ಕೃಷಿ ಹೊಂಡಗಳಿಗೆ ತಂತಿ ಬೇಲಿ ನಿರ್ಮಿಸಿ ಅನಾಹುತ ತಪ್ಪಿಸಿ- ಕೃಷಿ ಹೊಂಡ ಬಳಿ “ಅಪಾಯ” ಮತ್ತು “ಈಜಬಾರದು” ಎಂಬ ಸೂಚನಾ ಫಲಕ ಅಳವಡಿಸಿ

ಬೇಸಿಗೆ ಪ್ರಾರಂಭವಾಗಿದ್ದು, ಕೃಷಿ ಹೊಂಡದಲ್ಲಿ ಮಕ್ಕಳು ಈಜಲು ಮತ್ತು ಜಾನುವಾರುಗಳು ನೀರು ಕುಡಿಯಲು ಬಂದಂತಹ ಸಂದರ್ಭದಲ್ಲಿ ಬೀಳುವ ಸಂಭವವಿದ್ದು, ಈ ಹಿಂದೆ ನಿರ್ಮಿಸಿರುವ ಕೃಷಿ ಹೊಂಡಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಲು ಕೃಷಿ ಇಲಾಖೆ ರೈತರಲ್ಲಿ ಮನವಿ ಮಾಡಿದೆ.

ಕೃಷಿ ಇಲಾಖೆಯ ಬಹುಪಯೋಗಿ ಯೋಜನೆಯಾದ ಕೃಷಿ ಭಾಗ್ಯ ಯೋಜನೆಯನ್ನು 2014-15 ನೇ ಸಾಲಿನಿಂದ ಅನುಷ್ಟಾನ ಮಾಡಲಾಗಿರುತ್ತದೆ. ಬೇಸಾಯ ಮಾಡುವ ರೈತರಿಗೆ ನೀರಿನ ಸಂಗ್ರಹಣೆಗಾಗಿ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡಗಳನ್ನು ನಿರ್ಮಿಸಿಲಾಗಿರುತ್ತದೆ. ತದನಂತರ ತೋಟಗಾರಿಕಾ/ನರೇಗಾ ಯೋಜನೆಯಡಿ ಕೂಡ ಕೃಷಿ ಹೊಂಡಗಳ ನಿರ್ಮಾಣವಾಗಿರುತ್ತವೆ.

ಕೃಷಿ ಹೊಂಡಗಳಿಗೆ ಸೂಕ್ತವಾದ ರಕ್ಷಣಾ ಕ್ರಮಗಳನ್ನು ಅಳವಡಿಸದೆ ಇರುವದರಿಂದ ಕೃಷಿ ಹೊಂಡಗಳಲ್ಲಿ ಜೀವ ಹಾನಿಯಾಗುತ್ತಿರುವ ಪ್ರಕರಣಗಳು ದಾಖಲಾಗುತ್ತಿವೆ. ಈ ಕುರಿತು ರೈತರಲ್ಲಿ ಅರಿವು ಮೂಡಿಸುವ ಕ್ರಮವನ್ನು ಕೈಗೊಳ್ಳಲಾಗಿದೆ.

ಕೃಷಿ ಹೊಂಡದ ಸುತ್ತಲು ತಂತಿ ಬೇಲಿ / ನೆರಳು ಪರದೆ / ತಮ್ಮಲ್ಲಿ ಲಭ್ಯವಿರುವ ಸಂಪನ್ಮೂಲಗಳಿಂದ ಬೇಲಿ ಆಳವಡಿಸುವುದು ಕಡ್ಡಾಯವಾಗಿರುತ್ತದೆ. ಕೃಷಿ ಹೊಂಡದ ಮುಂದೆ “ಅಪಾಯ” ಮತ್ತು “ಈಜಬಾರದು” ಎಂಬ ಸೂಚನಾ ಫಲಕವನ್ನು ಕಡ್ಡಾಯವಾಗಿ ಹಾಕಲು ಈ ಮೂಲಕ ತಿಳಿಸಿದೆ.

ಕೃಷಿ ಹೊಂಡಗಳಲ್ಲಿ ಸುರಕ್ಷತಾ ಕ್ರಮವಾಗಿ ಹಗ್ಗದೊಂದಿಗೆ ಟ್ಯೂಬ್‌ಗಳನ್ನು ನಾಲ್ಕೂ ಮೂಲೆಗಳಲ್ಲಿ ಇಳಿ ಬಿಡಲು ತಿಳಿಸಿದೆ.

ಈ ನಿಟ್ಟಿನಲ್ಲಿ ರೈತ ಬಾಂಧವರು ತಮ್ಮ ಜಮೀನಿನಲ್ಲಿರುವ ಮುಖ್ಯವಾಗಿ ಮನೆಯ ಸಮೀಪವಿರುವ, ರಸ್ತೆ ಪಕ್ಕದಲ್ಲಿರುವ ಎಲ್ಲಾ ಕೃಷಿ ಹೊಂಡಗಳಿಗೆ ಸುರಕ್ಷಿತ ಕ್ರಮ ಕೈಗೊಳ್ಳಬೇಕು.

ರೈತರು ತಮ್ಮ ಕೃಷಿ ಹೊಂಡಗಳಿಗೆ ಸೂಕ್ತವಾದ ರಕ್ಷಣಾ ಕ್ರಮಗಳನ್ನು ಆಳವಡಿಸಿ ಪ್ರಾಣ ಹಾನಿಯನ್ನು ತಪ್ಪಿಸಲು ಸಹಕರಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

3 hours ago

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

8 hours ago

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

19 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

24 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago