Categories: ಕೋಲಾರ

ಕೃಷ್ಣಾಪುರ ಗ್ರಾಮದಲ್ಲಿಯೇ ಮತಗಟ್ಟೆ ಮರು ಸ್ಥಾಪಿಸುವರೆಗೂ ಮತದಾನ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ

ಕೋಲಾರ: ತಾಲೂಕಿನ ವೇಮಗಲ್ ಹೋಬಳಿಯ ಅಮ್ಮನಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೃಷ್ಣಾಪುರ ಗ್ರಾಮದಲ್ಲಿಯೇ ಮತಗಟ್ಟೆ ಕೇಂದ್ರವನ್ನು ಮರು ಸ್ಥಾಪಿಸಬೇಕು ಇಲ್ಲದೇ ಹೋದರೆ ಲೋಕಸಭಾ ಚುನಾವಣೆಯ ಮತದಾನವನ್ನು ಬಹಿಷ್ಕಾರ ಮಾಡುವುದಾಗಿ ಗ್ರಾಮಸ್ಥರು ವಾಗ್ದಾನ ಮಾಡಿದರು.

ಈ ಸಂದರ್ಭದಲ್ಲಿ ಪ್ರಗತಿಪರ ರೈತ ರಾಜಣ್ಣ ಮಾತನಾಡಿ ಸುಮಾರು 30 ವರ್ಷಗಳಿಂದ ಕೃಷ್ಣಾಪುರ ಗ್ರಾಮದ ಮತಗಟ್ಟೆಯಲ್ಲಿಯೇ ಗ್ರಾಮಸ್ಥರು ಮತದಾನವನ್ನು ಮಾಡಿಕೊಂಡು ಬಂದಿದ್ದು ಈ ಚುನಾವಣೆಯಲ್ಲಿ ಅಮ್ಮನಲ್ಲೂರು ಗ್ರಾಮಕ್ಕೆ ಮತದಾನದ ಕೇಂದ್ರವನ್ನು ವರ್ಗಾಯಿಸಲಾಗಿದೆ ಎಂದು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಕೃಷ್ಣಾಪುರ ಗ್ರಾಮದಲ್ಲಿ ಸುಮಾರು ೧೪೦ ಮನೆಗಳಿದ್ದು ೩೬೦ಕ್ಕೂ ಹೆಚ್ಚು ಮತದಾರರಿದ್ದಾರೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಗಡಿ ಭಾಗದಲ್ಲಿ ನಮ್ಮ ಗ್ರಾಮವಿದ್ದು ಜಿಲ್ಲಾಧಿಕಾರಿಯು 400 ಮತದಾರರಿಲ್ಲ ಎಂಬ ಕಾರಣವನ್ನು ನೀಡಿ ಅಮ್ಮನಲ್ಲೂರು ಗ್ರಾಮಕ್ಕೆ ಮತಗಟ್ಟೆ ಕೇಂದ್ರವನ್ನು ವರ್ಗಾವಣೆ ಮಾಡಲಾಗಿದೆ ಸುಮಾರು ೩ ಕಿಲೋ ಮೀಟರ್ ದೂರವಿರುವ ಅಮ್ಮನಲ್ಲೂರು ಗ್ರಾಮಕ್ಕೆ ಬಸ್ ಸೌಲಭ್ಯವಿಲ್ಲ ಗ್ರಾಮದ ಹಿರಿಯರು, ಅಂಗವಿಕಲರು ಗ್ರಾಮಕ್ಕೆ ಹೋಗಿ ಮತದಾನ ಮಾಡಿ ಬರಲು ಸಾಧ್ಯವಾಗುವುದಿಲ್ಲ ಕೂಡಲೇ ಕೃಷ್ಣಾಪುರ ಗ್ರಾಮದಲ್ಲಿಯೇ ಕೇಂದ್ರವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಗ್ರಾಮದ ಹಿರಿಯ ಮುಖಂಡ ಶ್ರೀನಿವಾಸ್ ಮಾತನಾಡಿ ಕಳೆದ ಎಲ್ಲಾ ಚುನಾವಣೆಯಲ್ಲಿ ನಮ್ಮ ಗ್ರಾಮದಲ್ಲಿಯೇ ಮತದಾನ ಮಾಡಿದ್ದೇವೆ ಹಾಗಾಗಿ ತಮ್ಮ ಗ್ರಾಮದಲ್ಲಿಯೇ ಮತಗಟ್ಟೆ ಸ್ಥಾಪಿಸಬೇಕೆಂದು ಗ್ರಾಮದ ಪ್ರತಿಯೊಬ್ಬರ ಒತ್ತಾಯವಾಗಿದೆ ಈ ಬಾರಿಯ ಚುನಾವಣೆಯಲ್ಲಿ ತಮ್ಮ ಗ್ರಾಮದಲ್ಲಿ ಯಾವುದೇ ಪಕ್ಷದ ಅಭ್ಯರ್ಥಿಗಳು ಚುನಾವಣಾ ಪ್ರಚಾರ ಮಾಡುವುದಕ್ಕೆ ಅವಕಾಶವಿಲ್ಲ ಗ್ರಾಮಸ್ಥರು ಸಹ ಯಾವುದೇ ಪಕ್ಷದ ಪರ ಪ್ರಚಾರದಲ್ಲಿ ಭಾಗವಹಿಸಯವುದಿಲ್ಲ ಗ್ರಾಮದಲ್ಲಿ ಮತಗಟ್ಟೆ ಸ್ಥಾಪಿಸುವರೆಗೂ ಮತದಾನ ಮಾಡುವುದಿಲ್ಲ ಎಂದರು

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ರಾಮಚಂದ್ರಪ್ಪ, ಗ್ರಾಮಸ್ಥರಾದ ಮಂಜುನಾಥ್, ಸತೀಶ್ ಕುಮಾರ್, ಲಕ್ಷ್ಮಣ್,ಮುನೇಗೌಡ, ಬತ್ತೇಶ್, ರಾಜಶೇಖರ್, ಕೆಂಪೇಗೌಡ, ವೆಂಕಟಪ್ಪ, ಮುನಿರಾಜು, ನರೇಶ್ ಮುಂತಾದವರು ಇದ್ದರು

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

13 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago