ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು ಮೃತಪಟ್ಟ ದುರ್ಘಟನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಇಂದು ಡಿವೈಎಸ್ ಪಿ ಪಾಂಡುರಂಗ ನೇತೃತ್ವದಲ್ಲಿ ಕೃಷಿ ಹೊಂಡಗಳ ಸುರಕ್ಷತೆ ಕುರಿತು ಜಾಗೃತಿ ಸಭೆ ನಡೆಸಲಾಯಿತು.

ಸಭೆಯಲ್ಲಿ ಕೃಷಿ ಹೊಂಡಗಳಲ್ಲಿ ಸಂಭವಿಸಬಹುದಾದ ಅಪಘಾತಗಳನ್ನು ತಡೆಯಲು ಹಲವು ಮಹತ್ವದ ಸೂಚನೆಗಳನ್ನು ನೀಡಲಾಯಿತು. ಗ್ರಾಮಾಂತರ ಠಾಣೆ ವ್ಯಾಪ್ತಿಯ ಎಲ್ಲಾ ಬೀಟ್ ಸಿಬ್ಬಂದಿಗೆ ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ಇರುವ ಕೃಷಿ ಹೊಂಡಗಳ ಕುರಿತು ಮಾಹಿತಿ ಸಂಗ್ರಹಿಸುವಂತೆ ಸೂಚಿಸಲಾಗಿದೆ.

ಅಲ್ಲದೆ, ಕೃಷಿ ಇಲಾಖೆ ಹಾಗೂ ಸಣ್ಣ ನೀರಾವರಿ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ, ಭದ್ರತಾ ಕ್ರಮಗಳ ಅನುಷ್ಠಾನಕ್ಕೆ ಮುಂದಾಗುವಂತೆ ತಿಳಿಸಲಾಗಿದೆ.

ಫೆನ್ಸಿಂಗ್ ಅಥವಾ ಅಗತ್ಯ ಸುರಕ್ಷತಾ ವ್ಯವಸ್ಥೆಗಳಿಲ್ಲದೆ ಅಸುರಕ್ಷಿತ ಸ್ಥಿತಿಯಲ್ಲಿರುವ ಕೃಷಿ ಹೊಂಡಗಳ ಮಾಲೀಕರು ತಕ್ಷಣವೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಲಾಗಿದೆ.

ಯಾವುದೇ ಕೃಷಿ ಹೊಂಡದಲ್ಲಿ ಅಜಾಗರೂಕತೆಯಿಂದ ಅಪಘಾತ ಸಂಭವಿಸಿ ಪ್ರಾಣಹಾನಿ ಉಂಟಾದಲ್ಲಿ, ಸಂಬಂಧಪಟ್ಟ ಕೃಷಿ ಹೊಂಡದ ಮಾಲೀಕರನ್ನೇ ಹೊಣೆಗಾರರನ್ನಾಗಿ ಪರಿಗಣಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಭೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಇದರ ಜೊತೆಗೆ, ಬೀಟ್ ಸಿಬ್ಬಂದಿ ಗ್ರಾಮಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸಿ, ಮಕ್ಕಳ ಹಾಗೂ ಪೋಷಕರಲ್ಲಿ ಕೃಷಿ ಹೊಂಡಗಳ ಅಪಾಯದ ಬಗ್ಗೆ ಅರಿವು ಮೂಡಿಸುವಂತೆ ಸೂಚಿಸಲಾಗಿದೆ.

ಗ್ರಾಮ ಪಂಚಾಯಿತಿ ಪಿಡಿಒಗಳು ಹಾಗೂ ಕೃಷಿ ಇಲಾಖೆಯೊಂದಿಗೆ ಪತ್ರ ವ್ಯವಹಾರ ನಡೆಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಕೃಷಿ ಹೊಂಡಗಳ ಸುತ್ತಮುತ್ತ ಮಕ್ಕಳ ಸಂಚಾರದ ಬಗ್ಗೆ ಪೋಷಕರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಈ ವೇಳೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಡಾ.ನವೀನ್ ಕುಮಾರ್ ಎಂ.ಬಿ, ಹೊಸಹಳ್ಳಿ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಸೇರಿದಂತೆ ಡಿವೈಎಸ್ ಪಿ ಉಪವಿಭಾಗದ ಇನ್ಸ್ ಪೆಕ್ಟರ್ ಗಳು ಇದ್ದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

9 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

24 hours ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

2 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

3 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago