ವ್ಯಕ್ತಿಯೊಬ್ಬ ಕಾಲುಜಾರಿ ಕೃಷಿಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದ ತೋಟವೊಂದರಲ್ಲಿ ನಡೆದಿದೆ.
ಉಜ್ಜನಿ ಹೊಸಹಳ್ಳಿ ಗ್ರಾಮದ ಸುನೀಲ್ (30) ಸಾವನ್ನಪ್ಪಿರುವ ವ್ಯಕ್ತಿ.
ನಿನ್ನೆ ಹೋಳಿ ಹಬ್ಬ ಆಚರಿಸಿ ಸಂಜೆ 6 ಗಂಟೆ ಸುಮಾರಿನಲ್ಲಿ ಕೃಷಿ ಹೊಂಡದಲ್ಲಿ ಮುಖ ತೊಳೆಯಲು ಹೋಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕಳೆದ ಎರಡು ತಿಂಗಳ ಹಿಂದಷ್ಟೇ ನಾರಸಿಂಹನಹಳ್ಳಿ ಬಳಿಯ ತೋಟವೊಂದಲ್ಲಿ ಮೇಲ್ವಿಚಾರಕನ ಕೆಲಸಕ್ಕೆ ಸೇರಿದ್ದರು. ತೋಟದಲ್ಲೇ ವಾಸವಿದ್ದ ಬಿಹಾರದ ಕಾರ್ಮಿಕರೊಂದಿಗೆ ಹೋಳಿ ಆಚರಿಸಿ ಸಂಜೆ 6ಗಂಟೆ ಸುಮಾರಿನಲ್ಲಿ ಫಾಲಿಹೌಸ್ ನಲ್ಲಿದ್ದ ಕೃಷಿ ಹೊಂಡದ ಬಳಿ ಹೋಗಿದ್ದರು ಎಂದು ತಿಳಿದುಬಂದಿದೆ. ಇಂದು ಬೆಳಿಗ್ಗೆ ಬಿಹಾರಿ ಕಾರ್ಮಿಕರು ಕೃಷಿ ಹೊಂಡದ ಬಳಿ ಬಂದಾಗ ಸುನೀಲ್ ಮೃತದೇಹ ಕಂಡು ಬಂದಿದೆ. ಕೂಡಲೇ ವಿಷಯವನ್ನು ತೋಟದ ಮಾಲೀಕನಿಗೆ ತಿಳಿಸಿದರು.
ಸ್ಥಳಕ್ಕೆ ಗ್ರಾಮಾಂತರ ಠಾಣಾ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಾಗಿದೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…