ಕೃಷಿ ಚಟುವಟಿಕೆಯಲ್ಲಿ ರೈತರು ಡಿಎಪಿ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆಗೆ ಕೃಷಿ ಇಲಾಖೆ ಸಲಹೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆ ಮಾಡಲು ಕೃಷಿ ಇಲಾಖೆ ಸಲಹೆ ನೀಡಿದೆ.

ಸಸ್ಯಗಳ ಬೆಳವಣಿಗೆಗೆ 17 ಪೋಷಕಾಂಶಗಳ ಅಗತ್ಯವಿದೆ. ಅವುಗಳಲ್ಲಿ ಗಾಳಿ ಮತ್ತು ನೀರಿನ ಮೂಲಕ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಉಳಿದ 14 ಪೋಷಕಾಂಶಗಳಿಗೆ ಸಂಯುಕ್ತ ರಸಗೊಬ್ಬರ ಬಳಕೆ ಮಾಡಬೇಕು ಎಂದು ಮಾಹಿತಿ ನೀಡಿದೆ.

ಸಾರಜನಕ, ರಂಜಕ, ಪೊಟ್ಯಾಷ್, ಕ್ಯಾಲ್ಸಿಯಂ, ಮೆಗ್ನಿಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ ಮ್ಯಾಂಗನೀಸ್, ಮಾಲಿಬಿನಂ ಕ್ಲೋರಿನ್ ಹಾಗೂ ನಿಕ್ಕಲ್ ಅಗತ್ಯವಿದ್ದು, ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಲಿದ್ದು, ಇಳುವರಿ ಕುಂಠಿತವಾಗುತ್ತದೆ. ಆದ್ದರಿಂದ ಬಿತ್ತನೆಗೆ ಕೊಟ್ಟಿಗೆ ಗೊಬ್ಬರ/ಹಸಿರೆಲೆ ಗೊಬ್ಬರ/ಹಿಂಡಿ ಇತ್ಯಾದಿ ಸಾವಯವ ಗೊಬ್ಬರ ಬಳಕೆ ಮಾಡಬೇಕು. ಇದರಿಂದ ಇಳುವರಿ ಹೆಚ್ಚಾಗಲಿದೆ.

ಬಿತ್ತನೆ ಸಮಯದಲ್ಲಿ ಬೆಳೆಗಳಿಗೆ ಶಿಫಾರಸ್ಸಿನಂತೆ ಸಮತೋಲನಾತ್ಮಕ ರಸಗೊಬ್ಬರ ಬಳಸುವುದರಿಂದ ಸರಿದೂಗಿಸಬಹುದು. ಇದಕ್ಕಾಗಿ ರೈತರು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ವಿಧದ ರಸಗೊಬ್ಬರಕ್ಕೆ ಆದ್ಯತೆ ನೀಡದೆ. ಮಾರುಕಟ್ಟೆಯಲ್ಲಿ ದೊರೆಯುವ ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26, 12:32:16, 22:22:11, 17:17:17, 14:28:14, 19:19:19, 20:10:10, 14:35:14 ಸಹ ಬಳಸಬಹುದು.

ಬಿತ್ತನೆ ನಂತರ ನ್ಯಾನೋ ಡಿಎಪಿ ಮತ್ತು ನ್ಯಾನೋ ಯೂರಿಯಾ ಪ್ಲಸ್ ಗಳನ್ನು ಸಹ ಅವಶ್ಯಕತೆಗೆ ಅನುಗುಣವಾಗಿ ಸಿಂಪರಣೆಯಾಗಿ ಬಳಸಬಹುದು ಎಂದು ತಿಳಿಸಿದೆ.

ಸಾಮಾನ್ಯವಾಗಿ 1 ಹಕ್ಟೇರ್ ರಾಗಿ ಬೆಳೆ ಬೆಳೆಯಲು ಯೂರಿಯಾ ಮತ್ತು ಡಿ.ಎ.ಪಿ ಬಳಸಿದರೆ 1630ರೂ. ಬೇಸಾಯ ವೆಚ್ಚವಾಗುತ್ತದೆ. ರೈತರು ಯೂರಿಯಾ ಹಾಗೂ ಡಿಎಪಿಯನ್ನು ಹೆಚ್ಚಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ. ಆದರೆ ಬೆಳೆಗಳಿಗೆ ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೋಟ್ಯಾಷ್ ಲಭ್ಯವಿರುವುದಿಲ್ಲ. ಪ್ರತ್ಯೇಕವಾಗಿ ಪೋಟ್ಯಾಷ್ ಪೋಷಕಾಂಶ ಸೇರಿಸಲು 33 ಕೆ.ಜಿ ಎಂಒಪಿ ಬೇಕಾಗುತ್ತದೆ. 33 ಕೆ.ಜಿ ಎಂಒಪಿಗೆ 1132 ರೂ. ವೆಚ್ಚವಾಗುತ್ತದೆ. ಒಟ್ಟಾರೆ ಪ್ರತಿ ಹೆಕ್ಟೇರಿಗೆ 2761 ರೂ. ವೆಚ್ಚವಾಗುತ್ತದೆ.

ಇತರೆ ಸಂಯುಕ್ತ ರಸಗೊಬ್ಬರಗಳಾದ 14:35:14, 11:30:14, 10:26:26 ಬಳಸಿದ್ದಲ್ಲಿ ಎಲ್ಲಾ ಎನ್.ಪಿ.ಕೆ ಪೋಷಕಾಂಶಗಳು ಲಭ್ಯವಿದೆ. ಪ್ರತಿ ಹೆಕ್ಟೇರಿಗೆ 2500ರೂ. ಗಿಂತ ಕಡಿಮೆ ವೆಚ್ಚವಾಗುತ್ತದೆ. ಸಂಯುಕ್ತ ರಸಗೊಬ್ಬರಗಳನ್ನು ಬಳಸುವುದರಿಂದ ಸಸಿಗಳಿಗೆ ಅವಶ್ಯವಿರುವ ಪೊಟ್ಯಾಷ್ ಪೋಷಕಾಂಶವು ಲಭ್ಯವಾಗಿ ಸಸಿಗಳಲ್ಲಿ ಕಿಣ್ವಗಳನ್ನು ಸಕ್ರಿಯಗೊಳಿಸಿ ನೀರು ಮತ್ತು ಪೋಷಕಾಂಶಗಳ ಸಾಗಣೆಗೆ ಸಹಾಯ ಮಾಡುವುದಲ್ಲದೇ ಬರ ಪರಿಸ್ಥಿತಿಯಲ್ಲೂ ಬೆಳೆಗಳನ್ನು ಹಸಿರಾಗಿಡಲು ಸಹಾಯ ಮಾಡುತ್ತದೆ ಹಾಗೂ ಬೆಳೆ ಉತ್ಪಾದಕತೆ, ಗುಣಮಟ್ಟ ಸುಧಾರಿಸಲು ಕಾರಣವಾಗುತ್ತದೆ. ಆದ್ದರಿಂದ ಜಿಲ್ಲೆಯ ಪ್ರಮುಖವಾದ ರಾಗಿ ಬೆಳೆಯ ಬೇಸಾಯ ವೆಚ್ಚ ಕಡಿಮೆ ಮಾಡಲು ಹಾಗೂ ಮಣ್ಣಿಗೆ ರಂಜಕದ ಪೋಷಕಾಂಶ ಸೇರಿಸುವ ಉದ್ದೇಶದಿಂದ ಡಿಎಪಿ ರಸಗೊಬ್ಬರದ ಬದಲಾಗಿ ಅಥವಾ ಪರ್ಯಾಯವಾಗಿ ಕಾಂಪ್ಲೆಕ್ಸ್ ರಸಗೊಬ್ಬರಗಳನ್ನು ಬಳಸಬೇಕು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

10 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

21 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

21 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

1 day ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

1 day ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

1 day ago