ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು ಮಧ್ಯಾಹ್ನ ನಡೆದಿದೆ…
ಮೃತ ವ್ಯಕ್ತಿಯನ್ನು ಮಾಗಡಿ ರಸ್ತೆಯ ದಾಸರಹಳ್ಳಿ ನಿವಾಸಿ ಶಿವಕುಮಾರ್(34), ಗುರುತಿಸಲಾಗಿದೆ..
ನಿನ್ನೆ ಸೋಲಾರ್ ಅಳವಡಿಸಲು ಜನರೇಟರ್ ತರಸಿದ್ದೇವು. ಕೆಲಸ ಮುಗಿದ ನಂತರ ಇಂದು ಜನರೇಟರ್ ನ್ನು ವಾಪಸ್ ತೆಗೆದುಕೊಂಡು ಹೋಗಲು ಟಾಟಾ ಏಸ್ ವಾಹನವನ್ನು ಕರೆಸಿದ್ದೇವು. ಡ್ರೈವರ್ ಜೊತೆ ಡ್ರೈವರ್ ಅಕ್ಕನ ಮಗ ಹಾಗೂ ಅಕ್ಕನ ಮಗನ ಸ್ನೇಹಿತ ಸೇರಿ ಇಬ್ಬರು ಹುಡುಗರು ಬಂದಿದ್ದರು.
ನಾವು ನಮ್ಮ ಪಾಡಿಗೆ ಟಾಟಾ ಏಸ್ ಗೆ ಜನರೇಟರ್ ಇಡುವಷ್ಟರಲ್ಲಿ ಡ್ರೈವರ್ ಅಕ್ಕನ ಮಗನ ಸ್ನೇಹಿತ ಶಿವಕುಮಾರ್ ಕೃಷಿ ಹೊಂಡ ನೋಡಿಕೊಂಡು ಬರುತ್ತೇನೆ ಎಂದು ಹೇಳುತ್ತಾನೆ. ಆಗ ನಾವು ಬೇಡ ಎಂದು ಹೇಳಿ ನಮ್ಮ ಕೆಲಸ ಮುಂದುವರಿಸಿದೆವು. ನಮ್ಮನ್ನು ಯಾಮಾರಿಸಿ ಕೃಷಿ ಹೊಂಡ ಬಳಿ ಹೋಗಿ ಲಾಕ್ ತೆಗೆದು ಈಜಾಡಲು ಧುಮಕ್ಕುತ್ತಾನೆ. ಹೋಗಿ ನೋಡುವಷ್ಟರಲ್ಲಿ ಆತನ ಜೀವ ಹೋಗಿತ್ತು ಎಂದು ಕೃಷಿ ಹೊಂಡ ಮಾಲೀಕ ಶಿವಕುಮಾರ್ ತಿಳಿಸಿದ್ದಾರೆ..
ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…..
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…