ವ್ಯಕ್ತಿಯೊಬ್ಬ ಕಾಲುಜಾರಿ ಕೃಷಿಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದ ತೋಟವೊಂದರಲ್ಲಿ ನಡೆದಿದೆ.
ಉಜ್ಜನಿ ಹೊಸಹಳ್ಳಿ ಗ್ರಾಮದ ಸುನೀಲ್ (30) ಸಾವನ್ನಪ್ಪಿರುವ ವ್ಯಕ್ತಿ.
ನಿನ್ನೆ ಹೋಳಿ ಹಬ್ಬ ಆಚರಿಸಿ ಸಂಜೆ 6 ಗಂಟೆ ಸುಮಾರಿನಲ್ಲಿ ಕೃಷಿ ಹೊಂಡದಲ್ಲಿ ಮುಖ ತೊಳೆಯಲು ಹೋಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕಳೆದ ಎರಡು ತಿಂಗಳ ಹಿಂದಷ್ಟೇ ನಾರಸಿಂಹನಹಳ್ಳಿ ಬಳಿಯ ತೋಟವೊಂದಲ್ಲಿ ಮೇಲ್ವಿಚಾರಕನ ಕೆಲಸಕ್ಕೆ ಸೇರಿದ್ದರು. ತೋಟದಲ್ಲೇ ವಾಸವಿದ್ದ ಬಿಹಾರದ ಕಾರ್ಮಿಕರೊಂದಿಗೆ ಹೋಳಿ ಆಚರಿಸಿ ಸಂಜೆ 6ಗಂಟೆ ಸುಮಾರಿನಲ್ಲಿ ಫಾಲಿಹೌಸ್ ನಲ್ಲಿದ್ದ ಕೃಷಿ ಹೊಂಡದ ಬಳಿ ಹೋಗಿದ್ದರು ಎಂದು ತಿಳಿದುಬಂದಿದೆ. ಇಂದು ಬೆಳಿಗ್ಗೆ ಬಿಹಾರಿ ಕಾರ್ಮಿಕರು ಕೃಷಿ ಹೊಂಡದ ಬಳಿ ಬಂದಾಗ ಸುನೀಲ್ ಮೃತದೇಹ ಕಂಡು ಬಂದಿದೆ. ಕೂಡಲೇ ವಿಷಯವನ್ನು ತೋಟದ ಮಾಲೀಕನಿಗೆ ತಿಳಿಸಿದರು.
ಸ್ಥಳಕ್ಕೆ ಗ್ರಾಮಾಂತರ ಠಾಣಾ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…