Categories: ಧಾರವಾಡ

ಕೃಷಿ ವಿವಿಗಳು Lab to Land ಜೊತೆಗೆ Land to Lab ಕಡೆಗೆ ಗಮನ ಹರಿಸಬೇಕು- ಸಿಎಂ ಸಿದ್ದರಾಮಯ್ಯ

ಸ್ವಾತಂತ್ರ್ಯದ ಹೊಸ್ತಿಲಲ್ಲಿ ಆಹಾರ ಉತ್ಪಾದನೆಯಲ್ಲಿ ಹಿಂದೆ ಇದ್ದೆವು. ಬಳಿಕ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಬೆಳೆಸಿಕೊಂಡು ರಫ್ತು ಮಾಡುವುದರಲ್ಲೂ ಮುಂದೆ ಬಂದೆವು. ಆದರೆ, ಇತ್ತೀಚಿಗೆ ಫಲವತ್ತತೆ ಕಡಿಮೆ ಆಗುತ್ತಾ ಆಹಾರ ಉತ್ಪಾದನಾ ಪ್ರಮಾಣ ಕಡಿಮೆ ಆಗಿದೆ. ಇದಕ್ಕೆ ಸ್ಪಷ್ಟ ಕಾರಣಗಳನ್ನು ಗುರುತಿಸಿ ಪರಿಹಾರ ಕಂಡುಕೊಳ್ಳುವ ದಿಕ್ಕಿನಲ್ಲಿ ಕೃಷಿ ವಿವಿಗಳು ಹೆಚ್ಚೆಚ್ಚು ಅಧ್ಯಯನ‌ ನಡೆಸಬೇಕು. ಇದಕ್ಕೆ ಅಗತ್ಯವಾದ ಹಣಕಾಸಿನ‌ ನೆರವನ್ನು ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸದ್ಯ ರಾಜ್ಯ ಹಾಲಿನ‌ ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಸದ್ಯದಲ್ಲೇ ಮಹಾರಾಷ್ಟ್ರ ರಾಜ್ಯವನ್ನು ಹಿಂದಿಕ್ಕಿ ನಾವೇ ನಂಬರ್ ಆದರೂ ಆಶ್ಚರ್ಯವಿಲ್ಲ. ಹೈನುಗಾರಿಕೆಯಲ್ಲಿ ನಾವು ಅಪಾರ ಪ್ರಗತಿ ಸಾಧಿಸಿದ್ದೇವೆ ಎಂದರು.

ಅಕ್ಕಿ, ರಾಗಿ, ಗೋಧಿಯಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾಗಿದ್ದು ಡಯಾಬಿಟಿಕ್ ಸಮಸ್ಯೆ ಇರುವವರ ಪ್ರಮಾಣ ಹೆಚ್ಚುತ್ತಿದೆ. ಆದ್ದರಿಂದ ಸಕ್ಕರೆ ಪ್ರಮಾಣ ಕಡಿಮೆ ಇರುವ ಸಿರಿಧಾನ್ಯ ಕೃಷಿಗೆ ಹೆಚ್ಚೆಚ್ಚು ಪ್ರೋತ್ಸಾಹ ನೀಡುತ್ತಿದ್ದೇವೆ ಎಂದು ಹೇಳಿದರು.

ಕೃಷಿ ವಿವಿಗಳು Lab to Land ಜೊತೆಗೆ Land to Lab ಕಡೆಗೆ ಗಮನ ಹರಿಸುವ ಕೆಲಸ ಮಾಡಬೇಕು. ಕಡಿಮೆ ಮಳೆಯಲ್ಲೂ ಉತ್ತಮ ಬೆಳೆ ಬೆಳೆಯುವ ರೀತಿ ಸುಸ್ಥಿರ ಕೃಷಿಗೆ ಪೂರಕವಾಗಿ ಅಧ್ಯಯನಗಳು ನಡೆಯಬೇಕು ಎಂದು ತಿಳಿಸಿದರು.

ಮೊದಲೆಲ್ಲಾ ಕೃಷಿ ಚಟುವಟಿಕೆಗೆ ಪೂರಕವಾಗಿ ಗ್ರಾಮ ಸಹಾಯಕರು ಇದ್ದು, ಅವರು ಗ್ರಾಮಗಳಲ್ಲೇ ನೆಲೆಸುತ್ತಿದ್ದರು. ಈಗ ಅವರ ಸಂಖ್ಯೆ ಕಡಿಮೆ ಆಗಿದ್ದು ಮತ್ತೆ ಇವರ ಪ್ರಮಾಣ ಹೆಚ್ಚಾಗುವ ದಿಕ್ಕಿನಲ್ಲಿ ಕೃಷಿ ಸಚಿವರು ಕ್ರಮ ತೆಗೆದುಕೊಳ್ಳಬೇಕಿದೆ ಎಂದರು.

ಕೃಷಿ ಭೂಮಿಗಳು ಹೆಚ್ಚಾಗದೆ, ಕೃಷಿಯ ಪ್ರಮಾಣ ಹೆಚ್ಚಾಗದೆ ಕೇವಲ ಕೃಷಿ ವಿವಿಗಳನ್ನು ಹೆಚ್ಚಿಸಿದರೆ ಹೆಚ್ಚಿನ ಅನುಕೂಲಗಳು ಆಗುವುದಿಲ್ಲ.
ಬೆಣ್ಣೆಹಳ್ಳಕ್ಕೆ 200 ಕೋಟಿ ಕೊಟ್ಟಿದ್ದೇವೆ. ಟೆಂಡರ್ ಕರೆಯಲಾಗಿದೆ. ಸದ್ಯದಲ್ಲೇ ಕೆಲಸ ಕೂಡ ಆರಂಭವಾಗಲಿದೆ ಎಂದು ಹೇಳಿದರು.

ಮಳೆಹಾನಿಯಿಂದ ಆಗಿರುವ ಬೆಳೆ ಹಾನಿ ಮತ್ತು ಅನಾಹುತಗಳ ಬಗ್ಗೆ ಧಾರವಾಡ ಜಿಲ್ಲಾಡಳಿತ ಶೇ.90 ಪರಿಹಾರ ನೀಡಿ, ಪ್ರಗತಿಯ ವರದಿ ನೀಡಿದೆ. ಇದಕ್ಕಾಗಿ ಜಿಲ್ಲಾಧಿಕಾರಿ ದಿವ್ಯಪ್ರಭು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರಿಗೆ ಅಭಿನಂದನೆಗಳು ಎಂದರು.

Ramesh Babu

Journalist

Recent Posts

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

3 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

5 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

7 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

1 day ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

1 day ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

1 day ago