ಕೃಷಿ ಹೊಂಡಗಳಿಗೆ ತಂತಿ ಬೇಲಿ ನಿರ್ಮಿಸಿ ಅನಾಹುತ ತಪ್ಪಿಸಿ- ಕೃಷಿ ಹೊಂಡ ಬಳಿ “ಅಪಾಯ” ಮತ್ತು “ಈಜಬಾರದು” ಎಂಬ ಸೂಚನಾ ಫಲಕ ಅಳವಡಿಸಿ

ಬೇಸಿಗೆ ಪ್ರಾರಂಭವಾಗಿದ್ದು, ಕೃಷಿ ಹೊಂಡದಲ್ಲಿ ಮಕ್ಕಳು ಈಜಲು ಮತ್ತು ಜಾನುವಾರುಗಳು ನೀರು ಕುಡಿಯಲು ಬಂದಂತಹ ಸಂದರ್ಭದಲ್ಲಿ ಬೀಳುವ ಸಂಭವವಿದ್ದು, ಈ ಹಿಂದೆ ನಿರ್ಮಿಸಿರುವ ಕೃಷಿ ಹೊಂಡಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಲು ಕೃಷಿ ಇಲಾಖೆ ರೈತರಲ್ಲಿ ಮನವಿ ಮಾಡಿದೆ.

ಕೃಷಿ ಇಲಾಖೆಯ ಬಹುಪಯೋಗಿ ಯೋಜನೆಯಾದ ಕೃಷಿ ಭಾಗ್ಯ ಯೋಜನೆಯನ್ನು 2014-15 ನೇ ಸಾಲಿನಿಂದ ಅನುಷ್ಟಾನ ಮಾಡಲಾಗಿರುತ್ತದೆ. ಬೇಸಾಯ ಮಾಡುವ ರೈತರಿಗೆ ನೀರಿನ ಸಂಗ್ರಹಣೆಗಾಗಿ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡಗಳನ್ನು ನಿರ್ಮಿಸಿಲಾಗಿರುತ್ತದೆ. ತದನಂತರ ತೋಟಗಾರಿಕಾ/ನರೇಗಾ ಯೋಜನೆಯಡಿ ಕೂಡ ಕೃಷಿ ಹೊಂಡಗಳ ನಿರ್ಮಾಣವಾಗಿರುತ್ತವೆ.

ಕೃಷಿ ಹೊಂಡಗಳಿಗೆ ಸೂಕ್ತವಾದ ರಕ್ಷಣಾ ಕ್ರಮಗಳನ್ನು ಅಳವಡಿಸದೆ ಇರುವದರಿಂದ ಕೃಷಿ ಹೊಂಡಗಳಲ್ಲಿ ಜೀವ ಹಾನಿಯಾಗುತ್ತಿರುವ ಪ್ರಕರಣಗಳು ದಾಖಲಾಗುತ್ತಿವೆ. ಈ ಕುರಿತು ರೈತರಲ್ಲಿ ಅರಿವು ಮೂಡಿಸುವ ಕ್ರಮವನ್ನು ಕೈಗೊಳ್ಳಲಾಗಿದೆ.

ಕೃಷಿ ಹೊಂಡದ ಸುತ್ತಲು ತಂತಿ ಬೇಲಿ / ನೆರಳು ಪರದೆ / ತಮ್ಮಲ್ಲಿ ಲಭ್ಯವಿರುವ ಸಂಪನ್ಮೂಲಗಳಿಂದ ಬೇಲಿ ಆಳವಡಿಸುವುದು ಕಡ್ಡಾಯವಾಗಿರುತ್ತದೆ. ಕೃಷಿ ಹೊಂಡದ ಮುಂದೆ “ಅಪಾಯ” ಮತ್ತು “ಈಜಬಾರದು” ಎಂಬ ಸೂಚನಾ ಫಲಕವನ್ನು ಕಡ್ಡಾಯವಾಗಿ ಹಾಕಲು ಈ ಮೂಲಕ ತಿಳಿಸಿದೆ.

ಕೃಷಿ ಹೊಂಡಗಳಲ್ಲಿ ಸುರಕ್ಷತಾ ಕ್ರಮವಾಗಿ ಹಗ್ಗದೊಂದಿಗೆ ಟ್ಯೂಬ್‌ಗಳನ್ನು ನಾಲ್ಕೂ ಮೂಲೆಗಳಲ್ಲಿ ಇಳಿ ಬಿಡಲು ತಿಳಿಸಿದೆ.

ಈ ನಿಟ್ಟಿನಲ್ಲಿ ರೈತ ಬಾಂಧವರು ತಮ್ಮ ಜಮೀನಿನಲ್ಲಿರುವ ಮುಖ್ಯವಾಗಿ ಮನೆಯ ಸಮೀಪವಿರುವ, ರಸ್ತೆ ಪಕ್ಕದಲ್ಲಿರುವ ಎಲ್ಲಾ ಕೃಷಿ ಹೊಂಡಗಳಿಗೆ ಸುರಕ್ಷಿತ ಕ್ರಮ ಕೈಗೊಳ್ಳಬೇಕು.

ರೈತರು ತಮ್ಮ ಕೃಷಿ ಹೊಂಡಗಳಿಗೆ ಸೂಕ್ತವಾದ ರಕ್ಷಣಾ ಕ್ರಮಗಳನ್ನು ಆಳವಡಿಸಿ ಪ್ರಾಣ ಹಾನಿಯನ್ನು ತಪ್ಪಿಸಲು ಸಹಕರಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

2 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

3 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

16 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

22 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

23 hours ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

1 day ago