ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು ಮೃತಪಟ್ಟ ದುರ್ಘಟನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಇಂದು ಡಿವೈಎಸ್ ಪಿ ಪಾಂಡುರಂಗ ನೇತೃತ್ವದಲ್ಲಿ ಕೃಷಿ ಹೊಂಡಗಳ ಸುರಕ್ಷತೆ ಕುರಿತು ಜಾಗೃತಿ ಸಭೆ ನಡೆಸಲಾಯಿತು.

ಸಭೆಯಲ್ಲಿ ಕೃಷಿ ಹೊಂಡಗಳಲ್ಲಿ ಸಂಭವಿಸಬಹುದಾದ ಅಪಘಾತಗಳನ್ನು ತಡೆಯಲು ಹಲವು ಮಹತ್ವದ ಸೂಚನೆಗಳನ್ನು ನೀಡಲಾಯಿತು. ಗ್ರಾಮಾಂತರ ಠಾಣೆ ವ್ಯಾಪ್ತಿಯ ಎಲ್ಲಾ ಬೀಟ್ ಸಿಬ್ಬಂದಿಗೆ ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ಇರುವ ಕೃಷಿ ಹೊಂಡಗಳ ಕುರಿತು ಮಾಹಿತಿ ಸಂಗ್ರಹಿಸುವಂತೆ ಸೂಚಿಸಲಾಗಿದೆ.

ಅಲ್ಲದೆ, ಕೃಷಿ ಇಲಾಖೆ ಹಾಗೂ ಸಣ್ಣ ನೀರಾವರಿ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ, ಭದ್ರತಾ ಕ್ರಮಗಳ ಅನುಷ್ಠಾನಕ್ಕೆ ಮುಂದಾಗುವಂತೆ ತಿಳಿಸಲಾಗಿದೆ.

ಫೆನ್ಸಿಂಗ್ ಅಥವಾ ಅಗತ್ಯ ಸುರಕ್ಷತಾ ವ್ಯವಸ್ಥೆಗಳಿಲ್ಲದೆ ಅಸುರಕ್ಷಿತ ಸ್ಥಿತಿಯಲ್ಲಿರುವ ಕೃಷಿ ಹೊಂಡಗಳ ಮಾಲೀಕರು ತಕ್ಷಣವೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಲಾಗಿದೆ.

ಯಾವುದೇ ಕೃಷಿ ಹೊಂಡದಲ್ಲಿ ಅಜಾಗರೂಕತೆಯಿಂದ ಅಪಘಾತ ಸಂಭವಿಸಿ ಪ್ರಾಣಹಾನಿ ಉಂಟಾದಲ್ಲಿ, ಸಂಬಂಧಪಟ್ಟ ಕೃಷಿ ಹೊಂಡದ ಮಾಲೀಕರನ್ನೇ ಹೊಣೆಗಾರರನ್ನಾಗಿ ಪರಿಗಣಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಭೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಇದರ ಜೊತೆಗೆ, ಬೀಟ್ ಸಿಬ್ಬಂದಿ ಗ್ರಾಮಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸಿ, ಮಕ್ಕಳ ಹಾಗೂ ಪೋಷಕರಲ್ಲಿ ಕೃಷಿ ಹೊಂಡಗಳ ಅಪಾಯದ ಬಗ್ಗೆ ಅರಿವು ಮೂಡಿಸುವಂತೆ ಸೂಚಿಸಲಾಗಿದೆ.

ಗ್ರಾಮ ಪಂಚಾಯಿತಿ ಪಿಡಿಒಗಳು ಹಾಗೂ ಕೃಷಿ ಇಲಾಖೆಯೊಂದಿಗೆ ಪತ್ರ ವ್ಯವಹಾರ ನಡೆಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಕೃಷಿ ಹೊಂಡಗಳ ಸುತ್ತಮುತ್ತ ಮಕ್ಕಳ ಸಂಚಾರದ ಬಗ್ಗೆ ಪೋಷಕರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಈ ವೇಳೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಡಾ.ನವೀನ್ ಕುಮಾರ್ ಎಂ.ಬಿ, ಹೊಸಹಳ್ಳಿ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಸೇರಿದಂತೆ ಡಿವೈಎಸ್ ಪಿ ಉಪವಿಭಾಗದ ಇನ್ಸ್ ಪೆಕ್ಟರ್ ಗಳು ಇದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

14 hours ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

2 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago