ಕೃಷಿ ಚಟುವಟಿಕೆಯಲ್ಲಿ ರೈತರು ಡಿಎಪಿ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆಗೆ ಕೃಷಿ ಇಲಾಖೆ ಸಲಹೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆ ಮಾಡಲು ಕೃಷಿ ಇಲಾಖೆ ಸಲಹೆ ನೀಡಿದೆ.

ಸಸ್ಯಗಳ ಬೆಳವಣಿಗೆಗೆ 17 ಪೋಷಕಾಂಶಗಳ ಅಗತ್ಯವಿದೆ. ಅವುಗಳಲ್ಲಿ ಗಾಳಿ ಮತ್ತು ನೀರಿನ ಮೂಲಕ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಉಳಿದ 14 ಪೋಷಕಾಂಶಗಳಿಗೆ ಸಂಯುಕ್ತ ರಸಗೊಬ್ಬರ ಬಳಕೆ ಮಾಡಬೇಕು ಎಂದು ಮಾಹಿತಿ ನೀಡಿದೆ.

ಸಾರಜನಕ, ರಂಜಕ, ಪೊಟ್ಯಾಷ್, ಕ್ಯಾಲ್ಸಿಯಂ, ಮೆಗ್ನಿಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ ಮ್ಯಾಂಗನೀಸ್, ಮಾಲಿಬಿನಂ ಕ್ಲೋರಿನ್ ಹಾಗೂ ನಿಕ್ಕಲ್ ಅಗತ್ಯವಿದ್ದು, ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಲಿದ್ದು, ಇಳುವರಿ ಕುಂಠಿತವಾಗುತ್ತದೆ. ಆದ್ದರಿಂದ ಬಿತ್ತನೆಗೆ ಕೊಟ್ಟಿಗೆ ಗೊಬ್ಬರ/ಹಸಿರೆಲೆ ಗೊಬ್ಬರ/ಹಿಂಡಿ ಇತ್ಯಾದಿ ಸಾವಯವ ಗೊಬ್ಬರ ಬಳಕೆ ಮಾಡಬೇಕು. ಇದರಿಂದ ಇಳುವರಿ ಹೆಚ್ಚಾಗಲಿದೆ.

ಬಿತ್ತನೆ ಸಮಯದಲ್ಲಿ ಬೆಳೆಗಳಿಗೆ ಶಿಫಾರಸ್ಸಿನಂತೆ ಸಮತೋಲನಾತ್ಮಕ ರಸಗೊಬ್ಬರ ಬಳಸುವುದರಿಂದ ಸರಿದೂಗಿಸಬಹುದು. ಇದಕ್ಕಾಗಿ ರೈತರು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ವಿಧದ ರಸಗೊಬ್ಬರಕ್ಕೆ ಆದ್ಯತೆ ನೀಡದೆ. ಮಾರುಕಟ್ಟೆಯಲ್ಲಿ ದೊರೆಯುವ ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26, 12:32:16, 22:22:11, 17:17:17, 14:28:14, 19:19:19, 20:10:10, 14:35:14 ಸಹ ಬಳಸಬಹುದು.

ಬಿತ್ತನೆ ನಂತರ ನ್ಯಾನೋ ಡಿಎಪಿ ಮತ್ತು ನ್ಯಾನೋ ಯೂರಿಯಾ ಪ್ಲಸ್ ಗಳನ್ನು ಸಹ ಅವಶ್ಯಕತೆಗೆ ಅನುಗುಣವಾಗಿ ಸಿಂಪರಣೆಯಾಗಿ ಬಳಸಬಹುದು ಎಂದು ತಿಳಿಸಿದೆ.

ಸಾಮಾನ್ಯವಾಗಿ 1 ಹಕ್ಟೇರ್ ರಾಗಿ ಬೆಳೆ ಬೆಳೆಯಲು ಯೂರಿಯಾ ಮತ್ತು ಡಿ.ಎ.ಪಿ ಬಳಸಿದರೆ 1630ರೂ. ಬೇಸಾಯ ವೆಚ್ಚವಾಗುತ್ತದೆ. ರೈತರು ಯೂರಿಯಾ ಹಾಗೂ ಡಿಎಪಿಯನ್ನು ಹೆಚ್ಚಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ. ಆದರೆ ಬೆಳೆಗಳಿಗೆ ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೋಟ್ಯಾಷ್ ಲಭ್ಯವಿರುವುದಿಲ್ಲ. ಪ್ರತ್ಯೇಕವಾಗಿ ಪೋಟ್ಯಾಷ್ ಪೋಷಕಾಂಶ ಸೇರಿಸಲು 33 ಕೆ.ಜಿ ಎಂಒಪಿ ಬೇಕಾಗುತ್ತದೆ. 33 ಕೆ.ಜಿ ಎಂಒಪಿಗೆ 1132 ರೂ. ವೆಚ್ಚವಾಗುತ್ತದೆ. ಒಟ್ಟಾರೆ ಪ್ರತಿ ಹೆಕ್ಟೇರಿಗೆ 2761 ರೂ. ವೆಚ್ಚವಾಗುತ್ತದೆ.

ಇತರೆ ಸಂಯುಕ್ತ ರಸಗೊಬ್ಬರಗಳಾದ 14:35:14, 11:30:14, 10:26:26 ಬಳಸಿದ್ದಲ್ಲಿ ಎಲ್ಲಾ ಎನ್.ಪಿ.ಕೆ ಪೋಷಕಾಂಶಗಳು ಲಭ್ಯವಿದೆ. ಪ್ರತಿ ಹೆಕ್ಟೇರಿಗೆ 2500ರೂ. ಗಿಂತ ಕಡಿಮೆ ವೆಚ್ಚವಾಗುತ್ತದೆ. ಸಂಯುಕ್ತ ರಸಗೊಬ್ಬರಗಳನ್ನು ಬಳಸುವುದರಿಂದ ಸಸಿಗಳಿಗೆ ಅವಶ್ಯವಿರುವ ಪೊಟ್ಯಾಷ್ ಪೋಷಕಾಂಶವು ಲಭ್ಯವಾಗಿ ಸಸಿಗಳಲ್ಲಿ ಕಿಣ್ವಗಳನ್ನು ಸಕ್ರಿಯಗೊಳಿಸಿ ನೀರು ಮತ್ತು ಪೋಷಕಾಂಶಗಳ ಸಾಗಣೆಗೆ ಸಹಾಯ ಮಾಡುವುದಲ್ಲದೇ ಬರ ಪರಿಸ್ಥಿತಿಯಲ್ಲೂ ಬೆಳೆಗಳನ್ನು ಹಸಿರಾಗಿಡಲು ಸಹಾಯ ಮಾಡುತ್ತದೆ ಹಾಗೂ ಬೆಳೆ ಉತ್ಪಾದಕತೆ, ಗುಣಮಟ್ಟ ಸುಧಾರಿಸಲು ಕಾರಣವಾಗುತ್ತದೆ. ಆದ್ದರಿಂದ ಜಿಲ್ಲೆಯ ಪ್ರಮುಖವಾದ ರಾಗಿ ಬೆಳೆಯ ಬೇಸಾಯ ವೆಚ್ಚ ಕಡಿಮೆ ಮಾಡಲು ಹಾಗೂ ಮಣ್ಣಿಗೆ ರಂಜಕದ ಪೋಷಕಾಂಶ ಸೇರಿಸುವ ಉದ್ದೇಶದಿಂದ ಡಿಎಪಿ ರಸಗೊಬ್ಬರದ ಬದಲಾಗಿ ಅಥವಾ ಪರ್ಯಾಯವಾಗಿ ಕಾಂಪ್ಲೆಕ್ಸ್ ರಸಗೊಬ್ಬರಗಳನ್ನು ಬಳಸಬೇಕು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

3 hours ago

ಬಸ್ ಏರಿದ್ರೆ ಗಮ್ಯಸ್ಥಾನ ಸೇರುತ್ತೇವೆ ಅನ್ನೋ ಗ್ಯಾರಂಟಿ ಇಲ್ಲ!: ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಪದೇ ಪದೇ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…

4 hours ago

ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……

ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…

6 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ ರಾಜಶೇಖರ್ ಆಚಾರ್

  ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

16 hours ago

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ : ಕಾರ್ಯದರ್ಶಿ ಹೇಮಂತ್

  ಚಿಕ್ಕನಾಯಕನಹಳ್ಳಿ: ರೈತರ ವಿಕಸನಕ್ಕೆಂದೇ ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

16 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಕೇರ್ ಬೈ ಬಿಎಲ್‌ಆರ್’ ವೈಯಕ್ತಿಕ ಪ್ರಯಾಣಿಕ ಸೇವೆ ಆರಂಭ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ಪ್ರಯಾಣಿಕರ ಅನುಭವವನ್ನು ಇನ್ನಷ್ಟು ಸುಗಮ, ಅನುಕೂಲಕರ ಮತ್ತು ವೈಯಕ್ತಿಕ ಅಗತ್ಯಗಳಿಗೆ ಹೊಂದುವಂತೆ…

19 hours ago