ವ್ಯಕ್ತಿಯೊಬ್ಬ ಕಾಲುಜಾರಿ ಕೃಷಿಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದ ತೋಟವೊಂದರಲ್ಲಿ ನಡೆದಿದೆ.
ಉಜ್ಜನಿ ಹೊಸಹಳ್ಳಿ ಗ್ರಾಮದ ಸುನೀಲ್ (30) ಸಾವನ್ನಪ್ಪಿರುವ ವ್ಯಕ್ತಿ.
ನಿನ್ನೆ ಹೋಳಿ ಹಬ್ಬ ಆಚರಿಸಿ ಸಂಜೆ 6 ಗಂಟೆ ಸುಮಾರಿನಲ್ಲಿ ಕೃಷಿ ಹೊಂಡದಲ್ಲಿ ಮುಖ ತೊಳೆಯಲು ಹೋಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕಳೆದ ಎರಡು ತಿಂಗಳ ಹಿಂದಷ್ಟೇ ನಾರಸಿಂಹನಹಳ್ಳಿ ಬಳಿಯ ತೋಟವೊಂದಲ್ಲಿ ಮೇಲ್ವಿಚಾರಕನ ಕೆಲಸಕ್ಕೆ ಸೇರಿದ್ದರು. ತೋಟದಲ್ಲೇ ವಾಸವಿದ್ದ ಬಿಹಾರದ ಕಾರ್ಮಿಕರೊಂದಿಗೆ ಹೋಳಿ ಆಚರಿಸಿ ಸಂಜೆ 6ಗಂಟೆ ಸುಮಾರಿನಲ್ಲಿ ಫಾಲಿಹೌಸ್ ನಲ್ಲಿದ್ದ ಕೃಷಿ ಹೊಂಡದ ಬಳಿ ಹೋಗಿದ್ದರು ಎಂದು ತಿಳಿದುಬಂದಿದೆ. ಇಂದು ಬೆಳಿಗ್ಗೆ ಬಿಹಾರಿ ಕಾರ್ಮಿಕರು ಕೃಷಿ ಹೊಂಡದ ಬಳಿ ಬಂದಾಗ ಸುನೀಲ್ ಮೃತದೇಹ ಕಂಡು ಬಂದಿದೆ. ಕೂಡಲೇ ವಿಷಯವನ್ನು ತೋಟದ ಮಾಲೀಕನಿಗೆ ತಿಳಿಸಿದರು.
ಸ್ಥಳಕ್ಕೆ ಗ್ರಾಮಾಂತರ ಠಾಣಾ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಾಗಿದೆ.
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…