ಬೇಸಿಗೆ ಪ್ರಾರಂಭವಾಗಿದ್ದು, ಕೃಷಿ ಹೊಂಡದಲ್ಲಿ ಮಕ್ಕಳು ಈಜಲು ಮತ್ತು ಜಾನುವಾರುಗಳು ನೀರು ಕುಡಿಯಲು ಬಂದಂತಹ ಸಂದರ್ಭದಲ್ಲಿ ಬೀಳುವ ಸಂಭವವಿದ್ದು, ಈ ಹಿಂದೆ ನಿರ್ಮಿಸಿರುವ ಕೃಷಿ ಹೊಂಡಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಲು ಕೃಷಿ ಇಲಾಖೆ ರೈತರಲ್ಲಿ ಮನವಿ ಮಾಡಿದೆ.
ಕೃಷಿ ಇಲಾಖೆಯ ಬಹುಪಯೋಗಿ ಯೋಜನೆಯಾದ ಕೃಷಿ ಭಾಗ್ಯ ಯೋಜನೆಯನ್ನು 2014-15 ನೇ ಸಾಲಿನಿಂದ ಅನುಷ್ಟಾನ ಮಾಡಲಾಗಿರುತ್ತದೆ. ಬೇಸಾಯ ಮಾಡುವ ರೈತರಿಗೆ ನೀರಿನ ಸಂಗ್ರಹಣೆಗಾಗಿ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡಗಳನ್ನು ನಿರ್ಮಿಸಿಲಾಗಿರುತ್ತದೆ. ತದನಂತರ ತೋಟಗಾರಿಕಾ/ನರೇಗಾ ಯೋಜನೆಯಡಿ ಕೂಡ ಕೃಷಿ ಹೊಂಡಗಳ ನಿರ್ಮಾಣವಾಗಿರುತ್ತವೆ.
ಕೃಷಿ ಹೊಂಡಗಳಿಗೆ ಸೂಕ್ತವಾದ ರಕ್ಷಣಾ ಕ್ರಮಗಳನ್ನು ಅಳವಡಿಸದೆ ಇರುವದರಿಂದ ಕೃಷಿ ಹೊಂಡಗಳಲ್ಲಿ ಜೀವ ಹಾನಿಯಾಗುತ್ತಿರುವ ಪ್ರಕರಣಗಳು ದಾಖಲಾಗುತ್ತಿವೆ. ಈ ಕುರಿತು ರೈತರಲ್ಲಿ ಅರಿವು ಮೂಡಿಸುವ ಕ್ರಮವನ್ನು ಕೈಗೊಳ್ಳಲಾಗಿದೆ.
ಕೃಷಿ ಹೊಂಡದ ಸುತ್ತಲು ತಂತಿ ಬೇಲಿ / ನೆರಳು ಪರದೆ / ತಮ್ಮಲ್ಲಿ ಲಭ್ಯವಿರುವ ಸಂಪನ್ಮೂಲಗಳಿಂದ ಬೇಲಿ ಆಳವಡಿಸುವುದು ಕಡ್ಡಾಯವಾಗಿರುತ್ತದೆ. ಕೃಷಿ ಹೊಂಡದ ಮುಂದೆ “ಅಪಾಯ” ಮತ್ತು “ಈಜಬಾರದು” ಎಂಬ ಸೂಚನಾ ಫಲಕವನ್ನು ಕಡ್ಡಾಯವಾಗಿ ಹಾಕಲು ಈ ಮೂಲಕ ತಿಳಿಸಿದೆ.
ಕೃಷಿ ಹೊಂಡಗಳಲ್ಲಿ ಸುರಕ್ಷತಾ ಕ್ರಮವಾಗಿ ಹಗ್ಗದೊಂದಿಗೆ ಟ್ಯೂಬ್ಗಳನ್ನು ನಾಲ್ಕೂ ಮೂಲೆಗಳಲ್ಲಿ ಇಳಿ ಬಿಡಲು ತಿಳಿಸಿದೆ.
ಈ ನಿಟ್ಟಿನಲ್ಲಿ ರೈತ ಬಾಂಧವರು ತಮ್ಮ ಜಮೀನಿನಲ್ಲಿರುವ ಮುಖ್ಯವಾಗಿ ಮನೆಯ ಸಮೀಪವಿರುವ, ರಸ್ತೆ ಪಕ್ಕದಲ್ಲಿರುವ ಎಲ್ಲಾ ಕೃಷಿ ಹೊಂಡಗಳಿಗೆ ಸುರಕ್ಷಿತ ಕ್ರಮ ಕೈಗೊಳ್ಳಬೇಕು.
ರೈತರು ತಮ್ಮ ಕೃಷಿ ಹೊಂಡಗಳಿಗೆ ಸೂಕ್ತವಾದ ರಕ್ಷಣಾ ಕ್ರಮಗಳನ್ನು ಆಳವಡಿಸಿ ಪ್ರಾಣ ಹಾನಿಯನ್ನು ತಪ್ಪಿಸಲು ಸಹಕರಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…