ಬೇಸಿಗೆ ಪ್ರಾರಂಭವಾಗಿದ್ದು, ಕೃಷಿ ಹೊಂಡದಲ್ಲಿ ಮಕ್ಕಳು ಈಜಲು ಮತ್ತು ಜಾನುವಾರುಗಳು ನೀರು ಕುಡಿಯಲು ಬಂದಂತಹ ಸಂದರ್ಭದಲ್ಲಿ ಬೀಳುವ ಸಂಭವವಿದ್ದು, ಈ ಹಿಂದೆ ನಿರ್ಮಿಸಿರುವ ಕೃಷಿ ಹೊಂಡಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಲು ಕೃಷಿ ಇಲಾಖೆ ರೈತರಲ್ಲಿ ಮನವಿ ಮಾಡಿದೆ.
ಕೃಷಿ ಇಲಾಖೆಯ ಬಹುಪಯೋಗಿ ಯೋಜನೆಯಾದ ಕೃಷಿ ಭಾಗ್ಯ ಯೋಜನೆಯನ್ನು 2014-15 ನೇ ಸಾಲಿನಿಂದ ಅನುಷ್ಟಾನ ಮಾಡಲಾಗಿರುತ್ತದೆ. ಬೇಸಾಯ ಮಾಡುವ ರೈತರಿಗೆ ನೀರಿನ ಸಂಗ್ರಹಣೆಗಾಗಿ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡಗಳನ್ನು ನಿರ್ಮಿಸಿಲಾಗಿರುತ್ತದೆ. ತದನಂತರ ತೋಟಗಾರಿಕಾ/ನರೇಗಾ ಯೋಜನೆಯಡಿ ಕೂಡ ಕೃಷಿ ಹೊಂಡಗಳ ನಿರ್ಮಾಣವಾಗಿರುತ್ತವೆ.
ಕೃಷಿ ಹೊಂಡಗಳಿಗೆ ಸೂಕ್ತವಾದ ರಕ್ಷಣಾ ಕ್ರಮಗಳನ್ನು ಅಳವಡಿಸದೆ ಇರುವದರಿಂದ ಕೃಷಿ ಹೊಂಡಗಳಲ್ಲಿ ಜೀವ ಹಾನಿಯಾಗುತ್ತಿರುವ ಪ್ರಕರಣಗಳು ದಾಖಲಾಗುತ್ತಿವೆ. ಈ ಕುರಿತು ರೈತರಲ್ಲಿ ಅರಿವು ಮೂಡಿಸುವ ಕ್ರಮವನ್ನು ಕೈಗೊಳ್ಳಲಾಗಿದೆ.
ಕೃಷಿ ಹೊಂಡದ ಸುತ್ತಲು ತಂತಿ ಬೇಲಿ / ನೆರಳು ಪರದೆ / ತಮ್ಮಲ್ಲಿ ಲಭ್ಯವಿರುವ ಸಂಪನ್ಮೂಲಗಳಿಂದ ಬೇಲಿ ಆಳವಡಿಸುವುದು ಕಡ್ಡಾಯವಾಗಿರುತ್ತದೆ. ಕೃಷಿ ಹೊಂಡದ ಮುಂದೆ “ಅಪಾಯ” ಮತ್ತು “ಈಜಬಾರದು” ಎಂಬ ಸೂಚನಾ ಫಲಕವನ್ನು ಕಡ್ಡಾಯವಾಗಿ ಹಾಕಲು ಈ ಮೂಲಕ ತಿಳಿಸಿದೆ.
ಕೃಷಿ ಹೊಂಡಗಳಲ್ಲಿ ಸುರಕ್ಷತಾ ಕ್ರಮವಾಗಿ ಹಗ್ಗದೊಂದಿಗೆ ಟ್ಯೂಬ್ಗಳನ್ನು ನಾಲ್ಕೂ ಮೂಲೆಗಳಲ್ಲಿ ಇಳಿ ಬಿಡಲು ತಿಳಿಸಿದೆ.
ಈ ನಿಟ್ಟಿನಲ್ಲಿ ರೈತ ಬಾಂಧವರು ತಮ್ಮ ಜಮೀನಿನಲ್ಲಿರುವ ಮುಖ್ಯವಾಗಿ ಮನೆಯ ಸಮೀಪವಿರುವ, ರಸ್ತೆ ಪಕ್ಕದಲ್ಲಿರುವ ಎಲ್ಲಾ ಕೃಷಿ ಹೊಂಡಗಳಿಗೆ ಸುರಕ್ಷಿತ ಕ್ರಮ ಕೈಗೊಳ್ಳಬೇಕು.
ರೈತರು ತಮ್ಮ ಕೃಷಿ ಹೊಂಡಗಳಿಗೆ ಸೂಕ್ತವಾದ ರಕ್ಷಣಾ ಕ್ರಮಗಳನ್ನು ಆಳವಡಿಸಿ ಪ್ರಾಣ ಹಾನಿಯನ್ನು ತಪ್ಪಿಸಲು ಸಹಕರಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…