ಕೃಷಿ ಹೊಂಡಕ್ಕೆ ಬಿದ್ದು ಸುಮಾರು 8 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಇಂದು ನಡೆದಿದೆ….
ಆಂಧ್ರಮೂಲದ ನಾಗಚೈತನ್ಯ(8), ಮೃತಪಟ್ಟ ಬಾಲಕ.
ಕಳೆದ ಮೂರ ದಿನಗಳ ಹಿಂದಷ್ಟೇ ಆಂಧ್ರಪ್ರದೇಶದಿಂದ ಗಾರೆ ಕೆಲಸ ಮಾಡಲು ಮಕ್ಕಳ ಸಮೇತ ಕೊನಘಟ್ಟಕ್ಕೆ ಬಂದಿದ್ದರು ಎಂದು ತಿಳಿದುಬಂದಿದೆ…
ಅಣ್ಣ-ತಂಗಿ ಜೊತೆಯಲ್ಲಿ ಕೃಷಿ ಹೊಂಡದ ಕಡೆ ಹೋಗಿದ್ದಾರೆ… ಆಯಾತಪ್ಪಿ ಅಣ್ಣ ಕೃಷಿ ಹೊಂಡದಲ್ಲಿ ಬಿದ್ದಿದ್ದಾನೆ. ಇದನ್ನು ಕಂಡ ತಂಗಿ ಕೂಡಲೇ ತನ್ನ ಪೋಷಕರಿಗೆ ತಿಳಿಸಿದ್ದಾರೆ. ಪೋಷಕರು ಬಂದು ನೋಡಿದಾಗ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….