Categories: ಕೋಲಾರ

ಕೃಷ್ಣಾಪುರ ಗ್ರಾಮದಲ್ಲಿಯೇ ಮತಗಟ್ಟೆ ಮರು ಸ್ಥಾಪಿಸುವರೆಗೂ ಮತದಾನ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ

ಕೋಲಾರ: ತಾಲೂಕಿನ ವೇಮಗಲ್ ಹೋಬಳಿಯ ಅಮ್ಮನಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೃಷ್ಣಾಪುರ ಗ್ರಾಮದಲ್ಲಿಯೇ ಮತಗಟ್ಟೆ ಕೇಂದ್ರವನ್ನು ಮರು ಸ್ಥಾಪಿಸಬೇಕು ಇಲ್ಲದೇ ಹೋದರೆ ಲೋಕಸಭಾ ಚುನಾವಣೆಯ ಮತದಾನವನ್ನು ಬಹಿಷ್ಕಾರ ಮಾಡುವುದಾಗಿ ಗ್ರಾಮಸ್ಥರು ವಾಗ್ದಾನ ಮಾಡಿದರು.

ಈ ಸಂದರ್ಭದಲ್ಲಿ ಪ್ರಗತಿಪರ ರೈತ ರಾಜಣ್ಣ ಮಾತನಾಡಿ ಸುಮಾರು 30 ವರ್ಷಗಳಿಂದ ಕೃಷ್ಣಾಪುರ ಗ್ರಾಮದ ಮತಗಟ್ಟೆಯಲ್ಲಿಯೇ ಗ್ರಾಮಸ್ಥರು ಮತದಾನವನ್ನು ಮಾಡಿಕೊಂಡು ಬಂದಿದ್ದು ಈ ಚುನಾವಣೆಯಲ್ಲಿ ಅಮ್ಮನಲ್ಲೂರು ಗ್ರಾಮಕ್ಕೆ ಮತದಾನದ ಕೇಂದ್ರವನ್ನು ವರ್ಗಾಯಿಸಲಾಗಿದೆ ಎಂದು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಕೃಷ್ಣಾಪುರ ಗ್ರಾಮದಲ್ಲಿ ಸುಮಾರು ೧೪೦ ಮನೆಗಳಿದ್ದು ೩೬೦ಕ್ಕೂ ಹೆಚ್ಚು ಮತದಾರರಿದ್ದಾರೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಗಡಿ ಭಾಗದಲ್ಲಿ ನಮ್ಮ ಗ್ರಾಮವಿದ್ದು ಜಿಲ್ಲಾಧಿಕಾರಿಯು 400 ಮತದಾರರಿಲ್ಲ ಎಂಬ ಕಾರಣವನ್ನು ನೀಡಿ ಅಮ್ಮನಲ್ಲೂರು ಗ್ರಾಮಕ್ಕೆ ಮತಗಟ್ಟೆ ಕೇಂದ್ರವನ್ನು ವರ್ಗಾವಣೆ ಮಾಡಲಾಗಿದೆ ಸುಮಾರು ೩ ಕಿಲೋ ಮೀಟರ್ ದೂರವಿರುವ ಅಮ್ಮನಲ್ಲೂರು ಗ್ರಾಮಕ್ಕೆ ಬಸ್ ಸೌಲಭ್ಯವಿಲ್ಲ ಗ್ರಾಮದ ಹಿರಿಯರು, ಅಂಗವಿಕಲರು ಗ್ರಾಮಕ್ಕೆ ಹೋಗಿ ಮತದಾನ ಮಾಡಿ ಬರಲು ಸಾಧ್ಯವಾಗುವುದಿಲ್ಲ ಕೂಡಲೇ ಕೃಷ್ಣಾಪುರ ಗ್ರಾಮದಲ್ಲಿಯೇ ಕೇಂದ್ರವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಗ್ರಾಮದ ಹಿರಿಯ ಮುಖಂಡ ಶ್ರೀನಿವಾಸ್ ಮಾತನಾಡಿ ಕಳೆದ ಎಲ್ಲಾ ಚುನಾವಣೆಯಲ್ಲಿ ನಮ್ಮ ಗ್ರಾಮದಲ್ಲಿಯೇ ಮತದಾನ ಮಾಡಿದ್ದೇವೆ ಹಾಗಾಗಿ ತಮ್ಮ ಗ್ರಾಮದಲ್ಲಿಯೇ ಮತಗಟ್ಟೆ ಸ್ಥಾಪಿಸಬೇಕೆಂದು ಗ್ರಾಮದ ಪ್ರತಿಯೊಬ್ಬರ ಒತ್ತಾಯವಾಗಿದೆ ಈ ಬಾರಿಯ ಚುನಾವಣೆಯಲ್ಲಿ ತಮ್ಮ ಗ್ರಾಮದಲ್ಲಿ ಯಾವುದೇ ಪಕ್ಷದ ಅಭ್ಯರ್ಥಿಗಳು ಚುನಾವಣಾ ಪ್ರಚಾರ ಮಾಡುವುದಕ್ಕೆ ಅವಕಾಶವಿಲ್ಲ ಗ್ರಾಮಸ್ಥರು ಸಹ ಯಾವುದೇ ಪಕ್ಷದ ಪರ ಪ್ರಚಾರದಲ್ಲಿ ಭಾಗವಹಿಸಯವುದಿಲ್ಲ ಗ್ರಾಮದಲ್ಲಿ ಮತಗಟ್ಟೆ ಸ್ಥಾಪಿಸುವರೆಗೂ ಮತದಾನ ಮಾಡುವುದಿಲ್ಲ ಎಂದರು

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ರಾಮಚಂದ್ರಪ್ಪ, ಗ್ರಾಮಸ್ಥರಾದ ಮಂಜುನಾಥ್, ಸತೀಶ್ ಕುಮಾರ್, ಲಕ್ಷ್ಮಣ್,ಮುನೇಗೌಡ, ಬತ್ತೇಶ್, ರಾಜಶೇಖರ್, ಕೆಂಪೇಗೌಡ, ವೆಂಕಟಪ್ಪ, ಮುನಿರಾಜು, ನರೇಶ್ ಮುಂತಾದವರು ಇದ್ದರು

Ramesh Babu

Journalist

Recent Posts

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

6 hours ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

6 hours ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

6 hours ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

9 hours ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

15 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

17 hours ago