Categories: ಕೋಲಾರ

ಕೃಷಿ ಹೊಂಡಾಗಳಲ್ಲಿ ಗಣೇಶ ವಿಸರ್ಜನೆ ಮಾಡದಂತೆ ಜಾಗೃತಿ ಮೂಡಿಸಲು ರೈತ ಸಂಘ ಅಗ್ರಹ

ಕೋಲಾರ: ಗಣೇಶ ವಿಸರ್ಜನೆಯನ್ನು ಕೃಷಿ ಹೊಂಡಗಳಲ್ಲಿ ಮಾಡದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರ ಪತ್ರದ ಮುಖಾಂತರ ಜಾಗೃತಿ ಮೂಡಿಸಿ ಟೆಮೋಟೋ ಹಾಗೂ ಗಡ್ಡೆಕೋಸಿಗೆ ಬಾದಿಸುತ್ತಿರುವ ರೋಗ ನಿಯಂತ್ರಣಕ್ಕೆ ಗುಣಮಟ್ಟದ ಔಷಧಿ ವಿತರಣೆ ಮಾಡಿ ನಷ್ಟವಾಗಿರುವ ಪ್ರತಿ ಎಕರೆಗೂ 2 ಲಕ್ಷ ಪರಿಹಾರ ನೀಡುವಂತೆ ರೈತ ಸಂಘದಿಂದ ಸಹಾಯಕ ಕೃಷಿ ನಿರ್ದೇಶಕರ ಮೂಲಕ ಕೃಷಿ ಮಂತ್ರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಲಕ್ಷಾಂತರ ರೂಪಾಯಿ ಅನುದಾನದಲ್ಲಿ ನಿರ್ಮಿಸಿರುವ ರೈತರಿಗೆ ಅನುಕುಲವಾಗುವಂತಹ ಕೃಷಿ ಹೊಂಡಾಗಳು ಸಮರ್ಪಕವಾಗಿ ನಿರ್ವಹಣೆ ಇಲ್ಲದೆ, ಮೃತ್ಯ ಕೂಪಗಳಾಗಿ ಮಾರ್ಪಪಟ್ಟಿರುರುವುದು ದುರಾದೃಷ್ಟಕರ ಬಾಳಿ ಭವಿಷ್ಯದ ಜೀವನ ಸಾಗಿಸಬೇಕಾದ ನೂರಾರು ಮಕ್ಕಳು ಕೃಷಿ ಹೊಂಡದಲ್ಲಿ ಈಜಾಡಲು ಹೋಗಿ ಪ್ರಾಣ ಕಳೆದುಕೊಂಡಿರುವ ನೂರಾರು ಉದಾಹರಣೆಗಳು ಕಣ್ಣು ಮುಂದೆಯೇ ಇದ್ದರೂ ಕೃಷಿ ಅಧಿಕಾರಿಗಳು,. ಕೃಷಿ ಹೊಂಡಾಗಳಿಗೆ ಬೇಲಿ ಅಳವಡಿಸಿ ಜಾಗೃತಿ ಮೂಡಿಸುವಲ್ಲಿ ವಿಫಲವಾಗಿದ್ದಾರೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಅಧಿಕಾರಿಗಳ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾಡಳಿತ ಪೊಲೀಸ್ ಇಲಾಖೆ, ಆದೇಶದಂತೆ ಕಡ್ಡಾಯವಾಗಿ ಅನುಮತಿ ಪಡೆದು ಯಾವುದೇ ಅಹಿತಕರ ಘಟನೆ ನಡೆಯದಂತೆ ಆಯೋಜಕರು ಜಾಗೃತಿ ಮೂಡಿಸಬೇಕು. ಕೃಷಿ ಹೊಂಡಗಳಲ್ಲಿ ಮಕ್ಕಳು ಗಣೇಶ ವಿಸರ್ಜನೆ ಮಾಡದಂತೆ ಜಾಗೃತಿ ಮೂಡಿಸಬೇಕೆಂದು ಒತ್ತಾಯಿಸಿದರು.

ಜಿಲ್ಲೆಯ ರೈತರ ಅವ್ಯವಸ್ಥೆ ಕೃಷಿ ಇಲಾಖೆಯ ಬೇಜವಾಬ್ದಾರಿಯನ್ನು ಬಂಡವಾಳವಾಗಿಸಿಕೊಂಡಿರುವ ಆಂಧ್ರ ತಮಿಳುನಾಡಿಯನಲ್ಲಿ ನಿಷೇದವಾಗಿರುವ ನಕಲಿ ಔಷಧಿಗಳನ್ನು ಗಡಿಭಾಗದ ಕೆಲವು ಅಂಗಡಿಗಳ ಮಾಲೀಕರ ಜೊತೆ ಶಾಮೀಲಾಗಿ ಹೆಚ್ಚಿನ ಹಣ ಬಳಸಬಹುದು ಎಂಬ ದುರಾಸೆಯಿಂದ ಟೆಮೋಟೋ ಮತ್ತು ಗಡ್ಡೆ ಕೋಸಿಗೆ ಗುಣಮಟ್ಟದ ಬಹು ರಾಷ್ಟ್ರೀಯ ಔಷಧಿ ಕಂಪನಿಗಳ ಹೆಸರಿನಲ್ಲಿ ನಕಲಿ ಬಯೋ ಔಷಧಿಗಳನ್ನು ರಾತ್ರಿ ವೇಳೆಯಲ್ಲಿ ಮಾರಾಟ ಮಾಡುತ್ತಿರುವುದು ದುರ ದೃಷ್ಟಕರ ಎಂದು ವಿಷಾದ ವ್ಯಕ್ತಪಡಿಸಿದರು.

ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್ ಮಾತನಾಡಿ 5 ವರ್ಷಗಳಿಂದ ಜಿಲ್ಲೆಯ ಟೆಮೊಟೋ ಹಾಗೂ ಕೋಸು ಬೆಳೆಗಾರರ ಜೀವ ಹಿಂಡುತ್ತಿರುವ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಂತಹ ಬೆಳೆ ಕಣ್ಣು ಮುಂದೆಯೇ ರೋಗಗಕ್ಕೆ ತುರ್ತ್ತಾಗಿ ನಿಯಂತ್ರಣಕ್ಕೆ ಬಾರದೆ ಸಂಕಷ್ಟದಲ್ಲಿರುವ ರೈತರ ಸಮಸ್ಯೆಯನ್ನು ಕೃಷಿ ಇಲಾಖೆ ಏಕೆ ಗಂಭೀರವಾಗಿ ಪರಿಗಣಿಸುತ್ತಿಲ್ಲ.? 10 ರೂಪಾಯಿ ಸೊಳ್ಳೆಬತ್ತಿಯಲ್ಲಿ ಕನಿಷ್ಠ 70 ರಷ್ಟು ಸೊಳ್ಳೆ ಮನೆಯಲ್ಲಿ ಸಾಯುತ್ತವೆ. ಆದರೆ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಖರೀದಿ ಮಾಡಿ ಸಿಂಪರಣೆ ಮಾಡುವ ಔಷಧಿಗಳಿಂದ ಕನಿಷ್ಠ ತೋಟದ ಎಲೆಯ ಮೇಲೆ ಇರುವ ಸೊಳ್ಳೆ ಸಹ ಸಾಯುತ್ತಿಲ್ಲ. ಅಷ್ಟರ ಮಟ್ಟಿಗೆ ಔಷಧಿಗಳ ಗುಣಮಟ್ಟ ಕಳಪೆಯಾಗಿದ್ದರೂ ವಿತರಣೆ ಮಾಡುವ ಕಂಪನಿಗಳ ವಿರುದ್ದ ಕ್ರಿಮಿನಲ್ ಮೊಕದಮ್ಮೆ ದಾಖಲೆ ಮಾಡಲು ಅಧಿಕಾರಿಗಳು ಹಿಂದೇಟು ಹಾಕಲು ಕಾರಣವೇಣು ಎಂದು ಪ್ರಶ್ನೆ ಮಾಡಿದರು.

ಮನವಿ ನೀಡುವಾಗ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಕಿರಣ್, ಚಾಂದ್‌ಪಾಷ, ಕದರಿನತ್ತ ಅಪ್ಪೋಜಿರಾವ್, ಕಾಮಸಮುದ್ರ ಮುನಿಕೃಷ್ಣ, ಮುನಿರಾಜು, ವಿಶ್ವ, ರಾಮಸಾಗರ ವೇಣು, ಪಾರುಕ್, ವಿಜಯ್‌ಪಲ್, ವಿಶ್ವ, ಮುನಿಯಪ್ಪ, ಗಿರೀಶ್, ಶೈಲಜ, ರತ್ನಮ್ಮ, ಭಾಗ್ಯಮ್ಮ, ವೆಂಕಟಮ್ಮ, ಮುನಿರತ್ನಮ್ಮ, ಗೌರಮ್ಮ, ಮುಂತಾದವರು ಇದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 hour ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

12 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

13 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

13 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

16 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

19 hours ago