ಕೃಷಿ ಇಲಾಖೆ ವತಿಯಿಂದ ಮುಂಗಾರು ಹಂಗಾಮಿಗೆ ಪೂರ್ವ ಸಿದ್ಧತೆ

ಜಿಲ್ಲೆಯಲ್ಲಿ ಈ ವರ್ಷದ ಮುಂಗಾರು ಹಂಗಾಮಿಗೆ ಕೃಷಿ ಇಲಾಖೆಯಿಂದ ಹಲವು ಪೂರ್ವಸಿದ್ಧತೆಯನ್ನು ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಗುಣ ನಿಯಂತ್ರಣ ಸಪ್ತಾಹವನ್ನು ಮೇ 19 ರಿಂದ 23 ರವರೆಗೆ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಬೇಕಾದ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಪ್ತಾಹದ ಅಂಗವಾಗಿ ಉಪ ಕೃಷಿ ನಿರ್ದೇಶಕರ ನೇತೃತ್ವದಲ್ಲಿ ನಾಲ್ಕು ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು ಮತ್ತು ಕೃಷಿ ಅಧಿಕಾರಿಗಳ ತಂಡವನ್ನು ರಚಿಸಿ, ಜಿಲ್ಲೆಗೆ ವ್ಯಾಪ್ತಿಗೆ ಒಳಪಡುವ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಮಾರಾಟ ಮಳಿಗೆಗಳ ತಪಾಸಣೆ ಮಾಡಲಾಗುವುದು.

ಜಿಲ್ಲೆಯಲ್ಲಿ ಈವರೆಗೆ 95 ಪರಿಕರ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿದ್ದು, 66 ಬಿತ್ತನೆ ಬೀಜದ ಮಾದರಿಗಳು, 36 ರಸಗೊಬ್ಬರ ಮಾದರಿಗಳು ಮತ್ತು 21 ಕೀಟನಾಶಕ ಮಾದರಿಗಳನ್ನು ಸಂಗ್ರಹಿಸಿ ಅವುಗಳ ಗುಣಮಟ್ಟ ಪರಿಶೀಲನೆಗಾಗಿ ಕಳುಹಿಸಿದ್ದು, ಇದರಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳು ನಕಲಿ ಎಂದು ತಿಳಿದು ಬಂದರೆ ಅಂತಹ ಕಳಪೆ ಗುಣಮಟ್ಟದ ವಸ್ತುಗಳನ್ನು ಖರೀದಿಸದಂತೆ ಜಾಗೃತಿ ಮೂಡಿಸುವ ಸಲುವಾಗಿ ರೈತರಿಗೆ ಸಲಹೆಯನ್ನು ನೀಡಲಾಗುವುದು.

*ರೈತರು ಹೊಲಗಳಲ್ಲಿ ಕಂದಕ, ಬದುಗಳನ್ನು ನಿರ್ಮಿಸಿ*
ಜಲಾನಯನ ಹಾಗೂ ನರೇಗಾ ಯೋಜನೆಯಡಿ ವ್ಯಾಪ್ತಿಗೆ ಒಳಪಡುವ ಎಲ್ಲಾ ರೈತರು ತಮ್ಮ ಜಮೀನುಗಳಲ್ಲಿ ಇಂಗು ಗುಂಡಿಗಳನ್ನು (5 ಮೀ ಉದ್ದ , 1 ಮೀ ಅಗಲ, 2ಅಡಿ ಆಳ) ನಿರ್ಮಾಣ ಮಾಡಿಕೊಳ್ಳಬೇಕು. ಈ ರೀತಿಯಲ್ಲಿ ಎಕರೆಗೆ 20 ಕಂದಕಗಳನ್ನು ನಿರ್ಮಿಸಿದರೆ, ಒಂದು ಕಂದಕದಿಂದ 3 ಸಾವಿರ ಲೀಟರ್ ನಂತೆ, ಒಟ್ಟಾರೆ 20 ಕಂದಕದಿಂದ 50 ಸಾವಿರ ಲೀಟರ್ ನೀರನ್ನು ಸಂಗ್ರಹಿಸಬಹುದು. ಹೀಗೆ ವರ್ಷದಲ್ಲಿ ಬೀಳುವ 8 ರಿಂದ 10 ಮಳೆಗೆ ಕನಿಷ್ಠ 5 ಲಕ್ಷ ಲೀಟರ್ ನೀರನ್ನು ಶೇಖರಿಸಬಹುದು.ಈ ರೀತಿ ಮಾಡುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗಿ ಎಲ್ಲಾ ಕೊಳವೆ ಬಾವಿಗಳಲ್ಲಿ ನೀರು ಸಿಗುವ ಲಭ್ಯತೆ ಹೆಚ್ಚಾಗುತ್ತದೆ. ಮಳೆಗಾಲ ಮುಗಿದ ನಂತರ ಟ್ಯಾಂಕರ್ ನೀರಿನ ಮೇಲಿನ ಅವಲಂಬನೆ ಕ್ರಮೇಣ ಕಡಿಮೆಯಗುತ್ತದೆ.

*ದೇಸಿ ತಳಿ ಇದ್ದರೆ ನೋಂದಾಯಿಸಿಕೊಳ್ಳಿ*
ದೇಸಿ ತಳಿಗಳ ಸಂರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಕೃಷಿ ಇಲಾಖೆ ವತಿಯಿಂದ ಸಂರಕ್ಷಣೆ ಮತ್ತು ಉತ್ತೇಜನ ನೀಡಲು ವಿವಿಧ ರೀತಿಯ ಕಾರ್ಯಕ್ರಮಗಳನ್ನು ಮಾಡುತ್ತಿದೆ. ದೇಸಿ ತಳಿಗಳನ್ನು ಸಂರಕ್ಷಿಸುತ್ತಿರುವ ರೈತರು ಈ ಕಾರ್ಯಕ್ರಮದ ಉಪಯೋಗ ಪಡೆಯಲು ಹತ್ತಿರದ ರೈತ ಸಂಪರ್ಕ ಕೇಂದ್ರ ಸಂಪರ್ಕಿಸಿ.

ಆಯಾ ಪ್ರದೇಶದಲ್ಲಿ ಸ್ಥಳೀಯ ಅಥವಾ ಸಾಂಪ್ರಾಯಿಕವಾಗಿ ಕೃಷಿ ಪದ್ಧತಿಯಿಂದ ಅಭಿವೃದ್ಧಿ ಮತ್ತು ನಿರ್ವಹಿಸುವ ತಳಿಗಳನ್ನು ದೇಸಿ ತಳಿಗಳೆಂದು ಕರೆಯಲಾಗುತ್ತದೆ.

ಈ ಕಾರ್ಯಕ್ರಮದಡಿ ಭತ್ತ,ರಾಗಿ, ಜೋಳ, ತೊಗರಿ, ಹುರುಳಿ, ಅವರೆ, ಅಲಸಂದೆ, ಮಡಕಿಕಾಳು,ಹುಚ್ಚೆಳ್ಳು, ಕಸುಬೆ, ಎಳ್ಳು, ನವಣೆ, ಸಾಮೆ, ಊದಲು, ಕೊರಲೆ ಮತ್ತು ಬರಗು ಆಯ್ಕೆಯಾದ ಬೆಳೆಗಳಾಗಿವೆ. ಹಾಗೇ ಜಾನುವಾರು ಸಾಕಾಣಿಕೆ, ಕೊಟ್ಟಿಗೆ ಗೊಬ್ಬರ, ಎರೆಹುಳು ಗೊಬ್ಬರ ಮತ್ತು ಇತರೆ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ರೈತರನ್ನು ಕೃಷಿ ಇಲಾಖೆಯು ಪ್ರೋತ್ಸಾಹಿಸಲಾಗುತ್ತದೆ. ಸಲಹಾ ಸಮಿತಿ ಶಿಫಾರಸ್ಸು ಮಾಡುವ ಇತರೆ ಬೆಳೆಗಳಲ್ಲಿ ದೇಸಿ ತಳಿಗಳನ್ನು ರೈತರು ಸಮೀಪದ ರೈತ ಸಂಪರ್ಕ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳಬಹುದು.

ದೇಸಿ ತಳಿಗಳನ್ನು ರಕ್ಷಿಸಿ ಮತ್ತು ಪರಂಪರೆ ಮುಂದುವರೆಸುತ್ತಿರುವ ರೈತರನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಲು ಜೀವವೈವಿಧ್ಯತೆಯನ್ನು ಬೆಂಬಲಿಸಲು ಹಾಗೂ ಸುಸ್ಥಿರ ಕೃಷಿ ಪದ್ಧತಿಗಳನ್ನು ಪೋಷಿಸಲು ಸಹಕಾರಿಯಾಗಲಿದೆ.

ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರದಗಳಿಗೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದು ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಬಿ.ಜಿ ಕಲಾವತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

6 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

15 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

21 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

23 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago