ಬೇಸಿಗೆ ಪ್ರಾರಂಭವಾಗಿದ್ದು, ಕೃಷಿ ಹೊಂಡದಲ್ಲಿ ಮಕ್ಕಳು ಈಜಲು ಮತ್ತು ಜಾನುವಾರುಗಳು ನೀರು ಕುಡಿಯಲು ಬಂದಂತಹ ಸಂದರ್ಭದಲ್ಲಿ ಬೀಳುವ ಸಂಭವವಿದ್ದು, ಈ ಹಿಂದೆ ನಿರ್ಮಿಸಿರುವ ಕೃಷಿ ಹೊಂಡಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಲು ಕೃಷಿ ಇಲಾಖೆ ರೈತರಲ್ಲಿ ಮನವಿ ಮಾಡಿದೆ.
ಕೃಷಿ ಇಲಾಖೆಯ ಬಹುಪಯೋಗಿ ಯೋಜನೆಯಾದ ಕೃಷಿ ಭಾಗ್ಯ ಯೋಜನೆಯನ್ನು 2014-15 ನೇ ಸಾಲಿನಿಂದ ಅನುಷ್ಟಾನ ಮಾಡಲಾಗಿರುತ್ತದೆ. ಬೇಸಾಯ ಮಾಡುವ ರೈತರಿಗೆ ನೀರಿನ ಸಂಗ್ರಹಣೆಗಾಗಿ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡಗಳನ್ನು ನಿರ್ಮಿಸಿಲಾಗಿರುತ್ತದೆ. ತದನಂತರ ತೋಟಗಾರಿಕಾ/ನರೇಗಾ ಯೋಜನೆಯಡಿ ಕೂಡ ಕೃಷಿ ಹೊಂಡಗಳ ನಿರ್ಮಾಣವಾಗಿರುತ್ತವೆ.
ಕೃಷಿ ಹೊಂಡಗಳಿಗೆ ಸೂಕ್ತವಾದ ರಕ್ಷಣಾ ಕ್ರಮಗಳನ್ನು ಅಳವಡಿಸದೆ ಇರುವದರಿಂದ ಕೃಷಿ ಹೊಂಡಗಳಲ್ಲಿ ಜೀವ ಹಾನಿಯಾಗುತ್ತಿರುವ ಪ್ರಕರಣಗಳು ದಾಖಲಾಗುತ್ತಿವೆ. ಈ ಕುರಿತು ರೈತರಲ್ಲಿ ಅರಿವು ಮೂಡಿಸುವ ಕ್ರಮವನ್ನು ಕೈಗೊಳ್ಳಲಾಗಿದೆ.
ಕೃಷಿ ಹೊಂಡದ ಸುತ್ತಲು ತಂತಿ ಬೇಲಿ / ನೆರಳು ಪರದೆ / ತಮ್ಮಲ್ಲಿ ಲಭ್ಯವಿರುವ ಸಂಪನ್ಮೂಲಗಳಿಂದ ಬೇಲಿ ಆಳವಡಿಸುವುದು ಕಡ್ಡಾಯವಾಗಿರುತ್ತದೆ. ಕೃಷಿ ಹೊಂಡದ ಮುಂದೆ “ಅಪಾಯ” ಮತ್ತು “ಈಜಬಾರದು” ಎಂಬ ಸೂಚನಾ ಫಲಕವನ್ನು ಕಡ್ಡಾಯವಾಗಿ ಹಾಕಲು ಈ ಮೂಲಕ ತಿಳಿಸಿದೆ.
ಕೃಷಿ ಹೊಂಡಗಳಲ್ಲಿ ಸುರಕ್ಷತಾ ಕ್ರಮವಾಗಿ ಹಗ್ಗದೊಂದಿಗೆ ಟ್ಯೂಬ್ಗಳನ್ನು ನಾಲ್ಕೂ ಮೂಲೆಗಳಲ್ಲಿ ಇಳಿ ಬಿಡಲು ತಿಳಿಸಿದೆ.
ಈ ನಿಟ್ಟಿನಲ್ಲಿ ರೈತ ಬಾಂಧವರು ತಮ್ಮ ಜಮೀನಿನಲ್ಲಿರುವ ಮುಖ್ಯವಾಗಿ ಮನೆಯ ಸಮೀಪವಿರುವ, ರಸ್ತೆ ಪಕ್ಕದಲ್ಲಿರುವ ಎಲ್ಲಾ ಕೃಷಿ ಹೊಂಡಗಳಿಗೆ ಸುರಕ್ಷಿತ ಕ್ರಮ ಕೈಗೊಳ್ಳಬೇಕು.
ರೈತರು ತಮ್ಮ ಕೃಷಿ ಹೊಂಡಗಳಿಗೆ ಸೂಕ್ತವಾದ ರಕ್ಷಣಾ ಕ್ರಮಗಳನ್ನು ಆಳವಡಿಸಿ ಪ್ರಾಣ ಹಾನಿಯನ್ನು ತಪ್ಪಿಸಲು ಸಹಕರಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…