ಕೃಷಿ ಚಟುವಟಿಕೆಯಲ್ಲಿ ರೈತರು ಡಿಎಪಿ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆಗೆ ಕೃಷಿ ಇಲಾಖೆ ಸಲಹೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆ ಮಾಡಲು ಕೃಷಿ ಇಲಾಖೆ ಸಲಹೆ ನೀಡಿದೆ.

ಸಸ್ಯಗಳ ಬೆಳವಣಿಗೆಗೆ 17 ಪೋಷಕಾಂಶಗಳ ಅಗತ್ಯವಿದೆ. ಅವುಗಳಲ್ಲಿ ಗಾಳಿ ಮತ್ತು ನೀರಿನ ಮೂಲಕ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಉಳಿದ 14 ಪೋಷಕಾಂಶಗಳಿಗೆ ಸಂಯುಕ್ತ ರಸಗೊಬ್ಬರ ಬಳಕೆ ಮಾಡಬೇಕು ಎಂದು ಮಾಹಿತಿ ನೀಡಿದೆ.

ಸಾರಜನಕ, ರಂಜಕ, ಪೊಟ್ಯಾಷ್, ಕ್ಯಾಲ್ಸಿಯಂ, ಮೆಗ್ನಿಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ ಮ್ಯಾಂಗನೀಸ್, ಮಾಲಿಬಿನಂ ಕ್ಲೋರಿನ್ ಹಾಗೂ ನಿಕ್ಕಲ್ ಅಗತ್ಯವಿದ್ದು, ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಲಿದ್ದು, ಇಳುವರಿ ಕುಂಠಿತವಾಗುತ್ತದೆ. ಆದ್ದರಿಂದ ಬಿತ್ತನೆಗೆ ಕೊಟ್ಟಿಗೆ ಗೊಬ್ಬರ/ಹಸಿರೆಲೆ ಗೊಬ್ಬರ/ಹಿಂಡಿ ಇತ್ಯಾದಿ ಸಾವಯವ ಗೊಬ್ಬರ ಬಳಕೆ ಮಾಡಬೇಕು. ಇದರಿಂದ ಇಳುವರಿ ಹೆಚ್ಚಾಗಲಿದೆ.

ಬಿತ್ತನೆ ಸಮಯದಲ್ಲಿ ಬೆಳೆಗಳಿಗೆ ಶಿಫಾರಸ್ಸಿನಂತೆ ಸಮತೋಲನಾತ್ಮಕ ರಸಗೊಬ್ಬರ ಬಳಸುವುದರಿಂದ ಸರಿದೂಗಿಸಬಹುದು. ಇದಕ್ಕಾಗಿ ರೈತರು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ವಿಧದ ರಸಗೊಬ್ಬರಕ್ಕೆ ಆದ್ಯತೆ ನೀಡದೆ. ಮಾರುಕಟ್ಟೆಯಲ್ಲಿ ದೊರೆಯುವ ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26, 12:32:16, 22:22:11, 17:17:17, 14:28:14, 19:19:19, 20:10:10, 14:35:14 ಸಹ ಬಳಸಬಹುದು.

ಬಿತ್ತನೆ ನಂತರ ನ್ಯಾನೋ ಡಿಎಪಿ ಮತ್ತು ನ್ಯಾನೋ ಯೂರಿಯಾ ಪ್ಲಸ್ ಗಳನ್ನು ಸಹ ಅವಶ್ಯಕತೆಗೆ ಅನುಗುಣವಾಗಿ ಸಿಂಪರಣೆಯಾಗಿ ಬಳಸಬಹುದು ಎಂದು ತಿಳಿಸಿದೆ.

ಸಾಮಾನ್ಯವಾಗಿ 1 ಹಕ್ಟೇರ್ ರಾಗಿ ಬೆಳೆ ಬೆಳೆಯಲು ಯೂರಿಯಾ ಮತ್ತು ಡಿ.ಎ.ಪಿ ಬಳಸಿದರೆ 1630ರೂ. ಬೇಸಾಯ ವೆಚ್ಚವಾಗುತ್ತದೆ. ರೈತರು ಯೂರಿಯಾ ಹಾಗೂ ಡಿಎಪಿಯನ್ನು ಹೆಚ್ಚಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ. ಆದರೆ ಬೆಳೆಗಳಿಗೆ ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೋಟ್ಯಾಷ್ ಲಭ್ಯವಿರುವುದಿಲ್ಲ. ಪ್ರತ್ಯೇಕವಾಗಿ ಪೋಟ್ಯಾಷ್ ಪೋಷಕಾಂಶ ಸೇರಿಸಲು 33 ಕೆ.ಜಿ ಎಂಒಪಿ ಬೇಕಾಗುತ್ತದೆ. 33 ಕೆ.ಜಿ ಎಂಒಪಿಗೆ 1132 ರೂ. ವೆಚ್ಚವಾಗುತ್ತದೆ. ಒಟ್ಟಾರೆ ಪ್ರತಿ ಹೆಕ್ಟೇರಿಗೆ 2761 ರೂ. ವೆಚ್ಚವಾಗುತ್ತದೆ.

ಇತರೆ ಸಂಯುಕ್ತ ರಸಗೊಬ್ಬರಗಳಾದ 14:35:14, 11:30:14, 10:26:26 ಬಳಸಿದ್ದಲ್ಲಿ ಎಲ್ಲಾ ಎನ್.ಪಿ.ಕೆ ಪೋಷಕಾಂಶಗಳು ಲಭ್ಯವಿದೆ. ಪ್ರತಿ ಹೆಕ್ಟೇರಿಗೆ 2500ರೂ. ಗಿಂತ ಕಡಿಮೆ ವೆಚ್ಚವಾಗುತ್ತದೆ. ಸಂಯುಕ್ತ ರಸಗೊಬ್ಬರಗಳನ್ನು ಬಳಸುವುದರಿಂದ ಸಸಿಗಳಿಗೆ ಅವಶ್ಯವಿರುವ ಪೊಟ್ಯಾಷ್ ಪೋಷಕಾಂಶವು ಲಭ್ಯವಾಗಿ ಸಸಿಗಳಲ್ಲಿ ಕಿಣ್ವಗಳನ್ನು ಸಕ್ರಿಯಗೊಳಿಸಿ ನೀರು ಮತ್ತು ಪೋಷಕಾಂಶಗಳ ಸಾಗಣೆಗೆ ಸಹಾಯ ಮಾಡುವುದಲ್ಲದೇ ಬರ ಪರಿಸ್ಥಿತಿಯಲ್ಲೂ ಬೆಳೆಗಳನ್ನು ಹಸಿರಾಗಿಡಲು ಸಹಾಯ ಮಾಡುತ್ತದೆ ಹಾಗೂ ಬೆಳೆ ಉತ್ಪಾದಕತೆ, ಗುಣಮಟ್ಟ ಸುಧಾರಿಸಲು ಕಾರಣವಾಗುತ್ತದೆ. ಆದ್ದರಿಂದ ಜಿಲ್ಲೆಯ ಪ್ರಮುಖವಾದ ರಾಗಿ ಬೆಳೆಯ ಬೇಸಾಯ ವೆಚ್ಚ ಕಡಿಮೆ ಮಾಡಲು ಹಾಗೂ ಮಣ್ಣಿಗೆ ರಂಜಕದ ಪೋಷಕಾಂಶ ಸೇರಿಸುವ ಉದ್ದೇಶದಿಂದ ಡಿಎಪಿ ರಸಗೊಬ್ಬರದ ಬದಲಾಗಿ ಅಥವಾ ಪರ್ಯಾಯವಾಗಿ ಕಾಂಪ್ಲೆಕ್ಸ್ ರಸಗೊಬ್ಬರಗಳನ್ನು ಬಳಸಬೇಕು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

KSRTC ಬಸ್-ಕಂಟೇನರ್ ಲಾರಿ ನಡುವೆ ಅಪಘಾತ; ಕೆಲವರಿಗೆ ಗಾಯ

ಹೊಸಕೋಟೆ: ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ KSRTC ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ಹೊಸಕೋಟೆ ಸಮೀಪದ…

6 hours ago

ರಾಜ್ಯಸಭೆ, ಪರಿಷತ್ ಚುನಾವಣೆ: ಬಿಜೆಪಿ ಅಚ್ಚರಿ ನಿರ್ಧಾರ, ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ನಿರಾಕರಣೆ

ಬೆಂಗಳೂರು: 2026ರ ರಾಜ್ಯಸಭೆ ಹಾಗೂ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದ್ದು, ಕರ್ನಾಟಕದಿಂದ ರಾಜ್ಯಸಭೆಗೆ…

9 hours ago

ಅಳಬೇಡಿ ಸ್ವಾಮಿ ಅಳಬೇಡಿ, ದಯವಿಟ್ಟು ಅಳಬೇಡಿ, ಸ್ವಲ್ಪ ನಕ್ಕು ಬಿಡಿ…..

ನಾನು ವಿದ್ಯಾವಂತನಾಗಿರಲಿಲ್ಲ, ಅದರಿಂದಾಗಿ ಯಶಸ್ವಿಯಾಗಲಿಲ್ಲ. ನಾನು ಬುದ್ದಿವಂತನಾಗಿರಲಿಲ್ಲ, ಅದರಿಂದಾಗಿ ಜನಪ್ರಿಯನಾಗಲಿಲ್ಲ. ನಾನು ಪ್ರತಿಭಾವಂತನಾಗಿರಲಿಲ್ಲ, ಅದರಿಂದಾಗಿ ಪ್ರಖ್ಯಾತನಾಗಲಿಲ್ಲ. ನಾನು ಶ್ರೀಮಂತನಾಗಿರಲಿಲ್ಲ, ಅದರಿಂದಾಗಿ…

12 hours ago

ದೊಡ್ಡಬಳ್ಳಾಪುರ ಯೋಗಾ ಪ್ರತಿಭೆ, ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಪುರಸ್ಕೃತೆ ಜಾಹ್ನವಿ ಎಂ.ಆರ್ ಗೆ ಸನ್ಮಾನ

ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…

24 hours ago

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

1 day ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

2 days ago