ಬೇಸಿಗೆ ಪ್ರಾರಂಭವಾಗಿದ್ದು, ಕೃಷಿ ಹೊಂಡದಲ್ಲಿ ಮಕ್ಕಳು ಈಜಲು ಮತ್ತು ಜಾನುವಾರುಗಳು ನೀರು ಕುಡಿಯಲು ಬಂದಂತಹ ಸಂದರ್ಭದಲ್ಲಿ ಬೀಳುವ ಸಂಭವವಿದ್ದು, ಈ ಹಿಂದೆ ನಿರ್ಮಿಸಿರುವ ಕೃಷಿ ಹೊಂಡಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಲು ಕೃಷಿ ಇಲಾಖೆ ರೈತರಲ್ಲಿ ಮನವಿ ಮಾಡಿದೆ.
ಕೃಷಿ ಇಲಾಖೆಯ ಬಹುಪಯೋಗಿ ಯೋಜನೆಯಾದ ಕೃಷಿ ಭಾಗ್ಯ ಯೋಜನೆಯನ್ನು 2014-15 ನೇ ಸಾಲಿನಿಂದ ಅನುಷ್ಟಾನ ಮಾಡಲಾಗಿರುತ್ತದೆ. ಬೇಸಾಯ ಮಾಡುವ ರೈತರಿಗೆ ನೀರಿನ ಸಂಗ್ರಹಣೆಗಾಗಿ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡಗಳನ್ನು ನಿರ್ಮಿಸಿಲಾಗಿರುತ್ತದೆ. ತದನಂತರ ತೋಟಗಾರಿಕಾ/ನರೇಗಾ ಯೋಜನೆಯಡಿ ಕೂಡ ಕೃಷಿ ಹೊಂಡಗಳ ನಿರ್ಮಾಣವಾಗಿರುತ್ತವೆ.
ಕೃಷಿ ಹೊಂಡಗಳಿಗೆ ಸೂಕ್ತವಾದ ರಕ್ಷಣಾ ಕ್ರಮಗಳನ್ನು ಅಳವಡಿಸದೆ ಇರುವದರಿಂದ ಕೃಷಿ ಹೊಂಡಗಳಲ್ಲಿ ಜೀವ ಹಾನಿಯಾಗುತ್ತಿರುವ ಪ್ರಕರಣಗಳು ದಾಖಲಾಗುತ್ತಿವೆ. ಈ ಕುರಿತು ರೈತರಲ್ಲಿ ಅರಿವು ಮೂಡಿಸುವ ಕ್ರಮವನ್ನು ಕೈಗೊಳ್ಳಲಾಗಿದೆ.
ಕೃಷಿ ಹೊಂಡದ ಸುತ್ತಲು ತಂತಿ ಬೇಲಿ / ನೆರಳು ಪರದೆ / ತಮ್ಮಲ್ಲಿ ಲಭ್ಯವಿರುವ ಸಂಪನ್ಮೂಲಗಳಿಂದ ಬೇಲಿ ಆಳವಡಿಸುವುದು ಕಡ್ಡಾಯವಾಗಿರುತ್ತದೆ. ಕೃಷಿ ಹೊಂಡದ ಮುಂದೆ “ಅಪಾಯ” ಮತ್ತು “ಈಜಬಾರದು” ಎಂಬ ಸೂಚನಾ ಫಲಕವನ್ನು ಕಡ್ಡಾಯವಾಗಿ ಹಾಕಲು ಈ ಮೂಲಕ ತಿಳಿಸಿದೆ.
ಕೃಷಿ ಹೊಂಡಗಳಲ್ಲಿ ಸುರಕ್ಷತಾ ಕ್ರಮವಾಗಿ ಹಗ್ಗದೊಂದಿಗೆ ಟ್ಯೂಬ್ಗಳನ್ನು ನಾಲ್ಕೂ ಮೂಲೆಗಳಲ್ಲಿ ಇಳಿ ಬಿಡಲು ತಿಳಿಸಿದೆ.
ಈ ನಿಟ್ಟಿನಲ್ಲಿ ರೈತ ಬಾಂಧವರು ತಮ್ಮ ಜಮೀನಿನಲ್ಲಿರುವ ಮುಖ್ಯವಾಗಿ ಮನೆಯ ಸಮೀಪವಿರುವ, ರಸ್ತೆ ಪಕ್ಕದಲ್ಲಿರುವ ಎಲ್ಲಾ ಕೃಷಿ ಹೊಂಡಗಳಿಗೆ ಸುರಕ್ಷಿತ ಕ್ರಮ ಕೈಗೊಳ್ಳಬೇಕು.
ರೈತರು ತಮ್ಮ ಕೃಷಿ ಹೊಂಡಗಳಿಗೆ ಸೂಕ್ತವಾದ ರಕ್ಷಣಾ ಕ್ರಮಗಳನ್ನು ಆಳವಡಿಸಿ ಪ್ರಾಣ ಹಾನಿಯನ್ನು ತಪ್ಪಿಸಲು ಸಹಕರಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…