ಕೃಷಿ ತ್ಯಾಜ್ಯದಿಂದ ಜೈವಿಕ ಇಂಧನ: ರೈತರಿಗೆ ಹೆಚ್ಚುವರಿ ಆದಾಯದ ದಾರಿ ಪರಿಸರ ಸಂರಕ್ಷಣೆಗೆ ಜೈವಿಕ ಇಂಧನ ಬಳಕೆ ಅಗತ್ಯ: ಕೃಷಿ ವಿಜ್ಞಾನಿಗಳು

ಬೆಂಗಳೂರು ಗ್ರಾಮಾಂತರ: ನವೀಕರಿಸಲಾಗದ ಇಂಧನಗಳ ಮೇಲಿನ ಅವಲಂಬನೆ ಕಡಿಮೆ ಮಾಡಿ, ಕೃಷಿ ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಜೈವಿಕ ಇಂಧನ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಕೃಷಿ ಅವಶೇಷಗಳನ್ನು ಜೈವಿಕ ಇಂಧನವಾಗಿ ಪರಿವರ್ತಿಸುವ ಮೂಲಕ ರೈತರಿಗೆ ಹೆಚ್ಚುವರಿ ಆದಾಯದ ಮೂಲ ಕಲ್ಪಿಸುವುದರ ಜೊತೆಗೆ ಪರಿಸರ ಮಾಲಿನ್ಯವನ್ನೂ ನಿಯಂತ್ರಿಸಬಹುದು ಎಂದು ಕೃಷಿ ವಿಜ್ಞಾನಿಗಳು ಅಭಿಪ್ರಾಯಪಟ್ಟರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಾಡೋನಹಳ್ಳಿಯ ಐಸಿಎಆರ್–ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಅಂತರರಾಷ್ಟ್ರೀಯ ಜೈವಿಕ ಇಂಧನ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಕುರಿತು ರೈತರಿಗೆ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ವಿಜ್ಞಾನಿ (ಬೇಸಾಯಶಾಸ್ತ್ರ) ಡಾ. ನಿಂಗರಾಜು ಜಿ.ಕೆ., ದೇಶದ ಕೃಷಿ ಕ್ಷೇತ್ರದಲ್ಲಿ ಭತ್ತದ ಹುಲ್ಲು, ಕಬ್ಬಿನ ತ್ಯಾಜ್ಯ, ಜೋಳದ ಅವಶೇಷಗಳು, ತೆಂಗಿನ ಚಿಪ್ಪು ಸೇರಿದಂತೆ ಅಪಾರ ಪ್ರಮಾಣದ ಜೈವಿಕ ಸಂಪನ್ಮೂಲಗಳು ಲಭ್ಯವಿವೆ. ಇವುಗಳನ್ನು ಸೂಕ್ತ ತಂತ್ರಜ್ಞಾನ ಬಳಸಿ ಇಂಧನವಾಗಿ ಪರಿವರ್ತಿಸುವ ಮೂಲಕ ಪರ್ಯಾಯ ಇಂಧನ ಮೂಲಗಳನ್ನು ಅಭಿವೃದ್ಧಿಪಡಿಸಬಹುದು ಎಂದರು.

ಕೃಷಿ ಅವಶೇಷಗಳನ್ನು ಸುಡುವುದರಿಂದ ವಾಯುಮಾಲಿನ್ಯ ಹಾಗೂ ಹಸಿರುಮನೆ ಅನಿಲಗಳ ಹೊರಸೂಸುವಿಕೆ ಹೆಚ್ಚಾಗುತ್ತದೆ. ಹೀಗಾಗಿ ಅವಶೇಷಗಳನ್ನು ಸುಡುವ ಬದಲು ಅವುಗಳನ್ನು ಜೈವಿಕ ಇಂಧನ ಉತ್ಪಾದನೆಗೆ ಬಳಸುವುದರಿಂದ ಪರಿಸರ ಸಂರಕ್ಷಣೆಯ ಜೊತೆಗೆ ಕೃಷಿ ತ್ಯಾಜ್ಯದ ಮೌಲ್ಯವರ್ಧನೆ ಸಾಧ್ಯವಾಗಲಿದೆ ಎಂದು ಹೇಳಿದರು.

ಬದುಗಳಲ್ಲಿ ಜೈವಿಕ ಇಂಧನ ಸಸಿ ಬೆಳೆಸಲು ಸಲಹೆ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಹನುಮಂತರಾಯ ಬಿ.ಜಿ, ರೈತರು ತಮ್ಮ ಜಮೀನಿನ ಬದುಗಳಲ್ಲಿ ಆಹಾರ ಬೆಳೆಗಳ ಉತ್ಪಾದನೆಗೆ ಧಕ್ಕೆಯಾಗದಂತೆ ಹೊಂಗೆ, ಬೇವು, ಹಿಪ್ಪೆ, ಸುರಹೊನ್ನೆ ಸೇರಿದಂತೆ ಜೈವಿಕ ಇಂಧನಕ್ಕೆ ಉಪಯುಕ್ತವಾದ ಸಸಿಗಳನ್ನು ಬೆಳೆಸಬೇಕು ಎಂದು ಸಲಹೆ ನೀಡಿದರು.

ಈ ಸಸ್ಯಗಳಿಂದ ದೊರೆಯುವ ಎಣ್ಣೆಯನ್ನು ಜೈವಿಕ ಇಂಧನ ಉತ್ಪಾದನೆಗೆ ಬಳಸಬಹುದಾಗಿದ್ದು, ಇದರಿಂದ ರೈತರಿಗೆ ಹೆಚ್ಚುವರಿ ಆದಾಯ ದೊರೆಯುವ ಅವಕಾಶವಿದೆ. ಕೃಷಿಯೊಂದಿಗೆ ಜೈವಿಕ ಇಂಧನ ಉತ್ಪಾದನೆಯನ್ನೂ ಉತ್ತೇಜಿಸುವ ಮೂಲಕ ಸುಸ್ಥಿರ ಕೃಷಿ ಹಾಗೂ ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಬಹುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜೈವಿಕ ಇಂಧನದ ಮಹತ್ವ, ಉತ್ಪಾದನಾ ವಿಧಾನಗಳು, ಕೃಷಿ ಮತ್ತು ಗ್ರಾಮೀಣ ಆರ್ಥಿಕತೆಯಲ್ಲಿ ಅದರ ಪಾತ್ರ ಹಾಗೂ ಪರಿಸರ ಸಂರಕ್ಷಣೆಯ ಕುರಿತು ರೈತರಿಗೆ ಮಾಹಿತಿ ನೀಡಲಾಯಿತು. ಇದೇ ಸಂದರ್ಭದಲ್ಲಿ ಜೈವಿಕ ಇಂಧನ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ವಿಜ್ಞಾನಿ ಡಾ. ಗೋಪಿಕಾ ಸಿ. ಮುತ್ತಗಿ, ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯಕ್, ಕೃಷಿ ವಿಸ್ತರಣೆ ವಿಜ್ಞಾನಿ ಡಾ. ಗೋಪಾಲ್, ಕ್ಷೇತ್ರ ಸಹಾಯಕ ಜಗದೀಶ್ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಭಾಗಗಳ ರೈತರು ಹಾಗೂ ರೈತ ಮಹಿಳೆಯರು ಭಾಗವಹಿಸಿದ್ದರು.

Ramesh Babu

Journalist

Recent Posts

ಸೆ.6ರಂದು ದೊಡ್ಡಬಳ್ಳಾಪುರದ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 220/66/11 ಕೆ.ವಿ. ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ದೊಡ್ಡಬಳ್ಳಾಪುರ…

17 hours ago

ದೌರ್ಬಲ್ಯ – ಶೋಷಣೆ – ಸ್ವಾಭಿಮಾನ……

ಈ ಸಮಾಜ ಯಾವಾಗಲೂ ಬಹುತೇಕ ದುರ್ಬಲರ ಮೇಲೆ ಸವಾರಿ ಮಾಡುತ್ತದೆ. ಅದರಲ್ಲೂ ಈ ಹಣ ಕೇಂದ್ರೀಕೃತ ಆಧುನಿಕ ಸಮಾಜದಲ್ಲಿ ದುರ್ಬಲರೇ…

23 hours ago

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

3 days ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

3 days ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

3 days ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

5 days ago