Categories: ಕೋಲಾರ

ಕೃಷಿ ಬೆಲೆ ಆಯೋಗದ ಅಧ್ಯಕ್ಷ ಅಶೋಕ್ ದಳವಾಯಿ ಅವರನ್ನು ಭೇಟಿ ಮಾಡಿದ ಜಿಲ್ಲೆಯ ಪ್ರಗತಿಪರ ರೈತರು

ಕೋಲಾರ: ಜಿಲ್ಲೆಯ ಪ್ರಗತಿಪರ ರೈತರು ರಾಜ್ಯ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಅಶೋಕ್ ದಳವಾಯಿ ಅವರನ್ನು ಭೇಟಿ ಮಾಡಿ ಜಿಲ್ಲೆಯ ರೈತರಿಗೆ ಬೆಂಬಲ ಬೆಲೆ ಸೇರಿದಂತೆ ಮಾರುಕಟ್ಟೆ ಪರಿಸ್ಥಿತಿಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು,

ಈ ಸಂದರ್ಭದಲ್ಲಿ ಪ್ರಗತಿಪರ ರೈತ ತುರಾಂಡಹಳ್ಳಿ ರವಿ ಮಾತನಾಡಿ ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಉತ್ಪಾದನಾ ವೆಚ್ಚ ನಿಗದಿ ಮಾಡುವುದು ಅಷ್ಟೇ ಕೃಷಿ ಆಯೋಗದ ಕೆಲಸವಾಗಬಾರದು ರೈತರಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ದೊರೆಯುವಂತೆ ಮಾಡುವ ಹೊಣೆಗಾರಿಕೆಯನ್ನು ತೆಗೆದುಕೊಳ್ಳಬೇಕು ಎಂದು ಅಶೋಕ್ ದಳವಾಯಿ ಅವರನ್ನು ಒತ್ತಾಯ ಮಾಡಿದರು

ಕೃಷಿ ಉತ್ಪನ್ನಗಳ ಬೆಲೆ ಕುಸಿತ ಅತಿವೃಷ್ಠಿ ಹಾಗೂ ಅನಾವೃಷ್ಠಿಯಿಂದ ಬೆಳೆ ಹಾನಿ ಉತ್ಪಾದನಾ ವೆಚ್ಚದ ಏರಿಕೆಯಂತಹ ಬಿಕ್ಕಟ್ಟಿನ ಸ್ಥಿತಿಯಲ್ಲಿ ಕೃಷಿ ಮಾರುಕಟ್ಟೆ ವ್ಯವಸ್ಥೆಯನ್ನು ಸುಧಾರಿಸುವುದು ಕೂಡ ಆಯೋಗದ ಜವಾಬ್ದಾರಿಯಾಗಬೇಕು ಜೊತೆಗೆ ಹಣ್ಣು ತರಕಾರಿಗಳು, ದವಸ ಧಾನ್ಯಗಳನ್ನು ಮತ್ತು ಮಸಾಲೆ ಪದಾರ್ಥಗಳ ಸಂಗ್ರಹಯ ಗೋದಾಮು ಮಾಡಬೇಕಾಗಿದೆ ಜೊತೆಗೆ ಶೀತಲಗೃಹಗಳ ಗೋದಾಮುಗಳಲ್ಲಿ ರೈತರು ದಾಸ್ತಾನಿನ ಸಂಗ್ರಹದ ಆಧಾರದ ಮೇಲೆ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವುದು ಇದಕ್ಕೆ ಸಂಬಂಧಿಸಿದ ಇಲಾಖೆಯ ನೇತೃತ್ವದಲ್ಲಿ ಪ್ರಚಾರ ಮಾಡಬೇಕು ಎಂದು ಒತ್ತಾಯಿಸಿದರು.

ರೈತರಿಗೆ ಸಂಬಂಧಿಸಿದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಗ್ರಾಪಂ ಮಟ್ಟದಲ್ಲಿ ಶೀಥಲಗೃಹಗಳ ಗೋದಾಮುಗಳನ್ನು ನಿರ್ಮಾಣ ಮಾಡಿ ರೈತರಿಗೆ ಮಾರುಕಟ್ಟೆಯಲ್ಲಿ ಬೆಲೆ ಕುಸಿದಾಗ ಸಂಗ್ರಹಿಸಿ ಏರಿಕೆಯಾದಾಗ ಮಾರಾಟ ಮಾಡಲು ಅನುವು ಮಾಡಿಕೊಡಬೇಕು ಬೆಳೆಗಳ ಸಮೀಕ್ಷೆ ಬಗ್ಗೆ ಕಾಲಕಾಲಕ್ಕೆ ಮಾಹಿತಿ ನೀಡುವ ಕೆಲಸವನ್ನು ಮಾಡಬೇಕು ರೈತರಿಗೆ ಸಬ್ಸಿಡಿ ಕೊಡುವ ಬದಲಾಗಿ ಬೆಳೆಗಳನ್ನು ಬೆಳೆಯುವ ರೈತರಿಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡುವ ವ್ಯವಸ್ಥೆ ಮಾಡಬೇಕು ಜೊತೆಗೆ ಕೋಲಾರದಲ್ಲಿ ದೊಡ್ಡದಾದ ಎಪಿಎಂಸಿ ಮಾರುಕಟ್ಟೆ ವ್ಯವಸ್ಥೆ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಬೇಕಾಗಿದೆ ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕೃಷಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಹೆಚ್ ಲೋಕೇಶ್, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಪ್ರಾದೇಶಿಕ ವ್ಯವಸ್ಥಾಪಕ ಡಾ ಎನ್ ಮಂಜುನಾಥ್, ಪ್ರಗತಿಪರ ರೈತ ಮದನಹಳ್ಳಿ ರವಿಶಂಕರ್ ಮುಂತಾದವರು ಇದ್ದರು.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

7 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

11 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

11 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

19 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago