Categories: ಕೋಲಾರ

ಕೃಷಿ ಪಂಪ್ ಸೆಟ್ ಗಳಿಗೆ ಟ್ರಾನ್ಸ್ಫರ್ ಸ್ಥಗಿತ: ರೈತ ವಿರೋಧಿ ಆದೇಶವನ್ನು ರದ್ದು ಪಡಿಸಲು ರೈತ ಸಂಘದಿಂದ ಪ್ರತಿಭಟನೆ

ಕೋಲಾರ: ಕೃಷಿ ಪಂಪ್ ಸೆಟ್ ಗಳಿಗೆ ಟ್ರಾನ್ಸ್ಫರ್ ಸಮೇತ ಉಚಿತ ಮೂಲಸೌಕರ್ಯ ಕಲ್ಪಿಸುವ ಯೋಜನೆಯನ್ನು ಸ್ಥಗಿತಗೊಳಿಸುವ ರೈತ ವಿರೋಧಿ ಆದೇಶವನ್ನು ಕೈಬಿಡಬೇಕೆಂದು ರೈತಸಂಘದಿಂದ ಸಹಾಯಕ ಕಾರ್ಯಪಾಲಕ ಅಭಿಯಂತರ ಮುಖಾಂತರ ಇಂಧನ ಸಚಿವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ದುಬಾರಿಯಾಗಿರುವ ಕೃಷಿ ಕ್ಷೇತ್ರದಲ್ಲಿ ಬಂಡವಾಳ ಹೂಡುವ ರೈತ ತನ್ನ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಲು ಕೃಷಿ ಎಂಬ ಯುದ್ಧದಲ್ಲಿ ನಿರಂತರವಾಗಿ ಹೋರಾಟ ಮಾಡುವ ಮುಖಾಂತರ ನಷ್ಟದ ದಾರಿ ತುಳಿಯುತ್ತಿರುವ ರೈತರಿಗೆ ವರದಾನವಾಗಬೇಕಿದ್ದ ಸರ್ಕಾರ ಅಕ್ರಮ-ಸಕ್ರಮ ಯೋಜನೆಯ ಅನುದಾನವನ್ನು ಕಡಿತಗೊಳಿಸಿ ಹೊಸ ಕೃಷಿ ಪಂಪ್ ಸೆಟ್ ಗಳಿಗೆ ಟ್ರಾನ್ಸ್ ಫರ್ ಸಮೇತ ನೀಡುವ ಮೂಲಸೌಕರ್ಯಗಳನ್ನು ರದ್ದು ಮಾಡಲು ಮುಂದಾಗಿರುವುದು ರೈತ ವಿರೋಧಿ ಧೋರಣೆ ಎಂದು ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯುತ್ ವಿತರಣಾ ಕಂಪನಿಗಳಿಂದ ನಿಯಮಾನುಸಾರ ಪರವಾನಗಿ ಪಡೆಯದ ಕೃಷಿ ಕೊಳವೆಬಾವಿಗಳ ಅನಧಿಕೃತ ವಿದ್ಯುತ್ ಸಂಪರ್ಕಗಳ ಸಕ್ರಮಕ್ಕಾಗಿ ಸರ್ಕಾರ ಈ ಹಿಂದೆ ಯು.ಎನ್.ಐ.ಪಿ ಯೋಜನೆ ಜಾರಿಗೊಳಿಸಿತ್ತು. ಎಸ್ಕಾಂಗಳು ಈ ಯೋಜನೆಯಡಿ ರೈತರಿಂದ ಆರಂಭಿಕ ಭದ್ರತಾ ಠೇವಣಿ (ಎಂ.ಎಂ.ಡಿ.) ಹಾಗೂ ಮೂಲಸೌಕರ್ಯ ಅಭಿವೃದ್ಧಿ ವೆಚ್ಚವಾಗಿ ಪ್ರತಿ ಕೊಳವೆಬಾವಿಗೆ ಶುಲ್ಕದ ರೂಪದಲ್ಲಿ ೨೪ ಸಾವಿರ ರೂ ಮಾತ್ರ ಕಟ್ಟಿಸಿಕೊಳ್ಳುತ್ತಿದ್ದವು. ಈ ಶುಲ್ಕವು ರೈತರಿಗೆ ಆರ್ಥಿಕವಾಗಿ ಹೆಚ್ಚು ಹೊರೆಯಾಗುತ್ತಿರಲಿಲ್ಲ. ಈ ಯೋಜನೆಯನ್ನು ರದ್ದು ಮಾಡಿ ಖಾಸಗಿ ಗುತ್ತಿಗೆದಾರರ ಜೊತೆ ಶಾಮೀಲಾಗಿ ರೈತರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆಂದು ಆರೋಪ ಮಾಡಿದರು.

ಪ್ರಗತಿಪರ ರೈತ ಆಚಂಪಲ್ಲಿ ಗಂಗಾಧರ್ ಮಾತನಾಡಿ, ಮಾರುಕಟ್ಟೆಯಲ್ಲಿ ಸದ್ಯ 25 ಕೆವಿ ಸಾಮಥ್ರ‍್ಯದ ಟ್ರಾನ್ಸ್ ಫಾರ್ಮರ್ ದರವು ಕನಿಷ್ಟ 70 ಸಾವಿರದಿಂದ 1 ಲಕ್ಷದವರೆಗೆ ಇದೆ. ಕೃಷಿ ಜಮೀನು ಎಷ್ಟೇ ದೂರವಿದ್ದರೂ ರೈತರು ಸ್ವಂತ ಹಣದಲ್ಲಿ ಕಂಬ ಮತ್ತು ತಂತಿ ಹಾಕಿಕೊಳ್ಳಬೇಕಿದೆ. ಮತ್ತು ಅಗತ್ಯ ಸಲಕರಣೆಗಳನ್ನು ಖರೀದಿ ಮಾಡಲು ಕನಿಷ್ಟ 3 ಲಕ್ಷರೂ ಬೇಕಾಗುತ್ತದೆ. ಇಷ್ಟು ಖರ್ಚು ಮಾಡುವ ತಾಕತ್ತು ರೈತರಿಗೆ ಇಲ್ಲ. ಇದರಿಂದ ಕೊಳವೆಬಾವಿಯೂ ಬೇಡ, ಕೃಷಿಯೂ ಬೇಡ. ಇರುವ ಜಮೀನನ್ನು ಮಾರಿ ನಗರ ಸೇರಿಕೊಳ್ಳೋಣ ಎಂಬ ನಿರ್ಧಾರ ಕೈಗೊಳ್ಳುವ ಮಟ್ಟಕ್ಕೆ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ಕಿಡಿಕಾರಿದರು.

ಸರ್ಕಾರ ಕೂಡಲೇ ರೈತರಿಗೆ ವರದಾನವಾಗಬೇಕಿದ್ದ ಅಕ್ರಮ ಸಕ್ರಮ ಯೋಜನೆಯ ಯು.ಎನ್.ಐ.ಪಿ.ಯನ್ನು ಮುಂದುವರೆಸಿ, ಯಾವುದೇ ಕಾರಣಕ್ಕೂ ಯೋಜನೆಯನ್ನು ಸ್ಥಗಿತಗೊಳಿಸದಂತೆ ಆದೇಶ ಮಾಡಿ ಹಿಂದೆ ಇದ್ದ ನಿಯಮದಂರೆ ಎಸ್ಕಾಂಗಳೇ ಹೊಸ ಕೃಷಿ ಪಂಪ್ ಸೆಟ್ ಗಳಿಗೆ ಟ್ರಾನ್ಸ್ ಫಾರಂ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸುವ ಮುಖಾಂತರ ಸಂಕಷ್ಟದಲ್ಲಿರುವ ರೈತರಿಗೆ ಸ್ಪಂದಿಸಬೇಕು, ಇಲ್ಲವಾದರೆ ಜಾನುವಾರುಗಳು ಹಾಗೂ ಬೆಳೆಗಳ ಸಮೇತ ಇಂಧನ ಸಚಿವರ ಮನೆ ಮುತ್ತಿಗೆ ಹಾಕುವ ಎಚ್ಚರಿಕೆಯೊಂದಿಗೆ ಮನವಿ ನೀಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಸಹಾಯಕ ಕಾರ್ಯಪಾಲಕ ಅಭಿಯಂತರರು, ಸರ್ಕಾರ ಇಂಧನ ಸಚಿವರು ಹಿರಿಯ ಅಧಿಕಾರಿಗಳಿಗೆ ನೀಡಿರುವ ಸೂಚನೆಯಂತೆ ನಾವು ಅವರ ಆದೇಶವನ್ನು ಪಾಲನೆ ಮಾಡುತ್ತೇವೆ, ನಿಮ್ಮ ಮನವಿಯನ್ನು ಹಿರಿಯ ಅಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಕಳುಹಿಸುವ ಭರವಸೆಯನ್ನು ನೀಡಿದರು.

ಮನವಿ ನೀಡುವಾಗ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ರಾಜ್ಯ ಮುಖಂಡ ಬಂಗವಾದಿ ನಾಗರಾಜಗೌಡ, ತೆರ್ನಹಳ್ಳಿ ಆಂಜಿನಪ್ಪ, ಸುಪ್ರೀಂಚಲ, ಆಲವಾಟ ಶಿವು, ರಾಜೇಂದ್ರಗೌಡ, ಶೇಖ್ ಷಫೀಉಲ್ಲಾ, ಮುನಿರಾಜು, ಹೆಬ್ಬಣಿ ಆನಂದರೆಡ್ಡಿ, ಮಂಗಸಂದ್ರ ತಿಮ್ಮಣ್ಣ, ಶಿವಾರೆಡ್ಡಿ ಮುಂತಾದವರಿದ್ದರು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

8 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago