Categories: ಕೋಲಾರ

ಕೃಷಿ ಹೊಂಡಾಗಳಲ್ಲಿ ಗಣೇಶ ವಿಸರ್ಜನೆ ಮಾಡದಂತೆ ಜಾಗೃತಿ ಮೂಡಿಸಲು ರೈತ ಸಂಘ ಅಗ್ರಹ

ಕೋಲಾರ: ಗಣೇಶ ವಿಸರ್ಜನೆಯನ್ನು ಕೃಷಿ ಹೊಂಡಗಳಲ್ಲಿ ಮಾಡದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರ ಪತ್ರದ ಮುಖಾಂತರ ಜಾಗೃತಿ ಮೂಡಿಸಿ ಟೆಮೋಟೋ ಹಾಗೂ ಗಡ್ಡೆಕೋಸಿಗೆ ಬಾದಿಸುತ್ತಿರುವ ರೋಗ ನಿಯಂತ್ರಣಕ್ಕೆ ಗುಣಮಟ್ಟದ ಔಷಧಿ ವಿತರಣೆ ಮಾಡಿ ನಷ್ಟವಾಗಿರುವ ಪ್ರತಿ ಎಕರೆಗೂ 2 ಲಕ್ಷ ಪರಿಹಾರ ನೀಡುವಂತೆ ರೈತ ಸಂಘದಿಂದ ಸಹಾಯಕ ಕೃಷಿ ನಿರ್ದೇಶಕರ ಮೂಲಕ ಕೃಷಿ ಮಂತ್ರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಲಕ್ಷಾಂತರ ರೂಪಾಯಿ ಅನುದಾನದಲ್ಲಿ ನಿರ್ಮಿಸಿರುವ ರೈತರಿಗೆ ಅನುಕುಲವಾಗುವಂತಹ ಕೃಷಿ ಹೊಂಡಾಗಳು ಸಮರ್ಪಕವಾಗಿ ನಿರ್ವಹಣೆ ಇಲ್ಲದೆ, ಮೃತ್ಯ ಕೂಪಗಳಾಗಿ ಮಾರ್ಪಪಟ್ಟಿರುರುವುದು ದುರಾದೃಷ್ಟಕರ ಬಾಳಿ ಭವಿಷ್ಯದ ಜೀವನ ಸಾಗಿಸಬೇಕಾದ ನೂರಾರು ಮಕ್ಕಳು ಕೃಷಿ ಹೊಂಡದಲ್ಲಿ ಈಜಾಡಲು ಹೋಗಿ ಪ್ರಾಣ ಕಳೆದುಕೊಂಡಿರುವ ನೂರಾರು ಉದಾಹರಣೆಗಳು ಕಣ್ಣು ಮುಂದೆಯೇ ಇದ್ದರೂ ಕೃಷಿ ಅಧಿಕಾರಿಗಳು,. ಕೃಷಿ ಹೊಂಡಾಗಳಿಗೆ ಬೇಲಿ ಅಳವಡಿಸಿ ಜಾಗೃತಿ ಮೂಡಿಸುವಲ್ಲಿ ವಿಫಲವಾಗಿದ್ದಾರೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಅಧಿಕಾರಿಗಳ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾಡಳಿತ ಪೊಲೀಸ್ ಇಲಾಖೆ, ಆದೇಶದಂತೆ ಕಡ್ಡಾಯವಾಗಿ ಅನುಮತಿ ಪಡೆದು ಯಾವುದೇ ಅಹಿತಕರ ಘಟನೆ ನಡೆಯದಂತೆ ಆಯೋಜಕರು ಜಾಗೃತಿ ಮೂಡಿಸಬೇಕು. ಕೃಷಿ ಹೊಂಡಗಳಲ್ಲಿ ಮಕ್ಕಳು ಗಣೇಶ ವಿಸರ್ಜನೆ ಮಾಡದಂತೆ ಜಾಗೃತಿ ಮೂಡಿಸಬೇಕೆಂದು ಒತ್ತಾಯಿಸಿದರು.

ಜಿಲ್ಲೆಯ ರೈತರ ಅವ್ಯವಸ್ಥೆ ಕೃಷಿ ಇಲಾಖೆಯ ಬೇಜವಾಬ್ದಾರಿಯನ್ನು ಬಂಡವಾಳವಾಗಿಸಿಕೊಂಡಿರುವ ಆಂಧ್ರ ತಮಿಳುನಾಡಿಯನಲ್ಲಿ ನಿಷೇದವಾಗಿರುವ ನಕಲಿ ಔಷಧಿಗಳನ್ನು ಗಡಿಭಾಗದ ಕೆಲವು ಅಂಗಡಿಗಳ ಮಾಲೀಕರ ಜೊತೆ ಶಾಮೀಲಾಗಿ ಹೆಚ್ಚಿನ ಹಣ ಬಳಸಬಹುದು ಎಂಬ ದುರಾಸೆಯಿಂದ ಟೆಮೋಟೋ ಮತ್ತು ಗಡ್ಡೆ ಕೋಸಿಗೆ ಗುಣಮಟ್ಟದ ಬಹು ರಾಷ್ಟ್ರೀಯ ಔಷಧಿ ಕಂಪನಿಗಳ ಹೆಸರಿನಲ್ಲಿ ನಕಲಿ ಬಯೋ ಔಷಧಿಗಳನ್ನು ರಾತ್ರಿ ವೇಳೆಯಲ್ಲಿ ಮಾರಾಟ ಮಾಡುತ್ತಿರುವುದು ದುರ ದೃಷ್ಟಕರ ಎಂದು ವಿಷಾದ ವ್ಯಕ್ತಪಡಿಸಿದರು.

ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್ ಮಾತನಾಡಿ 5 ವರ್ಷಗಳಿಂದ ಜಿಲ್ಲೆಯ ಟೆಮೊಟೋ ಹಾಗೂ ಕೋಸು ಬೆಳೆಗಾರರ ಜೀವ ಹಿಂಡುತ್ತಿರುವ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಂತಹ ಬೆಳೆ ಕಣ್ಣು ಮುಂದೆಯೇ ರೋಗಗಕ್ಕೆ ತುರ್ತ್ತಾಗಿ ನಿಯಂತ್ರಣಕ್ಕೆ ಬಾರದೆ ಸಂಕಷ್ಟದಲ್ಲಿರುವ ರೈತರ ಸಮಸ್ಯೆಯನ್ನು ಕೃಷಿ ಇಲಾಖೆ ಏಕೆ ಗಂಭೀರವಾಗಿ ಪರಿಗಣಿಸುತ್ತಿಲ್ಲ.? 10 ರೂಪಾಯಿ ಸೊಳ್ಳೆಬತ್ತಿಯಲ್ಲಿ ಕನಿಷ್ಠ 70 ರಷ್ಟು ಸೊಳ್ಳೆ ಮನೆಯಲ್ಲಿ ಸಾಯುತ್ತವೆ. ಆದರೆ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಖರೀದಿ ಮಾಡಿ ಸಿಂಪರಣೆ ಮಾಡುವ ಔಷಧಿಗಳಿಂದ ಕನಿಷ್ಠ ತೋಟದ ಎಲೆಯ ಮೇಲೆ ಇರುವ ಸೊಳ್ಳೆ ಸಹ ಸಾಯುತ್ತಿಲ್ಲ. ಅಷ್ಟರ ಮಟ್ಟಿಗೆ ಔಷಧಿಗಳ ಗುಣಮಟ್ಟ ಕಳಪೆಯಾಗಿದ್ದರೂ ವಿತರಣೆ ಮಾಡುವ ಕಂಪನಿಗಳ ವಿರುದ್ದ ಕ್ರಿಮಿನಲ್ ಮೊಕದಮ್ಮೆ ದಾಖಲೆ ಮಾಡಲು ಅಧಿಕಾರಿಗಳು ಹಿಂದೇಟು ಹಾಕಲು ಕಾರಣವೇಣು ಎಂದು ಪ್ರಶ್ನೆ ಮಾಡಿದರು.

ಮನವಿ ನೀಡುವಾಗ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಕಿರಣ್, ಚಾಂದ್‌ಪಾಷ, ಕದರಿನತ್ತ ಅಪ್ಪೋಜಿರಾವ್, ಕಾಮಸಮುದ್ರ ಮುನಿಕೃಷ್ಣ, ಮುನಿರಾಜು, ವಿಶ್ವ, ರಾಮಸಾಗರ ವೇಣು, ಪಾರುಕ್, ವಿಜಯ್‌ಪಲ್, ವಿಶ್ವ, ಮುನಿಯಪ್ಪ, ಗಿರೀಶ್, ಶೈಲಜ, ರತ್ನಮ್ಮ, ಭಾಗ್ಯಮ್ಮ, ವೆಂಕಟಮ್ಮ, ಮುನಿರತ್ನಮ್ಮ, ಗೌರಮ್ಮ, ಮುಂತಾದವರು ಇದ್ದರು.

Ramesh Babu

Journalist

Recent Posts

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

3 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

4 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

5 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

5 hours ago

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

9 hours ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

17 hours ago