ಬೇಸಿಗೆ ಪ್ರಾರಂಭವಾಗಿದ್ದು, ಕೃಷಿ ಹೊಂಡದಲ್ಲಿ ಮಕ್ಕಳು ಈಜಲು ಮತ್ತು ಜಾನುವಾರುಗಳು ನೀರು ಕುಡಿಯಲು ಬಂದಂತಹ ಸಂದರ್ಭದಲ್ಲಿ ಬೀಳುವ ಸಂಭವವಿದ್ದು, ಈ ಹಿಂದೆ ನಿರ್ಮಿಸಿರುವ ಕೃಷಿ ಹೊಂಡಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಲು ಕೃಷಿ ಇಲಾಖೆ ರೈತರಲ್ಲಿ ಮನವಿ ಮಾಡಿದೆ.
ಕೃಷಿ ಇಲಾಖೆಯ ಬಹುಪಯೋಗಿ ಯೋಜನೆಯಾದ ಕೃಷಿ ಭಾಗ್ಯ ಯೋಜನೆಯನ್ನು 2014-15 ನೇ ಸಾಲಿನಿಂದ ಅನುಷ್ಟಾನ ಮಾಡಲಾಗಿರುತ್ತದೆ. ಬೇಸಾಯ ಮಾಡುವ ರೈತರಿಗೆ ನೀರಿನ ಸಂಗ್ರಹಣೆಗಾಗಿ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡಗಳನ್ನು ನಿರ್ಮಿಸಿಲಾಗಿರುತ್ತದೆ. ತದನಂತರ ತೋಟಗಾರಿಕಾ/ನರೇಗಾ ಯೋಜನೆಯಡಿ ಕೂಡ ಕೃಷಿ ಹೊಂಡಗಳ ನಿರ್ಮಾಣವಾಗಿರುತ್ತವೆ.
ಕೃಷಿ ಹೊಂಡಗಳಿಗೆ ಸೂಕ್ತವಾದ ರಕ್ಷಣಾ ಕ್ರಮಗಳನ್ನು ಅಳವಡಿಸದೆ ಇರುವದರಿಂದ ಕೃಷಿ ಹೊಂಡಗಳಲ್ಲಿ ಜೀವ ಹಾನಿಯಾಗುತ್ತಿರುವ ಪ್ರಕರಣಗಳು ದಾಖಲಾಗುತ್ತಿವೆ. ಈ ಕುರಿತು ರೈತರಲ್ಲಿ ಅರಿವು ಮೂಡಿಸುವ ಕ್ರಮವನ್ನು ಕೈಗೊಳ್ಳಲಾಗಿದೆ.
ಕೃಷಿ ಹೊಂಡದ ಸುತ್ತಲು ತಂತಿ ಬೇಲಿ / ನೆರಳು ಪರದೆ / ತಮ್ಮಲ್ಲಿ ಲಭ್ಯವಿರುವ ಸಂಪನ್ಮೂಲಗಳಿಂದ ಬೇಲಿ ಆಳವಡಿಸುವುದು ಕಡ್ಡಾಯವಾಗಿರುತ್ತದೆ. ಕೃಷಿ ಹೊಂಡದ ಮುಂದೆ “ಅಪಾಯ” ಮತ್ತು “ಈಜಬಾರದು” ಎಂಬ ಸೂಚನಾ ಫಲಕವನ್ನು ಕಡ್ಡಾಯವಾಗಿ ಹಾಕಲು ಈ ಮೂಲಕ ತಿಳಿಸಿದೆ.
ಕೃಷಿ ಹೊಂಡಗಳಲ್ಲಿ ಸುರಕ್ಷತಾ ಕ್ರಮವಾಗಿ ಹಗ್ಗದೊಂದಿಗೆ ಟ್ಯೂಬ್ಗಳನ್ನು ನಾಲ್ಕೂ ಮೂಲೆಗಳಲ್ಲಿ ಇಳಿ ಬಿಡಲು ತಿಳಿಸಿದೆ.
ಈ ನಿಟ್ಟಿನಲ್ಲಿ ರೈತ ಬಾಂಧವರು ತಮ್ಮ ಜಮೀನಿನಲ್ಲಿರುವ ಮುಖ್ಯವಾಗಿ ಮನೆಯ ಸಮೀಪವಿರುವ, ರಸ್ತೆ ಪಕ್ಕದಲ್ಲಿರುವ ಎಲ್ಲಾ ಕೃಷಿ ಹೊಂಡಗಳಿಗೆ ಸುರಕ್ಷಿತ ಕ್ರಮ ಕೈಗೊಳ್ಳಬೇಕು.
ರೈತರು ತಮ್ಮ ಕೃಷಿ ಹೊಂಡಗಳಿಗೆ ಸೂಕ್ತವಾದ ರಕ್ಷಣಾ ಕ್ರಮಗಳನ್ನು ಆಳವಡಿಸಿ ಪ್ರಾಣ ಹಾನಿಯನ್ನು ತಪ್ಪಿಸಲು ಸಹಕರಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…