಮಟ್ಟದ ವಸ್ತುಗಳನ್ನು ಖರೀದಿಸದಂತೆ ಜಾಗೃತಿ ಮೂಡಿಸುವ ಸಲುವಾಗಿ ರೈತರಿಗೆ ಸಲಹೆಯನ್ನು ನೀಡಲಾಗುವುದು.

*ರೈತರು ಹೊಲಗಳಲ್ಲಿ ಕಂದಕ, ಬದುಗಳನ್ನು ನಿರ್ಮಿಸಿ*
ಜಲಾನಯನ ಹಾಗೂ ನರೇಗಾ ಯೋಜನೆಯಡಿ ವ್ಯಾಪ್ತಿಗೆ ಒಳಪಡುವ ಎಲ್ಲಾ ರೈತರು ತಮ್ಮ ಜಮೀನುಗಳಲ್ಲಿ ಇಂಗು ಗುಂಡಿಗಳನ್ನು (5 ಮೀ ಉದ್ದ , 1 ಮೀ ಅಗಲ, 2ಅಡಿ ಆಳ) ನಿರ್ಮಾಣ ಮಾಡಿಕೊಳ್ಳಬೇಕು. ಈ ರೀತಿಯಲ್ಲಿ ಎಕರೆಗೆ 20 ಕಂದಕಗಳನ್ನು ನಿರ್ಮಿಸಿದರೆ, ಒಂದು ಕಂದಕದಿಂದ 3 ಸಾವಿರ ಲೀಟರ್ ನಂತೆ, ಒಟ್ಟಾರೆ 20 ಕಂದಕದಿಂದ 50 ಸಾವಿರ ಲೀಟರ್ ನೀರನ್ನು ಸಂಗ್ರಹಿಸಬಹುದು. ಹೀಗೆ ವರ್ಷದಲ್ಲಿ ಬೀಳುವ 8 ರಿಂದ 10 ಮಳೆಗೆ ಕನಿಷ್ಠ 5 ಲಕ್ಷ ಲೀಟರ್ ನೀರನ್ನು ಶೇಖರಿಸಬಹುದು.ಈ ರೀತಿ ಮಾಡುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗಿ ಎಲ್ಲಾ ಕೊಳವೆ ಬಾವಿಗಳಲ್ಲಿ ನೀರು ಸಿಗುವ ಲಭ್ಯತೆ ಹೆಚ್ಚಾಗುತ್ತದೆ. ಮಳೆಗಾಲ ಮುಗಿದ ನಂತರ ಟ್ಯಾಂಕರ್ ನೀರಿನ ಮೇಲಿನ ಅವಲಂಬನೆ ಕ್ರಮೇಣ ಕಡಿಮೆಯಗುತ್ತದೆ.

*ದೇಸಿ ತಳಿ ಇದ್ದರೆ ನೋಂದಾಯಿಸಿಕೊಳ್ಳಿ*
ದೇಸಿ ತಳಿಗಳ ಸಂರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಕೃಷಿ ಇಲಾಖೆ ವತಿಯಿಂದ ಸಂರಕ್ಷಣೆ ಮತ್ತು ಉತ್ತೇಜನ ನೀಡಲು ವಿವಿಧ ರೀತಿಯ ಕಾರ್ಯಕ್ರಮಗಳನ್ನು ಮಾಡುತ್ತಿದೆ. ದೇಸಿ ತಳಿಗಳನ್ನು ಸಂರಕ್ಷಿಸುತ್ತಿರುವ ರೈತರು ಈ ಕಾರ್ಯಕ್ರಮದ ಉಪಯೋಗ ಪಡೆಯಲು ಹತ್ತಿರದ ರೈತ ಸಂಪರ್ಕ ಕೇಂದ್ರ ಸಂಪರ್ಕಿಸಿ.

ಆಯಾ ಪ್ರದೇಶದಲ್ಲಿ ಸ್ಥಳೀಯ ಅಥವಾ ಸಾಂಪ್ರಾಯಿಕವಾಗಿ ಕೃಷಿ ಪದ್ಧತಿಯಿಂದ ಅಭಿವೃದ್ಧಿ ಮತ್ತು ನಿರ್ವಹಿಸುವ ತಳಿಗಳನ್ನು ದೇಸಿ ತಳಿಗಳೆಂದು ಕರೆಯಲಾಗುತ್ತದೆ.

ಈ ಕಾರ್ಯಕ್ರಮದಡಿ ಭತ್ತ,ರಾಗಿ, ಜೋಳ, ತೊಗರಿ, ಹುರುಳಿ, ಅವರೆ, ಅಲಸಂದೆ, ಮಡಕಿಕಾಳು,ಹುಚ್ಚೆಳ್ಳು, ಕಸುಬೆ, ಎಳ್ಳು, ನವಣೆ, ಸಾಮೆ, ಊದಲು, ಕೊರಲೆ ಮತ್ತು ಬರಗು ಆಯ್ಕೆಯಾದ ಬೆಳೆಗಳಾಗಿವೆ. ಹಾಗೇ ಜಾನುವಾರು ಸಾಕಾಣಿಕೆ, ಕೊಟ್ಟಿಗೆ ಗೊಬ್ಬರ, ಎರೆಹುಳು ಗೊಬ್ಬರ ಮತ್ತು ಇತರೆ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ರೈತರನ್ನು ಕೃಷಿ ಇಲಾಖೆಯು ಪ್ರೋತ್ಸಾಹಿಸಲಾಗುತ್ತದೆ. ಸಲಹಾ ಸಮಿತಿ ಶಿಫಾರಸ್ಸು ಮಾಡುವ ಇತರೆ ಬೆಳೆಗಳಲ್ಲಿ ದೇಸಿ ತಳಿಗಳನ್ನು ರೈತರು ಸಮೀಪದ ರೈತ ಸಂಪರ್ಕ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳಬಹುದು.

ದೇಸಿ ತಳಿಗಳನ್ನು ರಕ್ಷಿಸಿ ಮತ್ತು ಪರಂಪರೆ ಮುಂದುವರೆಸುತ್ತಿರುವ ರೈತರನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಲು ಜೀವವೈವಿಧ್ಯತೆಯನ್ನು ಬೆಂಬಲಿಸಲು ಹಾಗೂ ಸುಸ್ಥಿರ ಕೃಷಿ ಪದ್ಧತಿಗಳನ್ನು ಪೋಷಿಸಲು ಸಹಕಾರಿಯಾಗಲಿದೆ.

ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರದಗಳಿಗೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದು ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಬಿ.ಜಿ ಕಲಾವತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

23 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago